ಬ್ರೇಕಿಂಗ್ ನ್ಯೂಸ್
11-06-23 09:29 pm Udupi Correspondent ಕರಾವಳಿ
ಉಡುಪಿ, ಜೂನ್ 11: ಜಿಲ್ಲೆಯಲ್ಲಿ ಶಕ್ತಿ ಯೋಜನೆಗೆ ಚಾಲನೆ ಕೊಟ್ಟ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು 'ಉಡುಪಿಯಲ್ಲಿ ಸರ್ಕಾರಿ ಬಸ್ಗಳ ಸಂಖ್ಯೆ ಹೆಚ್ಚಿಸುವ' ಭರವಸೆ ಕೊಟ್ಟಿದ್ದಾರೆ.
ಕಾಂಗ್ರೆಸ್ನ ಐದು ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಇಂದು ರಾಜ್ಯಾದ್ಯಂತ ಅನುಷ್ಠಾನಕ್ಕೆ ಬಂದಿದೆ. ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಶಕ್ತಿ ಯೋಜನೆಗೆ ಚಾಲನೆ ಕೊಟ್ಟರು. ಅದೇ ವೇಳೆ ಎಲ್ಲ ಜಿಲ್ಲೆಗಳ ಉಸ್ತುವಾರಿ ಸಚಿವರೂ ಕೂಡ ತಮ್ಮ ಜಿಲ್ಲೆಗಳಲ್ಲಿ 'ಶಕ್ತಿ' ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದ್ದಾರೆ. ಅದರಂತೆ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಉಡುಪಿ ಜಿಲ್ಲೆಯಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ಕೊಟ್ಟು, ಉಚಿತ ಪಾಸ್ ವಿತರಿಸಿ ಬಳಿಕ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸಿದ್ದಾರೆ. ಈ ವೇಳೆ ಅವರೊಂದಿಗೆ ಅನೇಕ ಮಹಿಳೆಯರು ಇದ್ದರು. ನೂಕುನುಗ್ಗಲು ಕೂಡ ಉಂಟಾಗಿತ್ತು.


ಹೀಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ 'ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ಗಳ ಸಂಖ್ಯೆ ಎಷ್ಟಿದೆ ಎಂದು ಮಾಹಿತಿ ಪಡೆದಿದ್ದೇನೆ. ಕೇವಲ 95 ಬಸ್ಗಳು ಮಾತ್ರ ಇವೆ. ಈ ಭಾಗದಲ್ಲಿ ಖಾಸಗಿ ಬಸ್ಗಳೇ ಜಾಸ್ತಿ. ಹೀಗಾಗಿ ಉಡುಪಿ ಮಹಿಳೆಯರು ಸರ್ಕಾರದ ಯೋಜನೆಯಿಂದ ವಂಚಿತರಾಗುತ್ತಾರೆ. ಉಡುಪಿ ಭಾಗದಲ್ಲಿ ಸರ್ಕಾರಿ ಬಸ್ಗಳ ಸಂಖ್ಯೆ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಮಾತಾಡುತ್ತೇನೆ. ಸಾರಿಗೆ ಸಚಿವರ ಗಮನಕ್ಕೂ ತರುತ್ತೇನೆ' ಎಂದಿದ್ದಾರೆ. 'ಉಡುಪಿಯಲ್ಲಿ ಪುರುಷರಿಗಿಂತಲೂ ಮಹಿಳೆಯರೇ ಜಾಸ್ತಿ ಇದ್ದಾರೆ. ನಾನು ಇಲ್ಲಿನ ಉಸ್ತುವಾರಿ ಸಚಿವೆಯಾಗಿ ಶಕ್ತಿ ಯೋಜನೆಯ ಲಾಭ ಇಲ್ಲಿನ ಮಹಿಳೆಯರಿಗೆ ಸಿಗುವಂತೆ ಮಾಡುತ್ತೇನೆ. ವಿದ್ಯಾರ್ಥಿನಿಯರಿಗೆ ಅನುಕೂಲವಾಗಬೇಕು' ಎಂದು ಹೇಳಿದರು.
The strength of state run KSRTC buses is very low in Udupi district and efforts will be made to increase their numbers by drawing the attention of the government to this issue, said Lakshmi Hebbalkar, Minister of Women and Child Development, and Disabled and Senior Citizens Empowerment.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 05:23 pm
Udupi Correspondent
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm