ಬ್ರೇಕಿಂಗ್ ನ್ಯೂಸ್
18-06-23 05:41 pm Mangalore Correspondent ಕರಾವಳಿ
ಮಂಗಳೂರು, ಜೂನ್ 18: ಪೊಲೀಸರ ಎದುರಲ್ಲೇ ವಿದ್ಯಾರ್ಥಿಗಳ ಗುಂಪೊಂದು ಬಸ್ ನಿಲ್ಲಿಸಿ, ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ತೋರಿದ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಕಡೆಯಿಂದ ಚಾರ್ಮಾಡಿ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್ಪ್ರೆಸ್ ಬಸ್ಸಿನಲ್ಲಿ ವಿದ್ಯಾರ್ಥಿಗಳು ತೆರಳುತ್ತಿದ್ದರು. ಈ ವೇಳೆ, ಬಸ್ಸನ್ನು ಚಾರ್ಮಾಡಿಯಲ್ಲಿ ನಿಲ್ಲಿಸಬೇಕೆಂದು ವಿದ್ಯಾರ್ಥಿಗಳ ಗುಂಪು ಒತ್ತಾಯಿಸಿದ್ದು ಬಸ್ ಕಂಡಕ್ಟರ್ ಜೊತೆ ವಾಗ್ವಾದ ನಡೆಸಿದ್ದಾರೆ. ಬಸ್ಸಿನಲ್ಲಿ ವಾಗ್ವಾದ ನಡೆಯುತ್ತಿದ್ದಾಗ ಪ್ರಯಾಣಿಕರೊಬ್ಬರು ಕಂಡಕ್ಟರ್ ಪರವಾಗಿ ಮಾತನಾಡಿದ್ದಾರೆ. ಇದರಿಂದ ಕುಪಿತರಾದ ವಿದ್ಯಾರ್ಥಿಗಳ ಗುಂಪು ಪ್ರಯಾಣಿಕರನ್ನು ದಬಾಯಿಸಿದ್ದಾರೆ. ಬಳಿಕ ಒಂದು ಸಮುದಾಯದ ಇತರೇ ಯುವಕರನ್ನು ಕರೆಸಿ, ಚಾರ್ಮಾಡಿಯಲ್ಲಿ ಗಲಾಟೆ ನಡೆಸಿದ್ದು ಬಸ್ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾರೆ.


ಬಸ್ ನಿಲ್ಲಿಸಿ ಯುವಕರ ತಂಡ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದು ಇದರ ವಿಡಿಯೋವನ್ನು ಇತರೇ ಪ್ರಯಾಣಿಕರು ಮೊಬೈಲಿನಲ್ಲಿ ಸೆರೆಹಿಡಿದಿದ್ದಾರೆ. ನಿನ್ನೆ ಮಧ್ಯಾಹ್ನ ಘಟನೆ ನಡೆದಿದ್ದು ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸರ ಎದುರಲ್ಲೇ ದಾಂಧಲೆ ನಡೆಸಿದ್ದು ಅವಾಚ್ಯ ಶಬ್ದಗಳಿಂದ ಬಸ್ ಪ್ರಯಾಣಿಕ ಮತ್ತು ನಿರ್ವಾಹಕರನ್ನು ನಿಂದಿಸಿದ್ದಾರೆ.

ಬಸ್ಸಿನಲ್ಲಿ ಕಂಡಕ್ಟರ್ ಜೊತೆಗೆ ವಾಗ್ವಾದ ನಡೆದು ಬಳಿಕ ಇತರೇ ಯುವಕರ ತಂಡ ಸೇರಿಕೊಂಡು ಬಸ್ ತಡೆದು ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದು ಪೊಲೀಸರ ಮುಂದೆಯೇ ಕಾನೂನು ಕೈಗೆತ್ತಿಕೊಂಡು ನೈತಿಕ ಪೊಲೀಸ್ ಗಿರಿ ಮೆರೆದಿದ್ದಾರೆ. ನೈತಿಕ ಪೊಲೀಸ್ ಕೃತ್ಯಕ್ಕೆ ನಿರ್ದಾಕ್ಷಿಣ್ಯ ಕ್ರಮದ ಭರವಸೆ ನೀಡಿದ್ದರೂ, ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಲ್ಲ.
Charmadi ghat students fight in the presence of police, passenger assulted, moral policing at Ujre.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 05:23 pm
Udupi Correspondent
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm