ಬ್ರೇಕಿಂಗ್ ನ್ಯೂಸ್
21-06-23 05:13 pm Mangalore Correspondent ಕರಾವಳಿ
ಉಳ್ಳಾಲ, ಜೂ.21: ಕಳೆದ ನಾಲ್ಕೈದು ತಿಂಗಳಿಂದ ನಗರ ವ್ಯಾಪ್ತಿಯ ತ್ಯಾಜ್ಯವೆಲ್ಲವೂ ರಾಶಿ ಬಿದ್ದು ಕಸದ ಕೊಂಪೆಯಾಗಿದ್ದ ಉಳ್ಳಾಲ ಬೀಚ್ ರಸ್ತೆಯಲ್ಲಿ ನಿನ್ನೆ ಸ್ಥಳೀಯರು ಆಕ್ರೋಶಿತರಾಗಿ ತ್ಯಾಜ್ಯವನ್ನ ನಗರಸಭೆ ಕಚೇರಿ ಮುಂದೆ ಸುರಿಯಲು ಮುಂದಾದ ಹಿನ್ನಲೆಯಲ್ಲಿ ಎಚ್ಚೆತ್ತ ದಪ್ಪ ಚರ್ಮದ ನಗರಾಡಳಿತವು ಇಂದು ಸೂರ್ಯೋದಯದಿಂದಲೇ ಬೀಚ್ ರಸ್ತೆಯ ತ್ಯಾಜ್ಯವನ್ನು ಮಂಗಳೂರಿನ ಡಂಪಿಗ್ ಯಾರ್ಡ್ ಗೆ ಸಾಗಿಸುವ ಕಾಮಗಾರಿ ಕೈಗೆತ್ತಿಕೊಂಡಿದೆ.
ಕಳೆದ ಐದಾರು ವರ್ಷಗಳಿಂದ ಉಳ್ಳಾಲ ನಗರಸಭೆ ನಗರವಾಸಿಗಳಿಂದ ಸಂಗ್ರಹಗೊಂಡ ತ್ಯಾಜ್ಯವನ್ನ ಬೀಚ್ ರಸ್ತೆ ಬದಿಯಲ್ಲೇ ರಾಶಿ ಹಾಕಿ ವಿಂಗಡಿಸಿ ವಿಲೇವಾರಿ ನಡೆಸುತ್ತಿದೆ. ಇದರಿಂದ ಬೀಚ್ಗೆ ಬರುವ ಪ್ರವಾಸಿಗರು ಮೂಗು ಮುಚ್ಕೊಂಡು ವಿಹರಿಸೋ ಪರಿಸ್ಥಿತಿ ಬಂದಿದೆ. ಕಳೆದ ಐದಾರು ತಿಂಗಳಿಂದ ಇಲ್ಲಿ ರಾಶಿಗಟ್ಟಲೆ ತ್ಯಾಜ್ಯ ಸಂಗ್ರಹಗೊಂಡಿದ್ದು ಅದನ್ನ ವಿಂಗಡಿಸಿ ವಿಲೇವಾರಿ ನಡೆಸೋ ಕಾರ್ಯ ನಗರಸಭೆ ಆಡಳಿತ ಮಾಡಿಲ್ಲ. ತ್ಯಾಜ್ಯ ಶೇಖರಣೆಯಿಂದ ಸ್ಥಳೀಯರ ಬಾವಿಯ ನೀರು ಕಲುಷಿತಗೊಂಡಿದೆ.



ಆಕ್ರೋಶಿತ ಸ್ಥಳೀಯರು ಮಂಗಳವಾರ ತ್ಯಾಜ್ಯವನ್ನ ರಸ್ತೆಗೆಸೆದು ಪ್ರತಿಭಟಿಸಿದ್ದಲ್ಲದೆ, ನಗರಸಭೆ ಕಚೇರಿಗೂ ತ್ಯಾಜ್ಯ ಸುರಿಯಲು ಮುಂದಾಗಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ನಗರಸಭೆ ಪ್ರಭಾರಿ ಪೌರಾಯುಕ್ತೆ ವಾಣಿ ಆಳ್ವಗೆ ಪ್ರತಿಭಟನಾ ನಿರತ ಸೆಲ್ವಿ ಎಂಬ ಮಹಿಳೆ ಕಲುಷಿತಗೊಂಡಿರುವ ತನ್ನ ಬಾವಿಯ ನೀರನ್ನ ಕುಡಿಯುವಂತೆ ಹೇಳಿದ್ದರು. ಕ್ರಮ ಕೈಗೊಳ್ಳುವುದಾಗಿ ಹೇಳಿದ್ದ ವಾಣಿ ಆಳ್ವ ಸ್ಥಳದಿಂದ ತೆರಳಿದ್ದರು.



ಘಟನೆ ಕುರಿತಂತೆ ಬಿಜೆಪಿ ಮುಖಂಡ ಸತೀಶ್ ಕುಂಪಲ ಅವರು ಜಿಲ್ಲಾಧಿಕಾರಿಗೆ ದೂರಿತ್ತಿದ್ದು ಸಮಸ್ಯೆ ಸರಿಪಡಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ರಾಜ್ಯ ಮಟ್ಟದಲ್ಲಿ ಉಳ್ಳಾಲದ ಮಾನ ಹರಾಜಾಗುತ್ತಿದ್ದರೂ ಸುಮ್ಮನಿದ್ದ ನಗರಸಭೆಯ ಅಧಿಕಾರಿಗಳು ಇಂದು ಬೆಳಗ್ಗಿನಿಂದಲೇ ಹಿಟಾಚಿ ಯಂತ್ರದಿಂದ ತ್ಯಾಜ್ಯ ತೆರವು ಮಾಡಲು ಆರಂಭಿಸಿದ್ದಾರೆ.
Mangalore Garbage dump in Ullal beach road, cleaning process begins after protest from residents.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
18-05-26 10:47 pm
HK News Desk
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm