ಬ್ರೇಕಿಂಗ್ ನ್ಯೂಸ್
12-06-23 04:33 pm Mangalore Correspondent ಕರಾವಳಿ
ಉಳ್ಳಾಲ, ಜೂ.12: ಬೈಕ್ ಗೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಕಳೆದ ಜೂ.4 ರ ಆದಿತ್ಯವಾರ ತಡರಾತ್ರಿ ಉಚ್ಚಿಲ, ಸಂಕೋಳಿಗೆ ಎಂಬಲ್ಲಿ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಕೋಟೆಕಾರು ಪಟ್ಟಣ ವ್ಯಾಪ್ತಿಯ ಮಾಡೂರು ವೈದ್ಯನಾಥ ದೈವಸ್ಥಾನ ರಸ್ತೆ ನಿವಾಸಿ ತೇಜಸ್ ಕುಲಾಲ್ (28) ಮೃತ ಯುವಕ. ಕಳೆದ ಜೂ.4 ರ ಆದಿತ್ಯವಾರ ತಡರಾತ್ರಿ ತೇಜಸ್ ಸಂಕೋಳಿಗೆಯ ಪೆಟ್ರೋಲ್ ಬಂಕಿಗೆ ಪೆಟ್ರೋಲ್ ತುಂಬಿಸಲು ಬೈಕಲ್ಲಿ ತೆರಳುತ್ತಿದ್ದ ವೇಳೆ ಕೇರಳ ನೋಂದಣಿಯ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಹಿಟ್ & ರನ್ ಪ್ರಕರಣ ದಾಖಲಿಸಿದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ತಲಪಾಡಿ ಟೋಲ್ ಗೇಟ್ನ ಸಿಸಿಟಿವಿ ದೃಶ್ಯಾವಳಿ ಆಧಾರದಲ್ಲಿ ಮರುದಿನವೇ ಘಟನೆಗೆ ಕಾರಣವಾದ ಕಾರನ್ನ ಜಪ್ತಿ ಗೊಳಿಸಿದ್ದರು.

ಗಂಭೀರ ಗಾಯಗೊಂಡಿದ್ದ ತೇಜಸನ್ನು ತಕ್ಷಣಕ್ಕೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದರು. ನಂತರ ಮಂಗಳೂರಿನ ಕೆಎಮ್ ಸಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ತೇಜಸ್ ಅವಿವಾಹಿತರಾಗಿದ್ದು ಸುಝಕಿ ಕಂಪನಿಯಲ್ಲಿ ಮೆಕ್ಯಾನಿಕ್ ಆಗಿದ್ದರು. ತೇಜಸ್ ಬಜರಂಗದಳ ಮಾಡೂರು ಶಾಖೆಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಮೃತರು ತಂದೆ ರಾಮ ಕುಲಾಲ್, ತಾಯಿ ರೇವತಿ ಮತ್ತು ಅಣ್ಣ ರವೀಂದ್ರ ಅವರನ್ನ ಅಗಲಿದ್ದಾರೆ.
Mangalore Hit and Run accident at Uchila, bike rider dies in hospital. The deceased has been identified as Tejas Kulal (28).
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 11:52 am
HK News Staffer
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm