ಬ್ರೇಕಿಂಗ್ ನ್ಯೂಸ್
20-06-23 11:30 am Mangalore Correspondent ಕರಾವಳಿ
ಬೆಳ್ತಂಗಡಿ, ಜೂನ್ 20: ಚಾಕೊಲೇಟ್ ಕೊಡಿಸಿಲ್ಲವೆಂದು ತಂದೆಯ ಮೇಲೆ ಸಿಟ್ಟಾದ ಬಾಲಕಿಯರಿಬ್ಬರು ಮನೆ ತೊರೆದು ಸರ್ಕಾರಿ ಬಸ್ಸಿನ ಉಚಿತ ಪ್ರಯಾಣದ ಲಾಭ ಪಡೆದು ಧರ್ಮಸ್ಥಳಕ್ಕೆ ತೆರಳಿದ ಪ್ರಸಂಗ ನಡೆದಿದ್ದು ಮೊಬೈಲ್ ನೆಟ್ವರ್ಕ್ ಆಧರಿಸಿ ಕೋಣನಕುಂಟೆ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಪತ್ತೆ ಮಾಡಿದ್ದಾರೆ.
ಕೋಣನಕುಂಟೆ ಠಾಣೆ ವ್ಯಾಪ್ತಿಯ 9 ಹಾಗೂ 11 ವರ್ಷ ವಯಸ್ಸಿನ ಅಕ್ಕ–ತಂಗಿ ಬಾಲಕಿಯರು, ಚಾಕಲೇಟ್ ಖರೀದಿಸುವುದಕ್ಕಾಗಿ ತಂದೆ ಬಳಿ ಹಣ ಕೇಳಿದ್ದರು. ಹಣ ನೀಡದ ತಂದೆ, ಚಾಕೊಲೇಟ್ ತಿನ್ನದಂತೆ ತಾಕೀತು ಮಾಡಿದ್ದರು. ಇದರಿಂದ ಸಿಟ್ಟಿನಲ್ಲಿದ್ದ ಬಾಲಕಿಯರು, ಬೇರೆಯವರ ಬಳಿ ಹಣ ಪಡೆದು ಚಾಕೊಲೇಟ್ ಖರೀದಿಸಿ ತಿಂದಿದ್ದರು. ಬಳಿಕ ತಾವು ಚಾಕೊಲೇಟ್ ತಿಂದಿದ್ದನ್ನು ತಂದೆಗೆ ತಿಳಿಸಿದ್ದರು. ಕೋಪಗೊಂಡ ತಂದೆ, ಮತ್ತಷ್ಟು ಬೈದಿದ್ದರು ಎನ್ನಲಾಗಿದೆ. ಇದರಿಂದ ನೊಂದ ಬಾಲಕಿಯರು, ಮನೆ ಬಿಟ್ಟು ಹೋಗಿದ್ದರು.
ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣವೆಂಬುದನ್ನು ತಿಳಿದಿದ್ದ ಬಾಲಕಿಯರು, ಮನೆಯಿಂದ ಬರುವಾಗಲೇ ತಮ್ಮ ಗುರುತಿನ ಚೀಟಿ ಸಮೇತ ಜೂನ್ 16ರಂದು ರಾತ್ರಿ ಮೆಜೆಸ್ಟಿಕ್ ನಿಲ್ದಾಣಕ್ಕೆ ತೆರಳಿದ್ದರು. ಅಲ್ಲಿಂದ ಕೆಎಸ್ಆರ್ಟಿಸಿ ಬಸ್ ಹತ್ತಿ ಧರ್ಮಸ್ಥಳಕ್ಕೆ ತೆರಳಿದ್ದರು. ತಮ್ಮಲ್ಲಿದ್ದ ಮೊಬೈಲನ್ನೂ ಎತ್ತಿಕೊಂಡು ಹೋಗಿದ್ದರು. ಇತ್ತ ಮಕ್ಕಳು ಮನೆಗೆ ಬಾರದಿದ್ದರಿಂದ ಗಾಬರಿಗೊಂಡ ಪೋಷಕರು ಕೋಣನಕುಂಟೆ ಠಾಣೆಗೆ ದೂರು ನೀಡಿದ್ದರು.
ಬಾಲಕಿಯರ ಬಳಿಯಿದ್ದ ಮೊಬೈಲ್ ನೆಟ್ವರ್ಕ್ ಆಧರಿಸಿ ತನಿಖೆ ನಡೆಸಿದಾಗ, ಧರ್ಮಸ್ಥಳದಲ್ಲಿರುವ ಮಾಹಿತಿ ಲಭ್ಯವಾಗಿತ್ತು. ಪೊಲೀಸರ ತಂಡ ನೇರವಾಗಿ ಧರ್ಮಸ್ಥಳಕ್ಕೆ ಬಂದು ಬಾಲಕಿಯರನ್ನು ವಶಕ್ಕೆ ಪಡೆದಿದ್ದು ಬೆಂಗಳೂರಿಗೆ ಕರೆತಂದು ಪೋಷಕರಿಗೆ ಒಪ್ಪಿಸಿದೆ.
Angry over father not buying chocolate, sisters travel by free KSRTC bus to Dharmasthala from Belthangady, police trace them by location.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm