ಬ್ರೇಕಿಂಗ್ ನ್ಯೂಸ್
31-10-20 06:56 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 31: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕೃತವಾಗಿ ಅದಾನಿ ಕಂಪನಿ ತೆಕ್ಕೆಗೆ ಬಿದ್ದಿದೆ. ಅದಾನಿ ಕಂಪನಿಯ ಅಧಿಕಾರಿಗಳು ಶನಿವಾರವೇ ಮಂಗಳೂರು ಏರ್ಪೋರ್ಟಿನಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.
ಅ.31ರಿಂದ ಅದಾನಿ ಕಂಪನಿ ಅಧಿಕೃತ ಎಂಟ್ರಿ ಪಡೆಯಲಿದೆ ಎನ್ನಲಾಗುತ್ತಿತ್ತು. ಅದೇ ಪ್ರಕಾರದಲ್ಲಿ ಕಂಪನಿ ಅಧಿಕಾರಿಗಳು ನಿರ್ವಹಣೆ ಆರಂಭಿಸಿದ್ದು, ಔಪಚಾರಿಕವಾಗಿ ಮಂಗಳೂರು ನಿಲ್ದಾಣ ಪ್ರಾಧಿಕಾರದ ನಿರ್ದೇಶಕರಿಂದ ಕೀ ಹಸ್ತಾಂತರ ಮಾಡಿಕೊಂಡಿದ್ದಾರೆ. ವಿಶೇಷ ಅಂದ್ರೆ, ಮೊದಲ ದಿನವೇ ವಿಮಾನ ನಿಲ್ದಾಣದ ನೇಮ್ ಪ್ಲೇಟ್ ಅನ್ನು ಕಂಪನಿ ಅಧಿಕಾರಿಗಳು ಬದಲಿಸಿದ್ದಾರೆ. ಮಂಗಳೂರು ಇಂಟರ್ನ್ಯಾಶನಲ್ ಏರ್ಪೋರ್ಟ್ ಹೆಸರಿನ ಜೊತೆಗೆ ಅದಾನಿ ಏರ್ಪೋರ್ಟ್ ಎನ್ನುವ ಸಿಂಬಲನ್ನು ಸೇರಿಸಲಾಗಿದೆ.
ಮಂಗಳೂರು ಸೇರಿದಂತೆ ದೇಶದ ಆರು ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್ ಗುತ್ತಿಗೆ ಪಡೆದುಕೊಂಡಿದೆ. ಅದರಂತೆ, ನವೆಂಬರ್ 2ರಂದು ಲಕ್ನೋ ಮತ್ತು ಅಹ್ಮದಾಬಾದ್ ವಿಮಾನ ನಿಲ್ದಾಣದ ನಿರ್ವಹಣೆಯನ್ನು ನ.7ರಂದು ಪಡೆದುಕೊಳ್ಳಲಿದೆ. ಕಳೆದ ಫೆಬ್ರವರಿ ತಿಂಗಳಲ್ಲಿಯೇ ಒಪ್ಪಂದ ಪ್ರಕ್ರಿಯೆಗಳು ಆಗಿದ್ದವು. ಆದರೆ, ಕೊರೊನಾ ಲಾಕ್ಡೌನ್ ಕಾರಣದಿಂದಾಗಿ ಹಸ್ತಾಂತರ ವಿಳಂಬವಾಗಿತ್ತು.
ದಕ್ಷ ಮತ್ತು ಗುಣಮಟ್ಟದ ಕಾರ್ಯಾಚರಣೆ ಹಾಗೂ ನಿಲ್ದಾಣಗಳ ಅಭಿವೃದ್ಧಿ ದೃಷ್ಟಿಯಿಂದ ಕಳೆದ 2018ರಲ್ಲಿ ಕೇಂದ್ರ ಸರಕಾರ ದೇಶದ ಆರು ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ನಿರ್ಧರಿಸಿತ್ತು. ಅದರಂತೆ, ಮಂಗಳೂರು ವಿಮಾನ ನಿಲ್ದಾಣವನ್ನು 50 ವರ್ಷಗಳ ಅವಧಿಗೆ ಅದಾನಿ ಕಂಪನಿಗೆ ಗುತ್ತಿಗೆ ನೀಡಿದೆ.
Adani group of company takes over the management of Mangalore International airport here on Saturday October 31, 2020.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 08:46 pm
Mangalore Correspondent
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm