ಬ್ರೇಕಿಂಗ್ ನ್ಯೂಸ್
21-06-23 05:13 pm Mangalore Correspondent ಕರಾವಳಿ
ಉಳ್ಳಾಲ, ಜೂ.21: ಕಳೆದ ನಾಲ್ಕೈದು ತಿಂಗಳಿಂದ ನಗರ ವ್ಯಾಪ್ತಿಯ ತ್ಯಾಜ್ಯವೆಲ್ಲವೂ ರಾಶಿ ಬಿದ್ದು ಕಸದ ಕೊಂಪೆಯಾಗಿದ್ದ ಉಳ್ಳಾಲ ಬೀಚ್ ರಸ್ತೆಯಲ್ಲಿ ನಿನ್ನೆ ಸ್ಥಳೀಯರು ಆಕ್ರೋಶಿತರಾಗಿ ತ್ಯಾಜ್ಯವನ್ನ ನಗರಸಭೆ ಕಚೇರಿ ಮುಂದೆ ಸುರಿಯಲು ಮುಂದಾದ ಹಿನ್ನಲೆಯಲ್ಲಿ ಎಚ್ಚೆತ್ತ ದಪ್ಪ ಚರ್ಮದ ನಗರಾಡಳಿತವು ಇಂದು ಸೂರ್ಯೋದಯದಿಂದಲೇ ಬೀಚ್ ರಸ್ತೆಯ ತ್ಯಾಜ್ಯವನ್ನು ಮಂಗಳೂರಿನ ಡಂಪಿಗ್ ಯಾರ್ಡ್ ಗೆ ಸಾಗಿಸುವ ಕಾಮಗಾರಿ ಕೈಗೆತ್ತಿಕೊಂಡಿದೆ.
ಕಳೆದ ಐದಾರು ವರ್ಷಗಳಿಂದ ಉಳ್ಳಾಲ ನಗರಸಭೆ ನಗರವಾಸಿಗಳಿಂದ ಸಂಗ್ರಹಗೊಂಡ ತ್ಯಾಜ್ಯವನ್ನ ಬೀಚ್ ರಸ್ತೆ ಬದಿಯಲ್ಲೇ ರಾಶಿ ಹಾಕಿ ವಿಂಗಡಿಸಿ ವಿಲೇವಾರಿ ನಡೆಸುತ್ತಿದೆ. ಇದರಿಂದ ಬೀಚ್ಗೆ ಬರುವ ಪ್ರವಾಸಿಗರು ಮೂಗು ಮುಚ್ಕೊಂಡು ವಿಹರಿಸೋ ಪರಿಸ್ಥಿತಿ ಬಂದಿದೆ. ಕಳೆದ ಐದಾರು ತಿಂಗಳಿಂದ ಇಲ್ಲಿ ರಾಶಿಗಟ್ಟಲೆ ತ್ಯಾಜ್ಯ ಸಂಗ್ರಹಗೊಂಡಿದ್ದು ಅದನ್ನ ವಿಂಗಡಿಸಿ ವಿಲೇವಾರಿ ನಡೆಸೋ ಕಾರ್ಯ ನಗರಸಭೆ ಆಡಳಿತ ಮಾಡಿಲ್ಲ. ತ್ಯಾಜ್ಯ ಶೇಖರಣೆಯಿಂದ ಸ್ಥಳೀಯರ ಬಾವಿಯ ನೀರು ಕಲುಷಿತಗೊಂಡಿದೆ.



ಆಕ್ರೋಶಿತ ಸ್ಥಳೀಯರು ಮಂಗಳವಾರ ತ್ಯಾಜ್ಯವನ್ನ ರಸ್ತೆಗೆಸೆದು ಪ್ರತಿಭಟಿಸಿದ್ದಲ್ಲದೆ, ನಗರಸಭೆ ಕಚೇರಿಗೂ ತ್ಯಾಜ್ಯ ಸುರಿಯಲು ಮುಂದಾಗಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ನಗರಸಭೆ ಪ್ರಭಾರಿ ಪೌರಾಯುಕ್ತೆ ವಾಣಿ ಆಳ್ವಗೆ ಪ್ರತಿಭಟನಾ ನಿರತ ಸೆಲ್ವಿ ಎಂಬ ಮಹಿಳೆ ಕಲುಷಿತಗೊಂಡಿರುವ ತನ್ನ ಬಾವಿಯ ನೀರನ್ನ ಕುಡಿಯುವಂತೆ ಹೇಳಿದ್ದರು. ಕ್ರಮ ಕೈಗೊಳ್ಳುವುದಾಗಿ ಹೇಳಿದ್ದ ವಾಣಿ ಆಳ್ವ ಸ್ಥಳದಿಂದ ತೆರಳಿದ್ದರು.



ಘಟನೆ ಕುರಿತಂತೆ ಬಿಜೆಪಿ ಮುಖಂಡ ಸತೀಶ್ ಕುಂಪಲ ಅವರು ಜಿಲ್ಲಾಧಿಕಾರಿಗೆ ದೂರಿತ್ತಿದ್ದು ಸಮಸ್ಯೆ ಸರಿಪಡಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ರಾಜ್ಯ ಮಟ್ಟದಲ್ಲಿ ಉಳ್ಳಾಲದ ಮಾನ ಹರಾಜಾಗುತ್ತಿದ್ದರೂ ಸುಮ್ಮನಿದ್ದ ನಗರಸಭೆಯ ಅಧಿಕಾರಿಗಳು ಇಂದು ಬೆಳಗ್ಗಿನಿಂದಲೇ ಹಿಟಾಚಿ ಯಂತ್ರದಿಂದ ತ್ಯಾಜ್ಯ ತೆರವು ಮಾಡಲು ಆರಂಭಿಸಿದ್ದಾರೆ.
Mangalore Garbage dump in Ullal beach road, cleaning process begins after protest from residents.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm