ಬ್ರೇಕಿಂಗ್ ನ್ಯೂಸ್
20-06-23 11:30 am Mangalore Correspondent ಕರಾವಳಿ
ಬೆಳ್ತಂಗಡಿ, ಜೂನ್ 20: ಚಾಕೊಲೇಟ್ ಕೊಡಿಸಿಲ್ಲವೆಂದು ತಂದೆಯ ಮೇಲೆ ಸಿಟ್ಟಾದ ಬಾಲಕಿಯರಿಬ್ಬರು ಮನೆ ತೊರೆದು ಸರ್ಕಾರಿ ಬಸ್ಸಿನ ಉಚಿತ ಪ್ರಯಾಣದ ಲಾಭ ಪಡೆದು ಧರ್ಮಸ್ಥಳಕ್ಕೆ ತೆರಳಿದ ಪ್ರಸಂಗ ನಡೆದಿದ್ದು ಮೊಬೈಲ್ ನೆಟ್ವರ್ಕ್ ಆಧರಿಸಿ ಕೋಣನಕುಂಟೆ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಪತ್ತೆ ಮಾಡಿದ್ದಾರೆ.
ಕೋಣನಕುಂಟೆ ಠಾಣೆ ವ್ಯಾಪ್ತಿಯ 9 ಹಾಗೂ 11 ವರ್ಷ ವಯಸ್ಸಿನ ಅಕ್ಕ–ತಂಗಿ ಬಾಲಕಿಯರು, ಚಾಕಲೇಟ್ ಖರೀದಿಸುವುದಕ್ಕಾಗಿ ತಂದೆ ಬಳಿ ಹಣ ಕೇಳಿದ್ದರು. ಹಣ ನೀಡದ ತಂದೆ, ಚಾಕೊಲೇಟ್ ತಿನ್ನದಂತೆ ತಾಕೀತು ಮಾಡಿದ್ದರು. ಇದರಿಂದ ಸಿಟ್ಟಿನಲ್ಲಿದ್ದ ಬಾಲಕಿಯರು, ಬೇರೆಯವರ ಬಳಿ ಹಣ ಪಡೆದು ಚಾಕೊಲೇಟ್ ಖರೀದಿಸಿ ತಿಂದಿದ್ದರು. ಬಳಿಕ ತಾವು ಚಾಕೊಲೇಟ್ ತಿಂದಿದ್ದನ್ನು ತಂದೆಗೆ ತಿಳಿಸಿದ್ದರು. ಕೋಪಗೊಂಡ ತಂದೆ, ಮತ್ತಷ್ಟು ಬೈದಿದ್ದರು ಎನ್ನಲಾಗಿದೆ. ಇದರಿಂದ ನೊಂದ ಬಾಲಕಿಯರು, ಮನೆ ಬಿಟ್ಟು ಹೋಗಿದ್ದರು.
ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣವೆಂಬುದನ್ನು ತಿಳಿದಿದ್ದ ಬಾಲಕಿಯರು, ಮನೆಯಿಂದ ಬರುವಾಗಲೇ ತಮ್ಮ ಗುರುತಿನ ಚೀಟಿ ಸಮೇತ ಜೂನ್ 16ರಂದು ರಾತ್ರಿ ಮೆಜೆಸ್ಟಿಕ್ ನಿಲ್ದಾಣಕ್ಕೆ ತೆರಳಿದ್ದರು. ಅಲ್ಲಿಂದ ಕೆಎಸ್ಆರ್ಟಿಸಿ ಬಸ್ ಹತ್ತಿ ಧರ್ಮಸ್ಥಳಕ್ಕೆ ತೆರಳಿದ್ದರು. ತಮ್ಮಲ್ಲಿದ್ದ ಮೊಬೈಲನ್ನೂ ಎತ್ತಿಕೊಂಡು ಹೋಗಿದ್ದರು. ಇತ್ತ ಮಕ್ಕಳು ಮನೆಗೆ ಬಾರದಿದ್ದರಿಂದ ಗಾಬರಿಗೊಂಡ ಪೋಷಕರು ಕೋಣನಕುಂಟೆ ಠಾಣೆಗೆ ದೂರು ನೀಡಿದ್ದರು.
ಬಾಲಕಿಯರ ಬಳಿಯಿದ್ದ ಮೊಬೈಲ್ ನೆಟ್ವರ್ಕ್ ಆಧರಿಸಿ ತನಿಖೆ ನಡೆಸಿದಾಗ, ಧರ್ಮಸ್ಥಳದಲ್ಲಿರುವ ಮಾಹಿತಿ ಲಭ್ಯವಾಗಿತ್ತು. ಪೊಲೀಸರ ತಂಡ ನೇರವಾಗಿ ಧರ್ಮಸ್ಥಳಕ್ಕೆ ಬಂದು ಬಾಲಕಿಯರನ್ನು ವಶಕ್ಕೆ ಪಡೆದಿದ್ದು ಬೆಂಗಳೂರಿಗೆ ಕರೆತಂದು ಪೋಷಕರಿಗೆ ಒಪ್ಪಿಸಿದೆ.
Angry over father not buying chocolate, sisters travel by free KSRTC bus to Dharmasthala from Belthangady, police trace them by location.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm