UT Khader: ಸ್ಪೀಕರ್ ಯು.ಟಿ.ಖಾದರ್ ಅಭಿನಂದಿಸಿ ಹಾಕಿದ್ದ ಫ್ಲೆಕ್ಸ್ ಗಳಿಗೆ ಕತ್ತರಿ ; ಉಳ್ಳಾಲದಲ್ಲೇ ಕಿಡಿಗೇಡಿಗಳ ವಿಕೃತ ಕೃತ್ಯ 

17-06-23 11:59 am       Mangalore Correspondent   ಕರಾವಳಿ

ವಿಧಾನಸಭೆ ಸಭಾಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಯು.ಟಿ.ಖಾದರ್ ಅವರನ್ನ ಅಭಿನಂದಿಸಿ ಅಭಿಮಾನಿಗಳು ಹಾಕಿದ್ದ ಫ್ಲೆಕ್ಸ್ ಗಳನ್ನ ಕಿಡಿಗೇಡಿಗಳು ನಿನ್ನೆ ರಾತ್ರಿ ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ. 

ಉಳ್ಳಾಲ, ಜೂ.17: ವಿಧಾನಸಭೆ ಸಭಾಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಯು.ಟಿ.ಖಾದರ್ ಅವರನ್ನ ಅಭಿನಂದಿಸಿ ಅಭಿಮಾನಿಗಳು ಹಾಕಿದ್ದ ಫ್ಲೆಕ್ಸ್ ಗಳನ್ನ ಕಿಡಿಗೇಡಿಗಳು ನಿನ್ನೆ ರಾತ್ರಿ ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ. 

ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ ಉಳ್ಳಾಲದ ಅಬ್ಬಕ್ಕ ವೃತ್ತದ ವರೆಗಿನ ರಾಜ ರಸ್ತೆಯ ವಿಭಜಕ ಮತ್ತು ಇಕ್ಕೆಲಗಳಲ್ಲಿ ಯು.ಟಿ ಖಾದರ್ ಅವರಿಗೆ ಅಭಿನಂದಿಸಿ ಫ್ಲೆಕ್ಸ್ ಗಳನ್ನ ಹಾಕಲಾಗಿತ್ತು. ಕಳೆದ ಆದಿತ್ಯವಾರ ಉಳ್ಳಾಲದ ಮಹಾತ್ಮಗಾಂಧಿ ರಂಗ ಮಂದಿರದಲ್ಲಿ ಶಾಸಕರಿಗೆ ನಡೆದ ನಾಗರಿಕ ಸನ್ಮಾನಕ್ಕೂ ಶುಭ ಕೋರಿ ಫ್ಲೆಕ್ಸ್ ಗಳನ್ನ ಹಾಕಲಾಗಿತ್ತು. ನಿನ್ನೆ ರಾತ್ರಿ ಕಿಡಿಗೇಡಿಗಳು ಐದಾರು ಫ್ಲೆಕ್ಸ್ ಗಳನ್ನ ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯ ಕೂಗಳತೆಯ ಅಂತರದಲ್ಲಿ ಹಾಕಲಾಗಿದ್ದ ಫ್ಲೆಕ್ಸನ್ನೂ ಹರಿದು ಹಾಕಿದ್ದಾರೆ. 

ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದು ತಡರಾತ್ರಿ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಇಬ್ಬರು ಕೃತ್ಯ ಎಸಗಿರುವುದಾಗಿ ಮಾಹಿತಿ ಲಭಿಸಿದೆ. ಫ್ಲೆಕ್ಸ್ ಗಳನ್ನ ಸ್ಥಳೀಯ ನಗರಾಡಳಿತದಿಂದ ಅನುಮತಿ ಪಡೆಯದೆ ಅಳವಡಿಸಿರುವುದರಿಂದ ಈ ವರೆಗೂ ಯಾರೂ ಠಾಣೆಗೆ ದೂರು ನೀಡಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.

Speaker UT Khader banners torn by miscreants at Ullal and Thokottu. More than 5-6 flexs have been torn using blades. But no case has been registered so far.