ಪಿಯುಸಿಯಲ್ಲಿ ಫೇಲ್ ಆಗಿದ್ದಕ್ಕೆ ಖಿನ್ನತೆ ; ಯುವಕ ನೇಣು ಬಿಗಿದು ಆತ್ಮಹತ್ಯೆ 

17-06-23 04:56 pm       Mangalore Correspondent   ಕರಾವಳಿ

ಐವರು ಸಹೋದರಿಯರಿಗೆ ಏಕೈಕ ಸಹೋದರನಾಗಿದ್ದ ಯುವಕನೋರ್ವ, ಪಿಯುಸಿ‌ಯಲ್ಲಿ ಫೇಲ್ ಆಗಿ ಖಿನ್ನತೆಗೊಳಗಾಗಿ ಮನೆಯ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ತಲಪಾಡಿ ಕೆ.ಸಿ.ನಗರದಲ್ಲಿ ಸಂಭವಿಸಿದೆ. 

ಉಳ್ಳಾಲ, ಜೂ.17: ಐವರು ಸಹೋದರಿಯರಿಗೆ ಏಕೈಕ ಸಹೋದರನಾಗಿದ್ದ ಯುವಕನೋರ್ವ, ಪಿಯುಸಿ‌ಯಲ್ಲಿ ಫೇಲ್ ಆಗಿ ಖಿನ್ನತೆಗೊಳಗಾಗಿ ಮನೆಯ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ತಲಪಾಡಿ ಕೆ.ಸಿ.ನಗರದಲ್ಲಿ ಸಂಭವಿಸಿದೆ. 

ರಶೀದಾ ಬಾನು ಎಂಬವರ ಪುತ್ರ ಮೊಹಮ್ಮದ್‌ ನುಹ್ಮನ್‌ (19) ಆತ್ಮಹತ್ಯೆಗೈದ ಯುವಕ. ಪಿಯುಸಿಯಲ್ಲಿ ಫೇಲ್ ಆಗಿದ್ದ ನುಹ್ಮನ್ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ನುಹ್ಮನ್‌ ಮನೆಯ ಕೊಠಡಿಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂದು ಮುಂಜಾನೆ ಮನೆಮಂದಿ ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ನುಹ್ಮನ್ ಐವರು ಸಹೋದರಿಯರಿಗೆ ಓರ್ವನೇ ಸಹೋದರನಾಗಿದ್ದ.ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Mangalore 19-year-old undergoing mental depression dies by suicide at KC Nagar in Talapady.  The deceased is identified as Mohammed Noohman (19), son of Rasheeda Bhanu. Noohman was depressed since some time.