ಬ್ರೇಕಿಂಗ್ ನ್ಯೂಸ್
10-06-23 09:06 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಫಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ ಬಿಡುಗಡೆಯಾಗುವುದನ್ನು ತಡೆಯಲು ವಿಫಲಗೊಂಡ ಮಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಜೂನ್ 4ರಂದು ಪ್ರಕಟಗೊಂಡ ವಿವಿಧ ಮಾಧ್ಯಮ ವರದಿಗಳ ಆಧಾರದಲ್ಲಿ ಲೋಕಾಯುಕ್ತ ಕಾಯಿದೆಯ ಸೆಕ್ಷನ್ 7(2) ಮತ್ತು 9(3-ಎ) ಅಡಿಯಲ್ಲಿ ಪ್ರಕರಣ ಕೈಗೆತ್ತಿಕೊಂಡಿರುವ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಮುಂದಿನ 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಪಾಲಿಕೆ ಉಪಾಯುಕ್ತ (ಆಡಳಿತ), ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಹಾಗೂ ಕೆಐಎಡಿಬಿ ಕಾರ್ಯಕಾರಿ ಅಭಿಯಂತರರಿಗೆ ಸೂಚನೆ ನೀಡಿದೆ. ಅಲ್ಲದೇ 15 ದಿನಗಳ ಒಳಗಡೆ ವಿವರವಾದ ವರದಿ ಸಲ್ಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಉಪ ಲೋಕಾಯುಕ್ತರು ಸೂಚಿಸಿದ್ದಾರೆ.
ಒಳಚರಂಡಿ ಮೂಲಕ ನದಿಗೆ ತ್ಯಾಜ್ಯ ಬಿಡುಗಡೆ ಆಗುತ್ತಿರುವುದು ಜಲಚರಗಳಿಗೆ ಮಾತ್ರವಲ್ಲ, ಆ ನೀರನ್ನು ಬಳಸುವ ಮನುಷ್ಯರಿಗೂ ಪ್ರಾಣಿಗಳಿಗೂ ಹಾನಿಕರವಾಗಿದೆ ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಉಪ ಲೋಕಾಯುಕ್ತರು ಪ್ರಶ್ನೆ ಮಾಡಿದ್ದಾರೆ. ಪಣಂಬೂರು ಮತ್ತು ಬೈಕಂಪಾಡಿ ಪರಿಸರದಲ್ಲಿ ಕಾರ್ಯಾಚರಿಸುವ ಹಲವು ಕೈಗಾರಿಕೆಗಳು ತ್ಯಾಜ್ಯ ಸಂಸ್ಕರಣೆ ನಡೆಸದೆ ಅವುಗಳನ್ನು ನೇರವಾಗಿ ನದಿಗೆ ಬಿಡುತ್ತಿವೆ. ಇದರಿಂದ ಸ್ಥಳೀಯ ಕೆರೆ, ಬಾವಿಗಳ ನೀರು ಕಲುಷಿತಗೊಂಡಿದೆ. ತೋಡುಗಳ ಮೂಲಕ ತ್ಯಾಜ್ಯ ನೇರವಾಗಿ ಫಲ್ಗುಣಿ ನದಿ ಸೇರುತ್ತದೆ. ಈ ಬಗ್ಗೆ ಸ್ಥಳೀಯರು ಪ್ರಬಲ ಆಕ್ಷೇಪ ಎತ್ತಿದ್ದರೂ, ಪತಂಜಲಿ ಕಂಪನಿಯ ರುಚಿ ಗೋಲ್ಡ್ ಘಟಕದ ಮಾಲಿನ್ಯ ದಿನವೂ ಕಾಲುವೆ ಸೇರುತ್ತದೆ.
Ruchi gold waste chemical merges with Palguni river, Lokayukta files case against Mangalore city corporation over negligence.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm