ಬ್ರೇಕಿಂಗ್ ನ್ಯೂಸ್
21-06-23 01:50 pm Mangalore Correspondent ಕರಾವಳಿ
ಮಂಗಳೂರು, ಜೂ 21: ಕೇಂದ್ರದಿಂದ ವೆಬ್ ಸೈಟ್ ಹ್ಯಾಕ್ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ. ನೃತ್ಯ ಮಾಡಲು ಬಾರದವ ಅಂಗಳ ಡೊಂಕು ಅಂದನಂತೆ ಈ ಗಾದೆಯಂತೆ ಕಾಂಗ್ರೆಸ್ ನ ಪರಿಸ್ಥಿತಿ ಆಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ದ ಕಟೀಲ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಬಿಟ್ಟಿ ಭಾಗ್ಯ ಘೋಷಿಸಿ ಅದನ್ನ ಕೊಡಲು ವ್ಯವಸ್ಥೆ ಆಗುತ್ತಿಲ್ಲ. ಹೀಗಾಗಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸೋ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಹತ್ತು ವರ್ಷಗಳಲ್ಲಿ ಹತ್ತು ಕೆ.ಜಿ.ಅಕ್ಕಿ ಕೊಡೋ ಕೆಲಸ ಮಾಡಿದೆ, ಈ ಹಿಂದೆ ಸಿದ್ದರಾಮಯ್ಯ ಇದ್ದಾಗಲೂ 27 ರೂ. ಕೇಂದ್ರ ಸರ್ಕಾರ ಕೊಡ್ತಾ ಇತ್ತು, ಮೂರು ರೂ. ರಾಜ್ಯ ಸರ್ಕಾರ ಕೊಟ್ಟರೂ ಭಾವಚಿತ್ರ ಸಿದ್ದರಾಮಯ್ಯರದ್ದೇ ಇತ್ತು ಎಂದರು.

ಚುನಾವಣೆ ಬಂದಾಗ ಪ್ರಣಾಳಿಕೆಯಲ್ಲಿ ಹತ್ತು ಕೆ.ಜಿ ಅಕ್ಕಿ ಕೊಡುತ್ತೇವೆ ಎಂದು ಕಾಂಗ್ರೆಸ್ ಹೇಳಿತ್ತು, ಇವತ್ತು ಹತ್ತು ಕೆ.ಜಿ ಕೊಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಆವತ್ತು ಕೇಂದ್ರ ಸರ್ಕಾರ ಕೊಟ್ರೆ ಮಾತ್ರ ಕೊಡ್ತೀವಿ ಅಂತ ಹೇಳಿದ್ರಾ? ಎಂದು ನಳೀನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.

ಕೇಂದ್ರ ಐದು ಕೆ.ಜಿ ಕೊಡ್ತಾ ಇದೆ, ಕೋವಿಡ್ ಬಂದಾಗಲೂ ಕೊಡ್ತಾ ಇದೆ. ಆದರೆ, ಎರಡು ಲಕ್ಷ ಟನ್ ಅಕ್ಕಿಗೆ ಪ್ರಧಾನಿ ಹತ್ರ ಯಾರೂ ಬೇಡಿಕೆ ಇಟ್ಟಿಲ್ಲ,ಸುಮ್ಮನೆ ಪ್ರಚಾರ ಮತ್ತು ರಾಜಕಾರಣ ಮಾಡಲು ಹೇಳಿಕೆ ಕೊಡ್ತಾ ಇದ್ದಾರೆ. ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನ ಹೋರಾಟಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಅವರ ಭರವಸೆಯಂತೆ ಅಕ್ಕಿ ಕೊಡಲು ಆಗದ್ದಕ್ಕೆ ಕಾಂಗ್ರೆಸ್ ವಿರುದ್ದವೇ ಪ್ರತಿಭಟನೆ ಮಾಡ್ತಾ ಇದಾರೆ. ಇವರ ಸರ್ಕಾರದ ವಿರುದ್ದ ಮಾಡೊ ಪ್ರತಿಭಟನೆ ಮೂರ್ಖತನ ಎಂದು ಕಿಡಿಕಾರಿದರು
ಈಗಾಗಲೇ ಎಲ್ಲಾ ಆರೋಪಗಳ ನಂತರ ಈಗ ಹ್ಯಾಕ್ ಆರೋಪ ಮಾಡ್ತಾ ಇದಾರೆ. ಕೇಂದ್ರ ಸರ್ಕಾರ ಇಂಥ ಕೆಲಸ ಮಾಡಲ್ಲ, ಇದು ಕಾಂಗ್ರೆಸ್ ವಿಫಲತೆ, ಯಾವುದೇ ಹ್ಯಾಕ್ ಕೇಂದ್ರ ಅಥವಾ ಯಾವುದೇ ಸರ್ಕಾರ ಮಾಡಲ್ಲ. ಹಾಗಿದ್ರೆ ಇವರ ಸರ್ಕಾರ ಈಗ ಹ್ಯಾಕ್ ಮಾಡುತ್ತಾ? ಬಿಜೆಪಿ ಕೈಯ್ಯಲ್ಲಿರೋ ಪಾಲಿಕೆ ಹಾಗೂ ಬೇರೆ ಆಡಳಿತದಲ್ಲಿ ಇವರಿಗೆ ಹ್ಯಾಕ್ ಮಾಡಲು ಆಗುತ್ತಾ? ಆರೋಪವನ್ನು ಎಲ್ಲರೂ ಹಾಕಬಹುದು, ಇವರಿಗೆ ನೈತಿಕತೆ ಇಲ್ಲ, ನೈತಿಕತೆ ಇದ್ರೆ ಜನರಿಗೆ ಹತ್ತು ಕೆ.ಜಿ ಅಕ್ಕಿ ಕೊಡಲಿ ಎಂದು ಕಾಂಗ್ರೆಸ್ ಸರ್ಕಾರದ ವಿರುದ ತೀವ್ರ ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರ ಯಾವುದೇ ಅಕ್ಕಿ ಕಡಿತ ಮಾಡಿಲ್ಲ. ಇಲ್ಲಿ ಮಾತ್ರ ನಮ್ಮ ವಿರೋಧ ಪಕ್ಷದ ಸರ್ಕಾರ ಇಲ್ಲ, ಕೆಲವು ರಾಜ್ಯದಲ್ಲಿ ಇದೆ. ಎಲ್ಲೂ ಕೇಂದ್ರ ಸರ್ಕಾರ ಇಂಥದ್ದನ್ನ ಮಾಡಿಲ್ಲ ಸಿದ್ದರಾಮಯ್ಯ ಸುಮ್ಮನೆ ಚಿಲ್ಲರೆ ರಾಜಕಾರಣ ಮಾಡ್ತಾ ಇದ್ದಾರೆ ಎಂದು ಕಿಡಿಕಾರಿದರು.
Nalin kateel slams CM Siddaramaiah in Mangalore over rice politics, says it's a cheap politics played
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm