ಬ್ರೇಕಿಂಗ್ ನ್ಯೂಸ್
21-06-23 08:57 pm Mangalore Correspondent ಕರಾವಳಿ
ಮಂಗಳೂರು, ಜೂನ್ 21: ರಸ್ತೆಗೆ ಅಡ್ಡ ಬಂದಿದ್ದ ಮಹಿಳೆಯನ್ನು ತನ್ನ ಚಾಕಚಕ್ಯತೆಯಿಂದ ಬಸ್ಸನ್ನು ಬದಿಗೆ ಸರಿಸಿ ನಿಲ್ಲಿಸಿದ ಚಾಲಕನ ವಿರುದ್ಧ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಡಿಪು ಭಾಗದಿಂದ ತೌಡುಗೋಳಿ ಕ್ರಾಸ್ ಮೂಲಕ ಮಂಗಳೂರು ತೆರಳುತ್ತಿದ್ದ ಗೋಪಾಲಕೃಷ್ಣ ಹೆಸರಿನ ಖಾಸಗಿ ಬಸ್ ಜೂನ್ 20ರಂದು ಮಧ್ಯಾಹ್ನ ಬರುತ್ತಿದ್ದಾಗ ಮಹಿಳೆ ಅಡ್ಡ ಬಂದ ಘಟನೆ ನಡೆದಿತ್ತು. ತೌಡುಗೋಳಿ ಕ್ರಾಸ್ ನಲ್ಲಿ ಮಹಿಳೆ ಅಡ್ಡ ಬಂದಿದ್ದು ಕೂಡಲೇ ಗಮನಿಸಿದ ಚಾಲಕ ನಾಗರಾಜ್ ಬಸ್ಸನ್ನು ಬದಿಗೆ ಸರಿಸಿ ನಿಲ್ಲಿಸಿದ್ದರು. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ನಾಗರಾಜ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು.


ವಿಡಿಯೋದಲ್ಲಿ ಬಸ್ ವೇಗವಾಗಿ ಬರುತ್ತಿರುವುದು ದಾಖಲಾಗಿದ್ದು, ಅದನ್ನು ಅನುಸರಿಸಿ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯೆಂದು ಹೇಳಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಅಲ್ಲದೆ, ಆ ಬಸ್ಸನ್ನು ಸೀಜ್ ಮಾಡಿ ಠಾಣೆಗೆ ತಂದು ಇರಿಸಿದ್ದಾರೆ. ಚಾಲಕನ ವಿರುದ್ಧ ಸೆಕ್ಷನ್ 279, 336 ಐಪಿಸಿ ಜೊತೆಗೆ ಮೋಟಾರು ವಾಹನ ಕಾಯ್ದೆ 211-2 ಪ್ರಕಾರ ಕೇಸು ದಾಖಲಿಸಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ನಿರ್ಲಕ್ಷ್ಯದಿಂದ ರಸ್ತೆ ದಾಟುತ್ತಿದ್ದ ಮಹಿಳೆಯ ಪ್ರಾಣ ಉಳಿದಿತ್ತು.
ಎದುರಿನಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಅನುಸರಿಸಿ ಅಡ್ಡಲಾಗಿ ವಾಹನ ಬರುವುದನ್ನೂ ಲೆಕ್ಕಿಸದೆ ಮುಸ್ಲಿಂ ಮಹಿಳೆಯೊಬ್ಬರು ರಸ್ತೆ ದಾಟಲು ಮುಂದಾಗಿದ್ದರು. ಇದೇ ವೇಳೆ ಬಸ್ ಬಂದಿದ್ದು, ಹಠಾತ್ ಬ್ರೇಕ್ ಹಾಕಿ ಬದಿಗೆ ಸರಿಸಿದ್ದರಿಂದ ಮಹಿಳೆ ಕೂದಲೆಳೆಯಲ್ಲಿ ಬಚಾವ್ ಆಗಿದ್ದರು. ಇದೀಗ ಚಾಲಕನ ವಿರುದ್ಧವೇ ಪೊಲೀಸರು ಕೇಸು ದಾಖಲಿಸಿ ಖಾಸಗಿ ಬಸ್ಗಳ ಧಾವಂತಕ್ಕೆ ಪಾಠ ಕಲಿಸಲು ಮುಂದಾಗಿದ್ದಾರೆ. ಒಳರಸ್ತೆಯಲ್ಲಿ ಸಾಗುವ ಸಂದರ್ಭದಲ್ಲಿ ದುಡುಕುತನ ಮತ್ತು ವೇಗದ ಚಾಲನೆ ಮಾಡಬಾರದು ಎಂದು ಸೂಚನೆ ನೀಡಿದ್ದಾರೆ.
Police file case against bus that saved womans life while crossing road at Naringana in Mangalore for rash driving.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm