ಬ್ರೇಕಿಂಗ್ ನ್ಯೂಸ್
21-06-23 05:13 pm Mangalore Correspondent ಕರಾವಳಿ
ಉಳ್ಳಾಲ, ಜೂ.21: ಕಳೆದ ನಾಲ್ಕೈದು ತಿಂಗಳಿಂದ ನಗರ ವ್ಯಾಪ್ತಿಯ ತ್ಯಾಜ್ಯವೆಲ್ಲವೂ ರಾಶಿ ಬಿದ್ದು ಕಸದ ಕೊಂಪೆಯಾಗಿದ್ದ ಉಳ್ಳಾಲ ಬೀಚ್ ರಸ್ತೆಯಲ್ಲಿ ನಿನ್ನೆ ಸ್ಥಳೀಯರು ಆಕ್ರೋಶಿತರಾಗಿ ತ್ಯಾಜ್ಯವನ್ನ ನಗರಸಭೆ ಕಚೇರಿ ಮುಂದೆ ಸುರಿಯಲು ಮುಂದಾದ ಹಿನ್ನಲೆಯಲ್ಲಿ ಎಚ್ಚೆತ್ತ ದಪ್ಪ ಚರ್ಮದ ನಗರಾಡಳಿತವು ಇಂದು ಸೂರ್ಯೋದಯದಿಂದಲೇ ಬೀಚ್ ರಸ್ತೆಯ ತ್ಯಾಜ್ಯವನ್ನು ಮಂಗಳೂರಿನ ಡಂಪಿಗ್ ಯಾರ್ಡ್ ಗೆ ಸಾಗಿಸುವ ಕಾಮಗಾರಿ ಕೈಗೆತ್ತಿಕೊಂಡಿದೆ.
ಕಳೆದ ಐದಾರು ವರ್ಷಗಳಿಂದ ಉಳ್ಳಾಲ ನಗರಸಭೆ ನಗರವಾಸಿಗಳಿಂದ ಸಂಗ್ರಹಗೊಂಡ ತ್ಯಾಜ್ಯವನ್ನ ಬೀಚ್ ರಸ್ತೆ ಬದಿಯಲ್ಲೇ ರಾಶಿ ಹಾಕಿ ವಿಂಗಡಿಸಿ ವಿಲೇವಾರಿ ನಡೆಸುತ್ತಿದೆ. ಇದರಿಂದ ಬೀಚ್ಗೆ ಬರುವ ಪ್ರವಾಸಿಗರು ಮೂಗು ಮುಚ್ಕೊಂಡು ವಿಹರಿಸೋ ಪರಿಸ್ಥಿತಿ ಬಂದಿದೆ. ಕಳೆದ ಐದಾರು ತಿಂಗಳಿಂದ ಇಲ್ಲಿ ರಾಶಿಗಟ್ಟಲೆ ತ್ಯಾಜ್ಯ ಸಂಗ್ರಹಗೊಂಡಿದ್ದು ಅದನ್ನ ವಿಂಗಡಿಸಿ ವಿಲೇವಾರಿ ನಡೆಸೋ ಕಾರ್ಯ ನಗರಸಭೆ ಆಡಳಿತ ಮಾಡಿಲ್ಲ. ತ್ಯಾಜ್ಯ ಶೇಖರಣೆಯಿಂದ ಸ್ಥಳೀಯರ ಬಾವಿಯ ನೀರು ಕಲುಷಿತಗೊಂಡಿದೆ.



ಆಕ್ರೋಶಿತ ಸ್ಥಳೀಯರು ಮಂಗಳವಾರ ತ್ಯಾಜ್ಯವನ್ನ ರಸ್ತೆಗೆಸೆದು ಪ್ರತಿಭಟಿಸಿದ್ದಲ್ಲದೆ, ನಗರಸಭೆ ಕಚೇರಿಗೂ ತ್ಯಾಜ್ಯ ಸುರಿಯಲು ಮುಂದಾಗಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ನಗರಸಭೆ ಪ್ರಭಾರಿ ಪೌರಾಯುಕ್ತೆ ವಾಣಿ ಆಳ್ವಗೆ ಪ್ರತಿಭಟನಾ ನಿರತ ಸೆಲ್ವಿ ಎಂಬ ಮಹಿಳೆ ಕಲುಷಿತಗೊಂಡಿರುವ ತನ್ನ ಬಾವಿಯ ನೀರನ್ನ ಕುಡಿಯುವಂತೆ ಹೇಳಿದ್ದರು. ಕ್ರಮ ಕೈಗೊಳ್ಳುವುದಾಗಿ ಹೇಳಿದ್ದ ವಾಣಿ ಆಳ್ವ ಸ್ಥಳದಿಂದ ತೆರಳಿದ್ದರು.



ಘಟನೆ ಕುರಿತಂತೆ ಬಿಜೆಪಿ ಮುಖಂಡ ಸತೀಶ್ ಕುಂಪಲ ಅವರು ಜಿಲ್ಲಾಧಿಕಾರಿಗೆ ದೂರಿತ್ತಿದ್ದು ಸಮಸ್ಯೆ ಸರಿಪಡಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ರಾಜ್ಯ ಮಟ್ಟದಲ್ಲಿ ಉಳ್ಳಾಲದ ಮಾನ ಹರಾಜಾಗುತ್ತಿದ್ದರೂ ಸುಮ್ಮನಿದ್ದ ನಗರಸಭೆಯ ಅಧಿಕಾರಿಗಳು ಇಂದು ಬೆಳಗ್ಗಿನಿಂದಲೇ ಹಿಟಾಚಿ ಯಂತ್ರದಿಂದ ತ್ಯಾಜ್ಯ ತೆರವು ಮಾಡಲು ಆರಂಭಿಸಿದ್ದಾರೆ.
Mangalore Garbage dump in Ullal beach road, cleaning process begins after protest from residents.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm