ಬ್ರೇಕಿಂಗ್ ನ್ಯೂಸ್
15-06-23 03:55 pm Mangalore Correspondent ಕರಾವಳಿ
ಉಳ್ಳಾಲ, ಜೂ.15: ಕೆಇಆರ್ ಸಿ ಆದೇಶದಂತೆ ಈ ತಿಂಗಳು ವಿದ್ಯುತ್ ದರ ಏರಿಕೆಯಾಗಿದ್ದು ಉಳ್ಳಾಲ ಬೈಲಿನ ಮನೆಯೊಂದಕ್ಕೆ ಬರೋಬ್ಬರಿ 7 ಲಕ್ಷ ವಿದ್ಯುತ್ ಬಿಲ್ ಬಂದಿದ್ದನ್ನ ಕಂಡು ಮನೆ ಮಾಲೀಕ ಶಾಕ್ ಆಗಿದ್ದಾರೆ. ಉಳ್ಳಾಲ ಬೈಲಿನ ಸದಾಶಿವ ಆಚಾರ್ಯ ಅವರ ಮನೆಗೆ ನಿನ್ನೆ ಬಂದ ಬಿಲ್ ರೀಡರ್ ಬರೋಬರಿ 7,71,072 ರೂ. ಬಿಲ್ಲನ್ನ ನೀಡಿ ತೆರಳಿದ್ದಾನೆ.
ಮನೆ ಮಂದಿ 7 ಲಕ್ಷ ಬಿಲ್ ನೋಡಿ ಹೌಹಾರಿದ್ದು ಬಿಲ್ ರೀಡಿಂಗ್ ಮಾಡಿದ ವ್ಯಕ್ತಿಯಲ್ಲಿ ವಿಚಾರಿಸಿದಾಗ ಅದೆಲ್ಲ ನನಗೆ ಗೊತ್ತಿಲ್ಲ. ಮೆಸ್ಕಾಂ ಕಚೇರಿಗೆ ಹೋಗಿ ವಿಚಾರಿಸಿ ಎಂದು ಉಡಾಫೆಯ ಉತ್ತರ ನೀಡಿ ತೆರಳಿದ್ದಾನಂತೆ. ವಿದ್ಯುತ್ ಬಿಲ್ ರಸೀದಿಯಲ್ಲಿ 99,338 ಯೂನಿಟ್ ಖರ್ಚಾಗಿದ್ದು 7,71,072 ರೂಪಾಯಿ ಬಿಲ್ ನಮೂದಿಸಲಾಗಿದೆ. ತಮಗೆ ಈ ಮೊದಲು 3,000 ದಷ್ಟು ಮಾಸಿಕ ವಿದ್ಯುತ್ ಬಿಲ್ ಬರುತ್ತಿತ್ತು. ನಾವು ಪ್ರತಿ ತಿಂಗಳು ಬಿಲ್ಲನ್ನ ಕಟ್ಟುತ್ತೇವೆ. ಈ ತಿಂಗಳು ಬಂದ ಬಿಲ್ಲನ್ನ ನೋಡಿ ಮನೆ ಮಂದಿಯೆಲ್ಲ ಶಾಕ್ ಆದೆವು ಎಂದು ಮನೆ ಮಾಲೀಕ ಸದಾಶಿವ ಆಚಾರ್ಯ ಹೇಳಿದ್ದಾರೆ.



ಈ ಬಗ್ಗೆ ಹೆಡ್ ಲೈನ್ ಕರ್ನಾಟಕ ಪ್ರತಿನಿಧಿ ಉಳ್ಳಾಲ ಉಪವಿಭಾಗ ಮೆಸ್ಕಾಂ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ದಯಾನಂದ ಅವರಲ್ಲಿ ವಿಚಾರಿಸಿದಾಗ, ಏಜೆನ್ಸಿಗಳ ಮುಖಾಂತರ ಬಿಲ್ ಕಲೆಕ್ಷನ್ ಮಾಡಲಾಗುತ್ತದೆ. ಬಿಲ್ ರೀಡರ್ ಎಡವಟ್ಟಿನಿಂದ ತಪ್ಪಾಗಿ ವಿದ್ಯುತ್ ಬಿಲ್ ಮುದ್ರಣ ಆಗಿದೆ. ಬಿಲ್ಲಲ್ಲಿ ಲೋಪ ಕಂಡು ಬಂದರೆ ಅದನ್ನ ಗ್ರಾಹಕರಿಗೆ ಕೊಡುವಂತಿಲ್ಲ. ತಕ್ಷಣವೇ ಸದಾಶಿವ ಆಚಾರ್ಯ ಅವರ ಮನೆ ಬಾಗಿಲಿಗೆ ಪರಿಷ್ಕೃತ ಬಿಲ್ ತಲುಪಿಸುವುದಾಗಿ ಹೇಳಿದ್ದು ಇಂದು ಮದ್ಯಾಹ್ನದ ವೇಳೆ ಪರಿಷ್ಕೃತ 2,833 ರೂಪಾಯಿಗಳ ಬಿಲ್ ಆಚಾರ್ಯ ಅವರ ಮನೆ ತಲುಪಿದೆ.
Mangalore MESCOM Meter reading error, house gets 7 lakhs electric bill in Ullal, tenants in shock. Tenants who were getting Rs 3000 as thier bill were shocked to see a bill amount of 7 lakhs.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 11:52 am
HK News Staffer
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm