ಬ್ರೇಕಿಂಗ್ ನ್ಯೂಸ್
10-06-23 09:06 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಫಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ ಬಿಡುಗಡೆಯಾಗುವುದನ್ನು ತಡೆಯಲು ವಿಫಲಗೊಂಡ ಮಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಜೂನ್ 4ರಂದು ಪ್ರಕಟಗೊಂಡ ವಿವಿಧ ಮಾಧ್ಯಮ ವರದಿಗಳ ಆಧಾರದಲ್ಲಿ ಲೋಕಾಯುಕ್ತ ಕಾಯಿದೆಯ ಸೆಕ್ಷನ್ 7(2) ಮತ್ತು 9(3-ಎ) ಅಡಿಯಲ್ಲಿ ಪ್ರಕರಣ ಕೈಗೆತ್ತಿಕೊಂಡಿರುವ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಮುಂದಿನ 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಪಾಲಿಕೆ ಉಪಾಯುಕ್ತ (ಆಡಳಿತ), ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಹಾಗೂ ಕೆಐಎಡಿಬಿ ಕಾರ್ಯಕಾರಿ ಅಭಿಯಂತರರಿಗೆ ಸೂಚನೆ ನೀಡಿದೆ. ಅಲ್ಲದೇ 15 ದಿನಗಳ ಒಳಗಡೆ ವಿವರವಾದ ವರದಿ ಸಲ್ಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಉಪ ಲೋಕಾಯುಕ್ತರು ಸೂಚಿಸಿದ್ದಾರೆ.


ಒಳಚರಂಡಿ ಮೂಲಕ ನದಿಗೆ ತ್ಯಾಜ್ಯ ಬಿಡುಗಡೆ ಆಗುತ್ತಿರುವುದು ಜಲಚರಗಳಿಗೆ ಮಾತ್ರವಲ್ಲ, ಆ ನೀರನ್ನು ಬಳಸುವ ಮನುಷ್ಯರಿಗೂ ಪ್ರಾಣಿಗಳಿಗೂ ಹಾನಿಕರವಾಗಿದೆ ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಉಪ ಲೋಕಾಯುಕ್ತರು ಪ್ರಶ್ನೆ ಮಾಡಿದ್ದಾರೆ. ಪಣಂಬೂರು ಮತ್ತು ಬೈಕಂಪಾಡಿ ಪರಿಸರದಲ್ಲಿ ಕಾರ್ಯಾಚರಿಸುವ ಹಲವು ಕೈಗಾರಿಕೆಗಳು ತ್ಯಾಜ್ಯ ಸಂಸ್ಕರಣೆ ನಡೆಸದೆ ಅವುಗಳನ್ನು ನೇರವಾಗಿ ನದಿಗೆ ಬಿಡುತ್ತಿವೆ. ಇದರಿಂದ ಸ್ಥಳೀಯ ಕೆರೆ, ಬಾವಿಗಳ ನೀರು ಕಲುಷಿತಗೊಂಡಿದೆ. ತೋಡುಗಳ ಮೂಲಕ ತ್ಯಾಜ್ಯ ನೇರವಾಗಿ ಫಲ್ಗುಣಿ ನದಿ ಸೇರುತ್ತದೆ. ಈ ಬಗ್ಗೆ ಸ್ಥಳೀಯರು ಪ್ರಬಲ ಆಕ್ಷೇಪ ಎತ್ತಿದ್ದರೂ, ಪತಂಜಲಿ ಕಂಪನಿಯ ರುಚಿ ಗೋಲ್ಡ್ ಘಟಕದ ಮಾಲಿನ್ಯ ದಿನವೂ ಕಾಲುವೆ ಸೇರುತ್ತದೆ.
Ruchi gold waste chemical merges with Palguni river, Lokayukta files case against Mangalore city corporation over negligence.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm