ಬ್ರೇಕಿಂಗ್ ನ್ಯೂಸ್
13-06-23 05:56 pm Mangalore Correspondent ಕರಾವಳಿ
ಮಂಗಳೂರು, ಜೂನ್ 13: ರಾಜ್ಯ ಸರಕಾರದ ಉಚಿತ ಬಸ್ ಪ್ರಯಾಣದ ಯೋಜನೆಗೆ ಮಹಿಳೆಯರು ಫಿದಾ ಆಗಿದ್ದಾರೆ. ಮಲೆನಾಡು, ಉತ್ತರ ಕರ್ನಾಟಕ ಭಾಗದ ಜನರು ಸಾಗರೋಪಾದಿಯಾಗಿ ಬಸ್ಸಿನಲ್ಲಿ ಕರಾವಳಿಯತ್ತ ಬರುತ್ತಿದ್ದಾರೆ. ಸರ್ಕಾರಿ ಬಸ್ ಫುಲ್ ರಶ್ ಆಗುತ್ತಿದ್ದು, ಕರಾವಳಿಯ ಪುಣ್ಯಕ್ಷೇತ್ರಗಳಲ್ಲಿ ಜನಜಂಗುಳಿ ಏರ್ಪಟ್ಟಿದೆ.
ಕರಾವಳಿಯ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಕ್ಷೇತ್ರಗಳಲ್ಲಿ ಭಾರೀ ರಶ್ ಏರ್ಪಟ್ಟಿದ್ದು ಜನಸಾಗರವೇ ಹರಿದು ಬರುತ್ತಿದೆ. ಮಹಿಳೆಯರು ಗುಂಪು ಗುಂಪಾಗಿ ಬಂದು ಸೇರುತ್ತಿದ್ದು, ಕೆಎಸ್ಸಾರ್ಟಿಸಿ ಬಸ್ಸುಗಳೆಲ್ಲ ಫುಲ್ ರಶ್ ಆಗಿದೆ. ಎರಡು ದಿನಗಳ ಹಿಂದಷ್ಟೇ ಸಾಮಾನ್ಯ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣದ ಯೋಜನೆ ಜಾರಿಯಾಗಿತ್ತು. ಅಷ್ಟರಲ್ಲೇ ಹಳ್ಳಿಗಾಡಿನ ಜನರು ಸರ್ಕಾರಿ ಬಸ್ ಹತ್ತ ತೊಡಗಿದ್ದಾರೆ. ಕೋಲಾರ, ಬೆಂಗಳೂರು, ಚಿತ್ರದುರ್ಗ, ತುಮಕೂರು ಅಲ್ಲದೆ, ಉತ್ತರ ಕರ್ನಾಟಕದ ಮಂದಿಯೂ ಅತ್ತಿತ್ತ ರಾಜ್ಯ ಸುತ್ತಲು ಆರಂಭಿಸಿದ್ದಾರೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಸರಕಾರಿ ಬಸ್ಸುಗಳೆಲ್ಲ ಫುಲ್ ರಶ್ ಆಗಿದ್ದು, ಪೂರ್ತಿ ತುಂಬಿಕೊಂಡೇ ಸಾಗುತ್ತಿವೆ.



ಧರ್ಮಸ್ಥಳಕ್ಕೆ ಬಂದು ಅಲ್ಲಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುವ ಬಸ್ಸುಗಳಲ್ಲಿಯೂ ಕಾಲಿಡುವುದಕ್ಕೂ ಸಾಧ್ಯವಾಗದ ಸ್ಥಿತಿಯಿದೆ. ಎಲ್ಲ ಬಸ್ಸುಗಳಲ್ಲಿಯೂ ಪ್ರವಾಸಿ ಮಹಿಳೆಯರೇ ತುಂಬಿಕೊಂಡಿದ್ದು, ಸ್ಥಳೀಯ ಸಾಮಾನ್ಯ ಜನರಿಗೆ ಬಸ್ಸುಗಳಲ್ಲಿ ಪ್ರಯಾಣ ಮಾಡದ ಸ್ಥಿತಿ ಎದುರಾಗಿದೆ. ದೂರದ ಉತ್ತರ ಕರ್ನಾಟಕ ಭಾಗದಿಂದ ಕರಾವಳಿಗೆ ಬರುವುದಕ್ಕೆ ಸಾಮಾನ್ಯವಾಗಿ ಸಾವಿರಾರು ರೂಪಾಯಿ ಬೇಕಿದ್ದರೆ, ಈಗ ಉಚಿತ ಪ್ರಯಾಣದಿಂದಾಗಿ ಹಳ್ಳಿ ಮಹಿಳೆಯರು ಫಿದಾ ಆದಂತಿದ್ದಾರೆ. ಮಕ್ಕಳು, ಇಡೀ ಕುಟುಂಬವನ್ನು ಕಟ್ಟಿಕೊಂಡು ದೇವರ ದರ್ಶನ ಮಾಡ್ಕೊಂಡು ಬರೋಣ ಎಂದು ಜನರೆಲ್ಲ ಯಾತ್ರೆಗೆ ಹೊರಟು ನಿಂತಿದ್ದಾರೆ.
ಜನರ ದಟ್ಟಣೆಯಿಂದಾಗಿ ಪುಣ್ಯಕ್ಷೇತ್ರಗಳು, ಪ್ರವಾಸಿ ಕೇಂದ್ರಗಳಲ್ಲಿ ವ್ಯಾಪಾರವೂ ಜೋರಾಗಿದೆ. ವ್ಯಾಪಾರ ವಹಿವಾಟಿನಿಂದ ಮಾರುಕಟ್ಟೆ ಮತ್ತೆ ಚಿಗಿತುಕೊಂಡು ಹಣದ ಚಲಾವಣೆ ಬಿರುಸು ಪಡೆದುಕೊಳ್ಳಬಹುದೆಂಬ ನಿರೀಕ್ಷೆಯೂ ಗರಿಗೆದರಿದೆ. ಸಾಮಾನ್ಯವಾಗಿ ಕುಕ್ಕೆ, ಧರ್ಮಸ್ಥಳಗಳಲ್ಲಿ ವೀಕೆಂಡ್ ದಿನಗಳಲ್ಲಿ ಜನರ ಸಂಖ್ಯೆ ಹೆಚ್ಚಿರುತ್ತದೆ. ಇದೀಗ ವಾರದ ನಡುವೆಯೂ ಜನ ಬರಲಾರಂಭಿಸಿದ್ದು ಜನರು ಉಚಿತ ಬಸ್ ನೆಪದಲ್ಲಿ ಎಲ್ಲೆಂದರಲ್ಲಿ ಪ್ರವಾಸ ಹೊರಟಿದ್ದಾರೆ.
Free rides for women in KSRTC, passengers for Dharmasthala and Kukke Temple packed.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm