ಬ್ರೇಕಿಂಗ್ ನ್ಯೂಸ್
21-06-23 05:13 pm Mangalore Correspondent ಕರಾವಳಿ
ಉಳ್ಳಾಲ, ಜೂ.21: ಕಳೆದ ನಾಲ್ಕೈದು ತಿಂಗಳಿಂದ ನಗರ ವ್ಯಾಪ್ತಿಯ ತ್ಯಾಜ್ಯವೆಲ್ಲವೂ ರಾಶಿ ಬಿದ್ದು ಕಸದ ಕೊಂಪೆಯಾಗಿದ್ದ ಉಳ್ಳಾಲ ಬೀಚ್ ರಸ್ತೆಯಲ್ಲಿ ನಿನ್ನೆ ಸ್ಥಳೀಯರು ಆಕ್ರೋಶಿತರಾಗಿ ತ್ಯಾಜ್ಯವನ್ನ ನಗರಸಭೆ ಕಚೇರಿ ಮುಂದೆ ಸುರಿಯಲು ಮುಂದಾದ ಹಿನ್ನಲೆಯಲ್ಲಿ ಎಚ್ಚೆತ್ತ ದಪ್ಪ ಚರ್ಮದ ನಗರಾಡಳಿತವು ಇಂದು ಸೂರ್ಯೋದಯದಿಂದಲೇ ಬೀಚ್ ರಸ್ತೆಯ ತ್ಯಾಜ್ಯವನ್ನು ಮಂಗಳೂರಿನ ಡಂಪಿಗ್ ಯಾರ್ಡ್ ಗೆ ಸಾಗಿಸುವ ಕಾಮಗಾರಿ ಕೈಗೆತ್ತಿಕೊಂಡಿದೆ.
ಕಳೆದ ಐದಾರು ವರ್ಷಗಳಿಂದ ಉಳ್ಳಾಲ ನಗರಸಭೆ ನಗರವಾಸಿಗಳಿಂದ ಸಂಗ್ರಹಗೊಂಡ ತ್ಯಾಜ್ಯವನ್ನ ಬೀಚ್ ರಸ್ತೆ ಬದಿಯಲ್ಲೇ ರಾಶಿ ಹಾಕಿ ವಿಂಗಡಿಸಿ ವಿಲೇವಾರಿ ನಡೆಸುತ್ತಿದೆ. ಇದರಿಂದ ಬೀಚ್ಗೆ ಬರುವ ಪ್ರವಾಸಿಗರು ಮೂಗು ಮುಚ್ಕೊಂಡು ವಿಹರಿಸೋ ಪರಿಸ್ಥಿತಿ ಬಂದಿದೆ. ಕಳೆದ ಐದಾರು ತಿಂಗಳಿಂದ ಇಲ್ಲಿ ರಾಶಿಗಟ್ಟಲೆ ತ್ಯಾಜ್ಯ ಸಂಗ್ರಹಗೊಂಡಿದ್ದು ಅದನ್ನ ವಿಂಗಡಿಸಿ ವಿಲೇವಾರಿ ನಡೆಸೋ ಕಾರ್ಯ ನಗರಸಭೆ ಆಡಳಿತ ಮಾಡಿಲ್ಲ. ತ್ಯಾಜ್ಯ ಶೇಖರಣೆಯಿಂದ ಸ್ಥಳೀಯರ ಬಾವಿಯ ನೀರು ಕಲುಷಿತಗೊಂಡಿದೆ.



ಆಕ್ರೋಶಿತ ಸ್ಥಳೀಯರು ಮಂಗಳವಾರ ತ್ಯಾಜ್ಯವನ್ನ ರಸ್ತೆಗೆಸೆದು ಪ್ರತಿಭಟಿಸಿದ್ದಲ್ಲದೆ, ನಗರಸಭೆ ಕಚೇರಿಗೂ ತ್ಯಾಜ್ಯ ಸುರಿಯಲು ಮುಂದಾಗಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ನಗರಸಭೆ ಪ್ರಭಾರಿ ಪೌರಾಯುಕ್ತೆ ವಾಣಿ ಆಳ್ವಗೆ ಪ್ರತಿಭಟನಾ ನಿರತ ಸೆಲ್ವಿ ಎಂಬ ಮಹಿಳೆ ಕಲುಷಿತಗೊಂಡಿರುವ ತನ್ನ ಬಾವಿಯ ನೀರನ್ನ ಕುಡಿಯುವಂತೆ ಹೇಳಿದ್ದರು. ಕ್ರಮ ಕೈಗೊಳ್ಳುವುದಾಗಿ ಹೇಳಿದ್ದ ವಾಣಿ ಆಳ್ವ ಸ್ಥಳದಿಂದ ತೆರಳಿದ್ದರು.



ಘಟನೆ ಕುರಿತಂತೆ ಬಿಜೆಪಿ ಮುಖಂಡ ಸತೀಶ್ ಕುಂಪಲ ಅವರು ಜಿಲ್ಲಾಧಿಕಾರಿಗೆ ದೂರಿತ್ತಿದ್ದು ಸಮಸ್ಯೆ ಸರಿಪಡಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ರಾಜ್ಯ ಮಟ್ಟದಲ್ಲಿ ಉಳ್ಳಾಲದ ಮಾನ ಹರಾಜಾಗುತ್ತಿದ್ದರೂ ಸುಮ್ಮನಿದ್ದ ನಗರಸಭೆಯ ಅಧಿಕಾರಿಗಳು ಇಂದು ಬೆಳಗ್ಗಿನಿಂದಲೇ ಹಿಟಾಚಿ ಯಂತ್ರದಿಂದ ತ್ಯಾಜ್ಯ ತೆರವು ಮಾಡಲು ಆರಂಭಿಸಿದ್ದಾರೆ.
Mangalore Garbage dump in Ullal beach road, cleaning process begins after protest from residents.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am