ಬ್ರೇಕಿಂಗ್ ನ್ಯೂಸ್
18-06-23 05:41 pm Mangalore Correspondent ಕರಾವಳಿ
ಮಂಗಳೂರು, ಜೂನ್ 18: ಪೊಲೀಸರ ಎದುರಲ್ಲೇ ವಿದ್ಯಾರ್ಥಿಗಳ ಗುಂಪೊಂದು ಬಸ್ ನಿಲ್ಲಿಸಿ, ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ತೋರಿದ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಕಡೆಯಿಂದ ಚಾರ್ಮಾಡಿ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್ಪ್ರೆಸ್ ಬಸ್ಸಿನಲ್ಲಿ ವಿದ್ಯಾರ್ಥಿಗಳು ತೆರಳುತ್ತಿದ್ದರು. ಈ ವೇಳೆ, ಬಸ್ಸನ್ನು ಚಾರ್ಮಾಡಿಯಲ್ಲಿ ನಿಲ್ಲಿಸಬೇಕೆಂದು ವಿದ್ಯಾರ್ಥಿಗಳ ಗುಂಪು ಒತ್ತಾಯಿಸಿದ್ದು ಬಸ್ ಕಂಡಕ್ಟರ್ ಜೊತೆ ವಾಗ್ವಾದ ನಡೆಸಿದ್ದಾರೆ. ಬಸ್ಸಿನಲ್ಲಿ ವಾಗ್ವಾದ ನಡೆಯುತ್ತಿದ್ದಾಗ ಪ್ರಯಾಣಿಕರೊಬ್ಬರು ಕಂಡಕ್ಟರ್ ಪರವಾಗಿ ಮಾತನಾಡಿದ್ದಾರೆ. ಇದರಿಂದ ಕುಪಿತರಾದ ವಿದ್ಯಾರ್ಥಿಗಳ ಗುಂಪು ಪ್ರಯಾಣಿಕರನ್ನು ದಬಾಯಿಸಿದ್ದಾರೆ. ಬಳಿಕ ಒಂದು ಸಮುದಾಯದ ಇತರೇ ಯುವಕರನ್ನು ಕರೆಸಿ, ಚಾರ್ಮಾಡಿಯಲ್ಲಿ ಗಲಾಟೆ ನಡೆಸಿದ್ದು ಬಸ್ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾರೆ.


ಬಸ್ ನಿಲ್ಲಿಸಿ ಯುವಕರ ತಂಡ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದು ಇದರ ವಿಡಿಯೋವನ್ನು ಇತರೇ ಪ್ರಯಾಣಿಕರು ಮೊಬೈಲಿನಲ್ಲಿ ಸೆರೆಹಿಡಿದಿದ್ದಾರೆ. ನಿನ್ನೆ ಮಧ್ಯಾಹ್ನ ಘಟನೆ ನಡೆದಿದ್ದು ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸರ ಎದುರಲ್ಲೇ ದಾಂಧಲೆ ನಡೆಸಿದ್ದು ಅವಾಚ್ಯ ಶಬ್ದಗಳಿಂದ ಬಸ್ ಪ್ರಯಾಣಿಕ ಮತ್ತು ನಿರ್ವಾಹಕರನ್ನು ನಿಂದಿಸಿದ್ದಾರೆ.

ಬಸ್ಸಿನಲ್ಲಿ ಕಂಡಕ್ಟರ್ ಜೊತೆಗೆ ವಾಗ್ವಾದ ನಡೆದು ಬಳಿಕ ಇತರೇ ಯುವಕರ ತಂಡ ಸೇರಿಕೊಂಡು ಬಸ್ ತಡೆದು ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದು ಪೊಲೀಸರ ಮುಂದೆಯೇ ಕಾನೂನು ಕೈಗೆತ್ತಿಕೊಂಡು ನೈತಿಕ ಪೊಲೀಸ್ ಗಿರಿ ಮೆರೆದಿದ್ದಾರೆ. ನೈತಿಕ ಪೊಲೀಸ್ ಕೃತ್ಯಕ್ಕೆ ನಿರ್ದಾಕ್ಷಿಣ್ಯ ಕ್ರಮದ ಭರವಸೆ ನೀಡಿದ್ದರೂ, ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಲ್ಲ.
Charmadi ghat students fight in the presence of police, passenger assulted, moral policing at Ujre.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm