ಬ್ರೇಕಿಂಗ್ ನ್ಯೂಸ್
18-06-23 05:41 pm Mangalore Correspondent ಕರಾವಳಿ
ಮಂಗಳೂರು, ಜೂನ್ 18: ಪೊಲೀಸರ ಎದುರಲ್ಲೇ ವಿದ್ಯಾರ್ಥಿಗಳ ಗುಂಪೊಂದು ಬಸ್ ನಿಲ್ಲಿಸಿ, ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ತೋರಿದ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಕಡೆಯಿಂದ ಚಾರ್ಮಾಡಿ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್ಪ್ರೆಸ್ ಬಸ್ಸಿನಲ್ಲಿ ವಿದ್ಯಾರ್ಥಿಗಳು ತೆರಳುತ್ತಿದ್ದರು. ಈ ವೇಳೆ, ಬಸ್ಸನ್ನು ಚಾರ್ಮಾಡಿಯಲ್ಲಿ ನಿಲ್ಲಿಸಬೇಕೆಂದು ವಿದ್ಯಾರ್ಥಿಗಳ ಗುಂಪು ಒತ್ತಾಯಿಸಿದ್ದು ಬಸ್ ಕಂಡಕ್ಟರ್ ಜೊತೆ ವಾಗ್ವಾದ ನಡೆಸಿದ್ದಾರೆ. ಬಸ್ಸಿನಲ್ಲಿ ವಾಗ್ವಾದ ನಡೆಯುತ್ತಿದ್ದಾಗ ಪ್ರಯಾಣಿಕರೊಬ್ಬರು ಕಂಡಕ್ಟರ್ ಪರವಾಗಿ ಮಾತನಾಡಿದ್ದಾರೆ. ಇದರಿಂದ ಕುಪಿತರಾದ ವಿದ್ಯಾರ್ಥಿಗಳ ಗುಂಪು ಪ್ರಯಾಣಿಕರನ್ನು ದಬಾಯಿಸಿದ್ದಾರೆ. ಬಳಿಕ ಒಂದು ಸಮುದಾಯದ ಇತರೇ ಯುವಕರನ್ನು ಕರೆಸಿ, ಚಾರ್ಮಾಡಿಯಲ್ಲಿ ಗಲಾಟೆ ನಡೆಸಿದ್ದು ಬಸ್ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾರೆ.
ಬಸ್ ನಿಲ್ಲಿಸಿ ಯುವಕರ ತಂಡ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದು ಇದರ ವಿಡಿಯೋವನ್ನು ಇತರೇ ಪ್ರಯಾಣಿಕರು ಮೊಬೈಲಿನಲ್ಲಿ ಸೆರೆಹಿಡಿದಿದ್ದಾರೆ. ನಿನ್ನೆ ಮಧ್ಯಾಹ್ನ ಘಟನೆ ನಡೆದಿದ್ದು ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸರ ಎದುರಲ್ಲೇ ದಾಂಧಲೆ ನಡೆಸಿದ್ದು ಅವಾಚ್ಯ ಶಬ್ದಗಳಿಂದ ಬಸ್ ಪ್ರಯಾಣಿಕ ಮತ್ತು ನಿರ್ವಾಹಕರನ್ನು ನಿಂದಿಸಿದ್ದಾರೆ.
ಬಸ್ಸಿನಲ್ಲಿ ಕಂಡಕ್ಟರ್ ಜೊತೆಗೆ ವಾಗ್ವಾದ ನಡೆದು ಬಳಿಕ ಇತರೇ ಯುವಕರ ತಂಡ ಸೇರಿಕೊಂಡು ಬಸ್ ತಡೆದು ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದು ಪೊಲೀಸರ ಮುಂದೆಯೇ ಕಾನೂನು ಕೈಗೆತ್ತಿಕೊಂಡು ನೈತಿಕ ಪೊಲೀಸ್ ಗಿರಿ ಮೆರೆದಿದ್ದಾರೆ. ನೈತಿಕ ಪೊಲೀಸ್ ಕೃತ್ಯಕ್ಕೆ ನಿರ್ದಾಕ್ಷಿಣ್ಯ ಕ್ರಮದ ಭರವಸೆ ನೀಡಿದ್ದರೂ, ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಲ್ಲ.
Charmadi ghat students fight in the presence of police, passenger assulted, moral policing at Ujre.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 02:30 pm
Mangalore Correspondent
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am