ಬ್ರೇಕಿಂಗ್ ನ್ಯೂಸ್
21-06-23 08:57 pm Mangalore Correspondent ಕರಾವಳಿ
ಮಂಗಳೂರು, ಜೂನ್ 21: ರಸ್ತೆಗೆ ಅಡ್ಡ ಬಂದಿದ್ದ ಮಹಿಳೆಯನ್ನು ತನ್ನ ಚಾಕಚಕ್ಯತೆಯಿಂದ ಬಸ್ಸನ್ನು ಬದಿಗೆ ಸರಿಸಿ ನಿಲ್ಲಿಸಿದ ಚಾಲಕನ ವಿರುದ್ಧ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಡಿಪು ಭಾಗದಿಂದ ತೌಡುಗೋಳಿ ಕ್ರಾಸ್ ಮೂಲಕ ಮಂಗಳೂರು ತೆರಳುತ್ತಿದ್ದ ಗೋಪಾಲಕೃಷ್ಣ ಹೆಸರಿನ ಖಾಸಗಿ ಬಸ್ ಜೂನ್ 20ರಂದು ಮಧ್ಯಾಹ್ನ ಬರುತ್ತಿದ್ದಾಗ ಮಹಿಳೆ ಅಡ್ಡ ಬಂದ ಘಟನೆ ನಡೆದಿತ್ತು. ತೌಡುಗೋಳಿ ಕ್ರಾಸ್ ನಲ್ಲಿ ಮಹಿಳೆ ಅಡ್ಡ ಬಂದಿದ್ದು ಕೂಡಲೇ ಗಮನಿಸಿದ ಚಾಲಕ ನಾಗರಾಜ್ ಬಸ್ಸನ್ನು ಬದಿಗೆ ಸರಿಸಿ ನಿಲ್ಲಿಸಿದ್ದರು. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ನಾಗರಾಜ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು.


ವಿಡಿಯೋದಲ್ಲಿ ಬಸ್ ವೇಗವಾಗಿ ಬರುತ್ತಿರುವುದು ದಾಖಲಾಗಿದ್ದು, ಅದನ್ನು ಅನುಸರಿಸಿ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯೆಂದು ಹೇಳಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಅಲ್ಲದೆ, ಆ ಬಸ್ಸನ್ನು ಸೀಜ್ ಮಾಡಿ ಠಾಣೆಗೆ ತಂದು ಇರಿಸಿದ್ದಾರೆ. ಚಾಲಕನ ವಿರುದ್ಧ ಸೆಕ್ಷನ್ 279, 336 ಐಪಿಸಿ ಜೊತೆಗೆ ಮೋಟಾರು ವಾಹನ ಕಾಯ್ದೆ 211-2 ಪ್ರಕಾರ ಕೇಸು ದಾಖಲಿಸಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ನಿರ್ಲಕ್ಷ್ಯದಿಂದ ರಸ್ತೆ ದಾಟುತ್ತಿದ್ದ ಮಹಿಳೆಯ ಪ್ರಾಣ ಉಳಿದಿತ್ತು.
ಎದುರಿನಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಅನುಸರಿಸಿ ಅಡ್ಡಲಾಗಿ ವಾಹನ ಬರುವುದನ್ನೂ ಲೆಕ್ಕಿಸದೆ ಮುಸ್ಲಿಂ ಮಹಿಳೆಯೊಬ್ಬರು ರಸ್ತೆ ದಾಟಲು ಮುಂದಾಗಿದ್ದರು. ಇದೇ ವೇಳೆ ಬಸ್ ಬಂದಿದ್ದು, ಹಠಾತ್ ಬ್ರೇಕ್ ಹಾಕಿ ಬದಿಗೆ ಸರಿಸಿದ್ದರಿಂದ ಮಹಿಳೆ ಕೂದಲೆಳೆಯಲ್ಲಿ ಬಚಾವ್ ಆಗಿದ್ದರು. ಇದೀಗ ಚಾಲಕನ ವಿರುದ್ಧವೇ ಪೊಲೀಸರು ಕೇಸು ದಾಖಲಿಸಿ ಖಾಸಗಿ ಬಸ್ಗಳ ಧಾವಂತಕ್ಕೆ ಪಾಠ ಕಲಿಸಲು ಮುಂದಾಗಿದ್ದಾರೆ. ಒಳರಸ್ತೆಯಲ್ಲಿ ಸಾಗುವ ಸಂದರ್ಭದಲ್ಲಿ ದುಡುಕುತನ ಮತ್ತು ವೇಗದ ಚಾಲನೆ ಮಾಡಬಾರದು ಎಂದು ಸೂಚನೆ ನೀಡಿದ್ದಾರೆ.
Police file case against bus that saved womans life while crossing road at Naringana in Mangalore for rash driving.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
18-05-26 10:47 pm
HK News Desk
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm