ಬ್ರೇಕಿಂಗ್ ನ್ಯೂಸ್
13-06-23 05:56 pm Mangalore Correspondent ಕರಾವಳಿ
ಮಂಗಳೂರು, ಜೂನ್ 13: ರಾಜ್ಯ ಸರಕಾರದ ಉಚಿತ ಬಸ್ ಪ್ರಯಾಣದ ಯೋಜನೆಗೆ ಮಹಿಳೆಯರು ಫಿದಾ ಆಗಿದ್ದಾರೆ. ಮಲೆನಾಡು, ಉತ್ತರ ಕರ್ನಾಟಕ ಭಾಗದ ಜನರು ಸಾಗರೋಪಾದಿಯಾಗಿ ಬಸ್ಸಿನಲ್ಲಿ ಕರಾವಳಿಯತ್ತ ಬರುತ್ತಿದ್ದಾರೆ. ಸರ್ಕಾರಿ ಬಸ್ ಫುಲ್ ರಶ್ ಆಗುತ್ತಿದ್ದು, ಕರಾವಳಿಯ ಪುಣ್ಯಕ್ಷೇತ್ರಗಳಲ್ಲಿ ಜನಜಂಗುಳಿ ಏರ್ಪಟ್ಟಿದೆ.
ಕರಾವಳಿಯ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಕ್ಷೇತ್ರಗಳಲ್ಲಿ ಭಾರೀ ರಶ್ ಏರ್ಪಟ್ಟಿದ್ದು ಜನಸಾಗರವೇ ಹರಿದು ಬರುತ್ತಿದೆ. ಮಹಿಳೆಯರು ಗುಂಪು ಗುಂಪಾಗಿ ಬಂದು ಸೇರುತ್ತಿದ್ದು, ಕೆಎಸ್ಸಾರ್ಟಿಸಿ ಬಸ್ಸುಗಳೆಲ್ಲ ಫುಲ್ ರಶ್ ಆಗಿದೆ. ಎರಡು ದಿನಗಳ ಹಿಂದಷ್ಟೇ ಸಾಮಾನ್ಯ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣದ ಯೋಜನೆ ಜಾರಿಯಾಗಿತ್ತು. ಅಷ್ಟರಲ್ಲೇ ಹಳ್ಳಿಗಾಡಿನ ಜನರು ಸರ್ಕಾರಿ ಬಸ್ ಹತ್ತ ತೊಡಗಿದ್ದಾರೆ. ಕೋಲಾರ, ಬೆಂಗಳೂರು, ಚಿತ್ರದುರ್ಗ, ತುಮಕೂರು ಅಲ್ಲದೆ, ಉತ್ತರ ಕರ್ನಾಟಕದ ಮಂದಿಯೂ ಅತ್ತಿತ್ತ ರಾಜ್ಯ ಸುತ್ತಲು ಆರಂಭಿಸಿದ್ದಾರೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಸರಕಾರಿ ಬಸ್ಸುಗಳೆಲ್ಲ ಫುಲ್ ರಶ್ ಆಗಿದ್ದು, ಪೂರ್ತಿ ತುಂಬಿಕೊಂಡೇ ಸಾಗುತ್ತಿವೆ.
ಧರ್ಮಸ್ಥಳಕ್ಕೆ ಬಂದು ಅಲ್ಲಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುವ ಬಸ್ಸುಗಳಲ್ಲಿಯೂ ಕಾಲಿಡುವುದಕ್ಕೂ ಸಾಧ್ಯವಾಗದ ಸ್ಥಿತಿಯಿದೆ. ಎಲ್ಲ ಬಸ್ಸುಗಳಲ್ಲಿಯೂ ಪ್ರವಾಸಿ ಮಹಿಳೆಯರೇ ತುಂಬಿಕೊಂಡಿದ್ದು, ಸ್ಥಳೀಯ ಸಾಮಾನ್ಯ ಜನರಿಗೆ ಬಸ್ಸುಗಳಲ್ಲಿ ಪ್ರಯಾಣ ಮಾಡದ ಸ್ಥಿತಿ ಎದುರಾಗಿದೆ. ದೂರದ ಉತ್ತರ ಕರ್ನಾಟಕ ಭಾಗದಿಂದ ಕರಾವಳಿಗೆ ಬರುವುದಕ್ಕೆ ಸಾಮಾನ್ಯವಾಗಿ ಸಾವಿರಾರು ರೂಪಾಯಿ ಬೇಕಿದ್ದರೆ, ಈಗ ಉಚಿತ ಪ್ರಯಾಣದಿಂದಾಗಿ ಹಳ್ಳಿ ಮಹಿಳೆಯರು ಫಿದಾ ಆದಂತಿದ್ದಾರೆ. ಮಕ್ಕಳು, ಇಡೀ ಕುಟುಂಬವನ್ನು ಕಟ್ಟಿಕೊಂಡು ದೇವರ ದರ್ಶನ ಮಾಡ್ಕೊಂಡು ಬರೋಣ ಎಂದು ಜನರೆಲ್ಲ ಯಾತ್ರೆಗೆ ಹೊರಟು ನಿಂತಿದ್ದಾರೆ.
ಜನರ ದಟ್ಟಣೆಯಿಂದಾಗಿ ಪುಣ್ಯಕ್ಷೇತ್ರಗಳು, ಪ್ರವಾಸಿ ಕೇಂದ್ರಗಳಲ್ಲಿ ವ್ಯಾಪಾರವೂ ಜೋರಾಗಿದೆ. ವ್ಯಾಪಾರ ವಹಿವಾಟಿನಿಂದ ಮಾರುಕಟ್ಟೆ ಮತ್ತೆ ಚಿಗಿತುಕೊಂಡು ಹಣದ ಚಲಾವಣೆ ಬಿರುಸು ಪಡೆದುಕೊಳ್ಳಬಹುದೆಂಬ ನಿರೀಕ್ಷೆಯೂ ಗರಿಗೆದರಿದೆ. ಸಾಮಾನ್ಯವಾಗಿ ಕುಕ್ಕೆ, ಧರ್ಮಸ್ಥಳಗಳಲ್ಲಿ ವೀಕೆಂಡ್ ದಿನಗಳಲ್ಲಿ ಜನರ ಸಂಖ್ಯೆ ಹೆಚ್ಚಿರುತ್ತದೆ. ಇದೀಗ ವಾರದ ನಡುವೆಯೂ ಜನ ಬರಲಾರಂಭಿಸಿದ್ದು ಜನರು ಉಚಿತ ಬಸ್ ನೆಪದಲ್ಲಿ ಎಲ್ಲೆಂದರಲ್ಲಿ ಪ್ರವಾಸ ಹೊರಟಿದ್ದಾರೆ.
Free rides for women in KSRTC, passengers for Dharmasthala and Kukke Temple packed.
20-05-25 03:30 pm
Bangalore Correspondent
Shashi Kumar IPS, Corruption, Hubballi, polic...
19-05-25 04:00 pm
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
20-05-25 02:36 pm
HK News Desk
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
20-05-25 02:03 pm
Mangalore Correspondent
Job Scam Mangalore, Police Suspend, Hireglow...
19-05-25 11:07 pm
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm