ಬ್ರೇಕಿಂಗ್ ನ್ಯೂಸ್
16-06-23 03:13 pm Mangalore Correspondent ಕರಾವಳಿ
ಮಂಗಳೂರು, ಜೂನ್ 16: ಕಡಲ್ಕೊರೆತ ಸಮಸ್ಯೆ ಪ್ರತಿ ವರ್ಷ ಜೂನ್, ಜುಲೈ ತಿಂಗಳಲ್ಲಿ ಮಾತ್ರ ಬರುತ್ತದೆ. ಸಮಸ್ಯೆ ಎದುರಾಗುವ ಮೊದಲೇ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳಬೇಕಾದ್ದು ಸರಕಾರ ಜವಾಬ್ದಾರಿ. ಆ ಕೆಲಸವನ್ನು ನಾವು ಮಾಡುತ್ತೇವೆ. ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಮೀನುಗಾರಿಕೆ, ಬಂದರು ಮತ್ತು ಜಲಸಾರಿಗೆ ಸಚಿವ ಮಾಂಕಾಳು ವೈದ್ಯ ಹೇಳಿದ್ದಾರೆ.
ಸಚಿವರಾದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಭೇಟಿಯಿತ್ತ ಸಚಿವರು, ಬಂದರು ಮತ್ತು ಮೀನುಗಾರಿಕೆ ಕಚೇರಿಗೆ ಭೇಟಿ ನೀಡಿದರು. ಆನಂತರ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಸಭೆಯ ಬಳಿಕ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕಡಲ್ಕೊರೆತ ಸಮಸ್ಯೆ ಇರುವುದು ನನಗೆ ತಿಳಿದಿದೆ. ಇದರಿಂದ ಬಡವರಿಗೆ, ಅಲ್ಲಿನ ನಿವಾಸಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ಇಂಥದ್ದಕ್ಕೆಲ್ಲ ಸಮಸ್ಯೆ ಉಂಟಾದ ಬಳಿಕ ಕೆಲಸ ಮಾಡೋದಲ್ಲ. ಸಮಸ್ಯೆ ಎದುರಾಗುವ ಮೊದಲೇ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು. ಎಲ್ಲಿ ಏನು ಸಮಸ್ಯೆ ಆಗಿದೆಯೋ, ಅದಕ್ಕೆ ಸೂಕ್ತ ರೀತಿ ಸ್ಪಂದಿಸುತ್ತೇನೆ ಎಂದು ಹೇಳಿದರು.
ಕಳೆದ ಕೆಲವು ವರ್ಷಗಳಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಸಾವನ್ನಪ್ಪಿದವರಿಗೆ ಸರಕಾರದಿಂದ ಪರಿಹಾರದ ಹಣ ಕೊಟ್ಟಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ರೀತಿ 20 ಜನರು ಸತ್ತಿದ್ದು, ಅವರ ಕುಟುಂಬಗಳಿಗೆ 1.20 ಕೋಟಿ ರೂ. ಆಗಬೇಕಿದೆ. ಮೂರು ಜಿಲ್ಲೆಗಳಲ್ಲಿ ಮೃತಪಟ್ಟವರಿಗೆ 3.20 ಕೋಟಿ ರೂಪಾಯಿ ಆಗಬೇಕಿದ್ದು, ಅದನ್ನು ಇಲಾಖೆಯಿಂದ ಬಿಡುಗಡೆ ಮಾಡಿಸುತ್ತೇನೆ ಎಂದರು. ಬಿಜೆಪಿ ಸರಕಾರಕ್ಕೆ ಬಡವರ ಬಗ್ಗೆ ಕಾಳಜಿ ಇಲ್ಲ. ಮೀನುಗಾರಿಕೆಯಲ್ಲಿ ಸತ್ತು ಹೋಗಿದ್ದಕ್ಕೆ ಪ್ರೂಫ್ ಇದ್ದರೆ ಸಾಕು. ಸತ್ತವರ ಬಗ್ಗೆ ಮಾನದಂಡ ಕೇಳಿದರೆ ಕತೆಯೇನ್ರಿ ಎಂದು ಪ್ರಶ್ನಿಸಿದ ಸಚಿವ ಮಾಂಕಾಳು ವೈದ್ಯ, ಕೇಂದ್ರ ಸರಕಾರ ಯಾವುದೋ ಏಜನ್ಸಿಗೆ ಪರಿಹಾರದ ಹಣ ನೀಡಲು ನೇಮಕ ಮಾಡಿದೆ. ಅದರ ಬಗ್ಗೆ ನಾನು ಮಾತನಾಡಲ್ಲ. ನಾವು ರಾಜ್ಯ ಸರಕಾರದಿಂದ ಏನು ಪರಿಹಾರ ಆಗಬೇಕಿದೆಯೋ ಅದನ್ನು ಒದಗಿಸುತ್ತೇನೆ. ಬಿಜೆಪಿಯವರಿಗೆ ಕಾಳಜಿ ಇಲ್ಲದೆ ಇರೋದ್ರಿಂದಲೇ ವರ್ಷಗಟ್ಟಲೆ ಪರಿಹಾರದ ಹಣ ಬಾಕಿಯಾಗಿದೆ. ಅದನ್ನು ಈಗ ಕೊಡಿಸುವ ದುಸ್ಥಿತಿ ನಮ್ಮ ಸರಕಾರಕ್ಕೆ ಬಂದಿದೆ.
ಮೀನುಗಾರರು ಇಡೀ ದೇಶದಲ್ಲಿ ಅತಿ ಹೆಚ್ಚು ನಿರ್ಲಕ್ಷಿತರಾಗಿದ್ದಾರೆ. ಕಳೆದ ಹತ್ತು ತಿಂಗಳಲ್ಲಿ ಬಿಜೆಪಿ ಸರಕಾರ ಮೀನುಗಾರರಿಗೆ ಡೀಸೆಲ್ ಸಬ್ಸಿಡಿ ಕೊಟ್ಟಿಲ್ಲ. ಹತ್ತು ತಿಂಗಳದ್ದು ಸೇರಿ ಪ್ರತಿ ತಿಂಗಳು ಡೀಸೆಲ್ ಸಬ್ಸಿಡಿ ಸಿಗುವಂತೆ ಮಾಡುತ್ತೇನೆ. ಅಧಿಕಾರಿಗಳು ಒಂದು ತಿಂಗಳಲ್ಲಿ ಈ ಕೆಲಸವನ್ನು ಮಾಡಬೇಕು. ಕೆಲಸ ಮಾಡದ ಅಧಿಕಾರಿಗಳನ್ನು ನನ್ನ ಇಲಾಖೆಯಲ್ಲಿ ಉಳಿಸಿಕೊಳ್ಳೋದಿಲ್ಲ ಎಂದು ಖಡಕ್ಕಾಗಿ ಹೇಳಿದರು.
Mangalore Mankala Vaidya, strict action on sea erosion, we will take Immidete steps says Fisheries Minister
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 11:52 am
HK News Staffer
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm