ಬ್ರೇಕಿಂಗ್ ನ್ಯೂಸ್
15-06-23 03:55 pm Mangalore Correspondent ಕರಾವಳಿ
ಉಳ್ಳಾಲ, ಜೂ.15: ಕೆಇಆರ್ ಸಿ ಆದೇಶದಂತೆ ಈ ತಿಂಗಳು ವಿದ್ಯುತ್ ದರ ಏರಿಕೆಯಾಗಿದ್ದು ಉಳ್ಳಾಲ ಬೈಲಿನ ಮನೆಯೊಂದಕ್ಕೆ ಬರೋಬ್ಬರಿ 7 ಲಕ್ಷ ವಿದ್ಯುತ್ ಬಿಲ್ ಬಂದಿದ್ದನ್ನ ಕಂಡು ಮನೆ ಮಾಲೀಕ ಶಾಕ್ ಆಗಿದ್ದಾರೆ. ಉಳ್ಳಾಲ ಬೈಲಿನ ಸದಾಶಿವ ಆಚಾರ್ಯ ಅವರ ಮನೆಗೆ ನಿನ್ನೆ ಬಂದ ಬಿಲ್ ರೀಡರ್ ಬರೋಬರಿ 7,71,072 ರೂ. ಬಿಲ್ಲನ್ನ ನೀಡಿ ತೆರಳಿದ್ದಾನೆ.
ಮನೆ ಮಂದಿ 7 ಲಕ್ಷ ಬಿಲ್ ನೋಡಿ ಹೌಹಾರಿದ್ದು ಬಿಲ್ ರೀಡಿಂಗ್ ಮಾಡಿದ ವ್ಯಕ್ತಿಯಲ್ಲಿ ವಿಚಾರಿಸಿದಾಗ ಅದೆಲ್ಲ ನನಗೆ ಗೊತ್ತಿಲ್ಲ. ಮೆಸ್ಕಾಂ ಕಚೇರಿಗೆ ಹೋಗಿ ವಿಚಾರಿಸಿ ಎಂದು ಉಡಾಫೆಯ ಉತ್ತರ ನೀಡಿ ತೆರಳಿದ್ದಾನಂತೆ. ವಿದ್ಯುತ್ ಬಿಲ್ ರಸೀದಿಯಲ್ಲಿ 99,338 ಯೂನಿಟ್ ಖರ್ಚಾಗಿದ್ದು 7,71,072 ರೂಪಾಯಿ ಬಿಲ್ ನಮೂದಿಸಲಾಗಿದೆ. ತಮಗೆ ಈ ಮೊದಲು 3,000 ದಷ್ಟು ಮಾಸಿಕ ವಿದ್ಯುತ್ ಬಿಲ್ ಬರುತ್ತಿತ್ತು. ನಾವು ಪ್ರತಿ ತಿಂಗಳು ಬಿಲ್ಲನ್ನ ಕಟ್ಟುತ್ತೇವೆ. ಈ ತಿಂಗಳು ಬಂದ ಬಿಲ್ಲನ್ನ ನೋಡಿ ಮನೆ ಮಂದಿಯೆಲ್ಲ ಶಾಕ್ ಆದೆವು ಎಂದು ಮನೆ ಮಾಲೀಕ ಸದಾಶಿವ ಆಚಾರ್ಯ ಹೇಳಿದ್ದಾರೆ.
ಈ ಬಗ್ಗೆ ಹೆಡ್ ಲೈನ್ ಕರ್ನಾಟಕ ಪ್ರತಿನಿಧಿ ಉಳ್ಳಾಲ ಉಪವಿಭಾಗ ಮೆಸ್ಕಾಂ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ದಯಾನಂದ ಅವರಲ್ಲಿ ವಿಚಾರಿಸಿದಾಗ, ಏಜೆನ್ಸಿಗಳ ಮುಖಾಂತರ ಬಿಲ್ ಕಲೆಕ್ಷನ್ ಮಾಡಲಾಗುತ್ತದೆ. ಬಿಲ್ ರೀಡರ್ ಎಡವಟ್ಟಿನಿಂದ ತಪ್ಪಾಗಿ ವಿದ್ಯುತ್ ಬಿಲ್ ಮುದ್ರಣ ಆಗಿದೆ. ಬಿಲ್ಲಲ್ಲಿ ಲೋಪ ಕಂಡು ಬಂದರೆ ಅದನ್ನ ಗ್ರಾಹಕರಿಗೆ ಕೊಡುವಂತಿಲ್ಲ. ತಕ್ಷಣವೇ ಸದಾಶಿವ ಆಚಾರ್ಯ ಅವರ ಮನೆ ಬಾಗಿಲಿಗೆ ಪರಿಷ್ಕೃತ ಬಿಲ್ ತಲುಪಿಸುವುದಾಗಿ ಹೇಳಿದ್ದು ಇಂದು ಮದ್ಯಾಹ್ನದ ವೇಳೆ ಪರಿಷ್ಕೃತ 2,833 ರೂಪಾಯಿಗಳ ಬಿಲ್ ಆಚಾರ್ಯ ಅವರ ಮನೆ ತಲುಪಿದೆ.
Mangalore MESCOM Meter reading error, house gets 7 lakhs electric bill in Ullal, tenants in shock. Tenants who were getting Rs 3000 as thier bill were shocked to see a bill amount of 7 lakhs.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm