ಬ್ರೇಕಿಂಗ್ ನ್ಯೂಸ್
14-06-23 09:41 pm Mangalore Correspondent ಕರಾವಳಿ
ಮಂಗಳೂರು, ಜೂನ್ 14: ಹುಬ್ಬಳ್ಳಿ ಹುಡ್ಗಿ, ಮಂಗ್ಳೂರು ಹುಡ್ಗ ಸೀರಿಯಲ್ ಹಿಂದೊಮ್ಮೆ ಟಿವಿಯಲ್ಲಿ ಹಿಟ್ ಆಗಿ ಮನೆಮಾತಾಗಿತ್ತು. ಈಗ ಅದೇ ರೀತಿ ಹುಬ್ಬಳ್ಳಿಯ ವಿವಾಹಿತ ಗೃಹಿಣಿಯೊಬ್ಬಳು ಪುತ್ತೂರಿನಲ್ಲಿದ್ದ ಪ್ರಿಯಕರನ ಹುಡುಕ್ಕೊಂಡು ಫ್ರೀ ಬಸ್ ಹತ್ಕೊಂಡು ಬಂದಿದ್ದಾಳೆ. ಅಷ್ಟೇ ಅಲ್ಲ, ತನ್ನ ಹಳೆ ಪ್ರಿಯಕರನ ಜೊತೆಗೆ ನಾಪತ್ತೆಯಾಗಿದ್ದಾಳೆ.
ಹನ್ನೊಂದು ತಿಂಗಳ ಮಗು ಹೊಂದಿರುವ ಹುಬ್ಬಳ್ಳಿ ಮೂಲದ ಮಹಿಳೆ ತನ್ನ ಗಂಡನಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ ಮಾಡುತ್ತೇನೆಂದು ಹೇಳಿ ಆಧಾರ್ ಕಾರ್ಡ್ ಹಿಡ್ಕೊಂಡು ಮನೆಯಿಂದ ಹೊರಟಿದ್ದಳು. ಬಳಿಕ ಆಧಾರ್ ಕಾರ್ಡ್ ತೋರಿಸಿ ಉಚಿತ ಸರ್ಕಾರಿ ಬಸ್ ಮೂಲಕ ಹುಬ್ಬಳ್ಳಿಯಿಂದ ನೇರವಾಗಿ ಪುತ್ತೂರಿಗೆ ಆಗಮಿಸಿದ್ದಾಳೆ. ಆಕೆಯ ಪ್ರಿಯಕರ ಪುತ್ತೂರಿನ ಕೋಡಿಂಬಾಡಿ ಸಮೀಪದಲ್ಲಿ ತೋಟದ ಕೆಲಸ ಮಾಡುತ್ತಿದ್ದ. ಪ್ರಿಯಕರನನ್ನು ನೋಡಲು ಪುತ್ತೂರಿಗೆ ಆಗಮಿಸಿದ ಮಹಿಳೆ, ಆತನ ಜೊತೆಗೆ ಪರಾರಿಯಾಗಿದ್ದಾಳೆ.

ವರ್ಷದ ಹಿಂದೆ ಮದುವೆಯಾಗಿದ್ದ ಯುವತಿ, ಅದರ ನಡುವೆಯೂ ತನ್ನ ಹಳೇ ಪ್ರಿಯಕರನ ಒಡನಾಟ ಮುಂದುವರಿಸಿದ್ದಳು. ಅದೇ ಸಲುಗೆಯಲ್ಲಿ ಗಂಡನ ಮೇಲಿನ ಕೋಪದಲ್ಲಿ ಕೈಯಲ್ಲಿ ಹಣ ಇಲ್ಲದಿದ್ದರೂ ಉಚಿತ ಬಸ್ ಪ್ರಯಾಣದ ಅವಕಾಶ ಬಳಸಿ ಪ್ರಿಯಕರನನ್ನು ಹುಡುಕುತ್ತಲೇ ದೂರದ ಪುತ್ತೂರಿಗೆ ಬಂದಿದ್ದಾಳೆ ಎನ್ನಲಾಗಿದೆ.
ಮೂರು ದಿನದಿಂದ ಮಹಿಳೆ ನಾಪತ್ತೆಯಾಗಿದ್ದಲ್ಲದೆ, ಪುತ್ತೂರಿಗೆ ಬಂದಿರೋದು ತಿಳಿಯುತ್ತಲೇ ಹುಬ್ಬಳ್ಳಿಯಿಂದ ಗಂಡನ ಮನೆಯವರು ಹಾಗೂ ಯುವತಿ ಮನೆಯವರು ಆಗಮಿಸಿ, ಮಂಗಳವಾರ ರಾತ್ರಿಯೂ ಪುತ್ತೂರಿನಲ್ಲಿ ಹುಡುಕಾಟ ನಡೆಸಿದ್ದಾರೆ. ಯುವತಿ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದು ಮನೆಯವರು ಇತ್ತ ದಿಕ್ಕಿಲ್ಲದೆ ಹುಡುಕಾಟ ಆರಂಭಿಸಿದ್ದಾರೆ.
ಕಂಗಾಲಾಗಿದ್ದ ಕುಟುಂಬಸ್ಥರಿಗೆ ಸ್ಥಳೀಯ ಕೆಲವರು ಸಹಕಾರ ನೀಡಿದ್ದು ಯುವಕ - ಯುವತಿಯನ್ನು ಹುಡುಕಿಕೊಡುವುದಾಗಿ ಭರವಸೆ ನೀಡಿದ್ದಾರೆ. ಪುತ್ತೂರು ಪೊಲೀಸರಿಗೆ ದೂರು ನೀಡಿ ಟವರ್ ಲೊಕೇಶನ್ ಪತ್ತೆ ಹಚ್ಚಿದಾಗ ಇಬ್ಬರೂ ಪುತ್ತೂರಿನಿಂದ ಸಿದ್ಧಕಟ್ಟೆಗೆ ಪರಾರಿಯಾದ ಮಾಹಿತಿ ಸಿಕ್ಕಿದೆ.
Married Women uses KSRTC free bus service from Hubbali to Puttur to see her boyfriend, and flees with him.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm