ಬ್ರೇಕಿಂಗ್ ನ್ಯೂಸ್
14-06-23 09:41 pm Mangalore Correspondent ಕರಾವಳಿ
ಮಂಗಳೂರು, ಜೂನ್ 14: ಹುಬ್ಬಳ್ಳಿ ಹುಡ್ಗಿ, ಮಂಗ್ಳೂರು ಹುಡ್ಗ ಸೀರಿಯಲ್ ಹಿಂದೊಮ್ಮೆ ಟಿವಿಯಲ್ಲಿ ಹಿಟ್ ಆಗಿ ಮನೆಮಾತಾಗಿತ್ತು. ಈಗ ಅದೇ ರೀತಿ ಹುಬ್ಬಳ್ಳಿಯ ವಿವಾಹಿತ ಗೃಹಿಣಿಯೊಬ್ಬಳು ಪುತ್ತೂರಿನಲ್ಲಿದ್ದ ಪ್ರಿಯಕರನ ಹುಡುಕ್ಕೊಂಡು ಫ್ರೀ ಬಸ್ ಹತ್ಕೊಂಡು ಬಂದಿದ್ದಾಳೆ. ಅಷ್ಟೇ ಅಲ್ಲ, ತನ್ನ ಹಳೆ ಪ್ರಿಯಕರನ ಜೊತೆಗೆ ನಾಪತ್ತೆಯಾಗಿದ್ದಾಳೆ.
ಹನ್ನೊಂದು ತಿಂಗಳ ಮಗು ಹೊಂದಿರುವ ಹುಬ್ಬಳ್ಳಿ ಮೂಲದ ಮಹಿಳೆ ತನ್ನ ಗಂಡನಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ ಮಾಡುತ್ತೇನೆಂದು ಹೇಳಿ ಆಧಾರ್ ಕಾರ್ಡ್ ಹಿಡ್ಕೊಂಡು ಮನೆಯಿಂದ ಹೊರಟಿದ್ದಳು. ಬಳಿಕ ಆಧಾರ್ ಕಾರ್ಡ್ ತೋರಿಸಿ ಉಚಿತ ಸರ್ಕಾರಿ ಬಸ್ ಮೂಲಕ ಹುಬ್ಬಳ್ಳಿಯಿಂದ ನೇರವಾಗಿ ಪುತ್ತೂರಿಗೆ ಆಗಮಿಸಿದ್ದಾಳೆ. ಆಕೆಯ ಪ್ರಿಯಕರ ಪುತ್ತೂರಿನ ಕೋಡಿಂಬಾಡಿ ಸಮೀಪದಲ್ಲಿ ತೋಟದ ಕೆಲಸ ಮಾಡುತ್ತಿದ್ದ. ಪ್ರಿಯಕರನನ್ನು ನೋಡಲು ಪುತ್ತೂರಿಗೆ ಆಗಮಿಸಿದ ಮಹಿಳೆ, ಆತನ ಜೊತೆಗೆ ಪರಾರಿಯಾಗಿದ್ದಾಳೆ.

ವರ್ಷದ ಹಿಂದೆ ಮದುವೆಯಾಗಿದ್ದ ಯುವತಿ, ಅದರ ನಡುವೆಯೂ ತನ್ನ ಹಳೇ ಪ್ರಿಯಕರನ ಒಡನಾಟ ಮುಂದುವರಿಸಿದ್ದಳು. ಅದೇ ಸಲುಗೆಯಲ್ಲಿ ಗಂಡನ ಮೇಲಿನ ಕೋಪದಲ್ಲಿ ಕೈಯಲ್ಲಿ ಹಣ ಇಲ್ಲದಿದ್ದರೂ ಉಚಿತ ಬಸ್ ಪ್ರಯಾಣದ ಅವಕಾಶ ಬಳಸಿ ಪ್ರಿಯಕರನನ್ನು ಹುಡುಕುತ್ತಲೇ ದೂರದ ಪುತ್ತೂರಿಗೆ ಬಂದಿದ್ದಾಳೆ ಎನ್ನಲಾಗಿದೆ.
ಮೂರು ದಿನದಿಂದ ಮಹಿಳೆ ನಾಪತ್ತೆಯಾಗಿದ್ದಲ್ಲದೆ, ಪುತ್ತೂರಿಗೆ ಬಂದಿರೋದು ತಿಳಿಯುತ್ತಲೇ ಹುಬ್ಬಳ್ಳಿಯಿಂದ ಗಂಡನ ಮನೆಯವರು ಹಾಗೂ ಯುವತಿ ಮನೆಯವರು ಆಗಮಿಸಿ, ಮಂಗಳವಾರ ರಾತ್ರಿಯೂ ಪುತ್ತೂರಿನಲ್ಲಿ ಹುಡುಕಾಟ ನಡೆಸಿದ್ದಾರೆ. ಯುವತಿ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದು ಮನೆಯವರು ಇತ್ತ ದಿಕ್ಕಿಲ್ಲದೆ ಹುಡುಕಾಟ ಆರಂಭಿಸಿದ್ದಾರೆ.
ಕಂಗಾಲಾಗಿದ್ದ ಕುಟುಂಬಸ್ಥರಿಗೆ ಸ್ಥಳೀಯ ಕೆಲವರು ಸಹಕಾರ ನೀಡಿದ್ದು ಯುವಕ - ಯುವತಿಯನ್ನು ಹುಡುಕಿಕೊಡುವುದಾಗಿ ಭರವಸೆ ನೀಡಿದ್ದಾರೆ. ಪುತ್ತೂರು ಪೊಲೀಸರಿಗೆ ದೂರು ನೀಡಿ ಟವರ್ ಲೊಕೇಶನ್ ಪತ್ತೆ ಹಚ್ಚಿದಾಗ ಇಬ್ಬರೂ ಪುತ್ತೂರಿನಿಂದ ಸಿದ್ಧಕಟ್ಟೆಗೆ ಪರಾರಿಯಾದ ಮಾಹಿತಿ ಸಿಕ್ಕಿದೆ.
Married Women uses KSRTC free bus service from Hubbali to Puttur to see her boyfriend, and flees with him.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 11:52 am
HK News Staffer
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm