ಬ್ರೇಕಿಂಗ್ ನ್ಯೂಸ್
14-06-23 09:41 pm Mangalore Correspondent ಕರಾವಳಿ
ಮಂಗಳೂರು, ಜೂನ್ 14: ಹುಬ್ಬಳ್ಳಿ ಹುಡ್ಗಿ, ಮಂಗ್ಳೂರು ಹುಡ್ಗ ಸೀರಿಯಲ್ ಹಿಂದೊಮ್ಮೆ ಟಿವಿಯಲ್ಲಿ ಹಿಟ್ ಆಗಿ ಮನೆಮಾತಾಗಿತ್ತು. ಈಗ ಅದೇ ರೀತಿ ಹುಬ್ಬಳ್ಳಿಯ ವಿವಾಹಿತ ಗೃಹಿಣಿಯೊಬ್ಬಳು ಪುತ್ತೂರಿನಲ್ಲಿದ್ದ ಪ್ರಿಯಕರನ ಹುಡುಕ್ಕೊಂಡು ಫ್ರೀ ಬಸ್ ಹತ್ಕೊಂಡು ಬಂದಿದ್ದಾಳೆ. ಅಷ್ಟೇ ಅಲ್ಲ, ತನ್ನ ಹಳೆ ಪ್ರಿಯಕರನ ಜೊತೆಗೆ ನಾಪತ್ತೆಯಾಗಿದ್ದಾಳೆ.
ಹನ್ನೊಂದು ತಿಂಗಳ ಮಗು ಹೊಂದಿರುವ ಹುಬ್ಬಳ್ಳಿ ಮೂಲದ ಮಹಿಳೆ ತನ್ನ ಗಂಡನಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ ಮಾಡುತ್ತೇನೆಂದು ಹೇಳಿ ಆಧಾರ್ ಕಾರ್ಡ್ ಹಿಡ್ಕೊಂಡು ಮನೆಯಿಂದ ಹೊರಟಿದ್ದಳು. ಬಳಿಕ ಆಧಾರ್ ಕಾರ್ಡ್ ತೋರಿಸಿ ಉಚಿತ ಸರ್ಕಾರಿ ಬಸ್ ಮೂಲಕ ಹುಬ್ಬಳ್ಳಿಯಿಂದ ನೇರವಾಗಿ ಪುತ್ತೂರಿಗೆ ಆಗಮಿಸಿದ್ದಾಳೆ. ಆಕೆಯ ಪ್ರಿಯಕರ ಪುತ್ತೂರಿನ ಕೋಡಿಂಬಾಡಿ ಸಮೀಪದಲ್ಲಿ ತೋಟದ ಕೆಲಸ ಮಾಡುತ್ತಿದ್ದ. ಪ್ರಿಯಕರನನ್ನು ನೋಡಲು ಪುತ್ತೂರಿಗೆ ಆಗಮಿಸಿದ ಮಹಿಳೆ, ಆತನ ಜೊತೆಗೆ ಪರಾರಿಯಾಗಿದ್ದಾಳೆ.

ವರ್ಷದ ಹಿಂದೆ ಮದುವೆಯಾಗಿದ್ದ ಯುವತಿ, ಅದರ ನಡುವೆಯೂ ತನ್ನ ಹಳೇ ಪ್ರಿಯಕರನ ಒಡನಾಟ ಮುಂದುವರಿಸಿದ್ದಳು. ಅದೇ ಸಲುಗೆಯಲ್ಲಿ ಗಂಡನ ಮೇಲಿನ ಕೋಪದಲ್ಲಿ ಕೈಯಲ್ಲಿ ಹಣ ಇಲ್ಲದಿದ್ದರೂ ಉಚಿತ ಬಸ್ ಪ್ರಯಾಣದ ಅವಕಾಶ ಬಳಸಿ ಪ್ರಿಯಕರನನ್ನು ಹುಡುಕುತ್ತಲೇ ದೂರದ ಪುತ್ತೂರಿಗೆ ಬಂದಿದ್ದಾಳೆ ಎನ್ನಲಾಗಿದೆ.
ಮೂರು ದಿನದಿಂದ ಮಹಿಳೆ ನಾಪತ್ತೆಯಾಗಿದ್ದಲ್ಲದೆ, ಪುತ್ತೂರಿಗೆ ಬಂದಿರೋದು ತಿಳಿಯುತ್ತಲೇ ಹುಬ್ಬಳ್ಳಿಯಿಂದ ಗಂಡನ ಮನೆಯವರು ಹಾಗೂ ಯುವತಿ ಮನೆಯವರು ಆಗಮಿಸಿ, ಮಂಗಳವಾರ ರಾತ್ರಿಯೂ ಪುತ್ತೂರಿನಲ್ಲಿ ಹುಡುಕಾಟ ನಡೆಸಿದ್ದಾರೆ. ಯುವತಿ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದು ಮನೆಯವರು ಇತ್ತ ದಿಕ್ಕಿಲ್ಲದೆ ಹುಡುಕಾಟ ಆರಂಭಿಸಿದ್ದಾರೆ.
ಕಂಗಾಲಾಗಿದ್ದ ಕುಟುಂಬಸ್ಥರಿಗೆ ಸ್ಥಳೀಯ ಕೆಲವರು ಸಹಕಾರ ನೀಡಿದ್ದು ಯುವಕ - ಯುವತಿಯನ್ನು ಹುಡುಕಿಕೊಡುವುದಾಗಿ ಭರವಸೆ ನೀಡಿದ್ದಾರೆ. ಪುತ್ತೂರು ಪೊಲೀಸರಿಗೆ ದೂರು ನೀಡಿ ಟವರ್ ಲೊಕೇಶನ್ ಪತ್ತೆ ಹಚ್ಚಿದಾಗ ಇಬ್ಬರೂ ಪುತ್ತೂರಿನಿಂದ ಸಿದ್ಧಕಟ್ಟೆಗೆ ಪರಾರಿಯಾದ ಮಾಹಿತಿ ಸಿಕ್ಕಿದೆ.
Married Women uses KSRTC free bus service from Hubbali to Puttur to see her boyfriend, and flees with him.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
18-05-26 10:47 pm
HK News Desk
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm