ಬ್ರೇಕಿಂಗ್ ನ್ಯೂಸ್
31-10-20 06:56 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 31: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕೃತವಾಗಿ ಅದಾನಿ ಕಂಪನಿ ತೆಕ್ಕೆಗೆ ಬಿದ್ದಿದೆ. ಅದಾನಿ ಕಂಪನಿಯ ಅಧಿಕಾರಿಗಳು ಶನಿವಾರವೇ ಮಂಗಳೂರು ಏರ್ಪೋರ್ಟಿನಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.
ಅ.31ರಿಂದ ಅದಾನಿ ಕಂಪನಿ ಅಧಿಕೃತ ಎಂಟ್ರಿ ಪಡೆಯಲಿದೆ ಎನ್ನಲಾಗುತ್ತಿತ್ತು. ಅದೇ ಪ್ರಕಾರದಲ್ಲಿ ಕಂಪನಿ ಅಧಿಕಾರಿಗಳು ನಿರ್ವಹಣೆ ಆರಂಭಿಸಿದ್ದು, ಔಪಚಾರಿಕವಾಗಿ ಮಂಗಳೂರು ನಿಲ್ದಾಣ ಪ್ರಾಧಿಕಾರದ ನಿರ್ದೇಶಕರಿಂದ ಕೀ ಹಸ್ತಾಂತರ ಮಾಡಿಕೊಂಡಿದ್ದಾರೆ. ವಿಶೇಷ ಅಂದ್ರೆ, ಮೊದಲ ದಿನವೇ ವಿಮಾನ ನಿಲ್ದಾಣದ ನೇಮ್ ಪ್ಲೇಟ್ ಅನ್ನು ಕಂಪನಿ ಅಧಿಕಾರಿಗಳು ಬದಲಿಸಿದ್ದಾರೆ. ಮಂಗಳೂರು ಇಂಟರ್ನ್ಯಾಶನಲ್ ಏರ್ಪೋರ್ಟ್ ಹೆಸರಿನ ಜೊತೆಗೆ ಅದಾನಿ ಏರ್ಪೋರ್ಟ್ ಎನ್ನುವ ಸಿಂಬಲನ್ನು ಸೇರಿಸಲಾಗಿದೆ.

ಮಂಗಳೂರು ಸೇರಿದಂತೆ ದೇಶದ ಆರು ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್ ಗುತ್ತಿಗೆ ಪಡೆದುಕೊಂಡಿದೆ. ಅದರಂತೆ, ನವೆಂಬರ್ 2ರಂದು ಲಕ್ನೋ ಮತ್ತು ಅಹ್ಮದಾಬಾದ್ ವಿಮಾನ ನಿಲ್ದಾಣದ ನಿರ್ವಹಣೆಯನ್ನು ನ.7ರಂದು ಪಡೆದುಕೊಳ್ಳಲಿದೆ. ಕಳೆದ ಫೆಬ್ರವರಿ ತಿಂಗಳಲ್ಲಿಯೇ ಒಪ್ಪಂದ ಪ್ರಕ್ರಿಯೆಗಳು ಆಗಿದ್ದವು. ಆದರೆ, ಕೊರೊನಾ ಲಾಕ್ಡೌನ್ ಕಾರಣದಿಂದಾಗಿ ಹಸ್ತಾಂತರ ವಿಳಂಬವಾಗಿತ್ತು.
ದಕ್ಷ ಮತ್ತು ಗುಣಮಟ್ಟದ ಕಾರ್ಯಾಚರಣೆ ಹಾಗೂ ನಿಲ್ದಾಣಗಳ ಅಭಿವೃದ್ಧಿ ದೃಷ್ಟಿಯಿಂದ ಕಳೆದ 2018ರಲ್ಲಿ ಕೇಂದ್ರ ಸರಕಾರ ದೇಶದ ಆರು ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ನಿರ್ಧರಿಸಿತ್ತು. ಅದರಂತೆ, ಮಂಗಳೂರು ವಿಮಾನ ನಿಲ್ದಾಣವನ್ನು 50 ವರ್ಷಗಳ ಅವಧಿಗೆ ಅದಾನಿ ಕಂಪನಿಗೆ ಗುತ್ತಿಗೆ ನೀಡಿದೆ.
Adani group of company takes over the management of Mangalore International airport here on Saturday October 31, 2020.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm