ಬ್ರೇಕಿಂಗ್ ನ್ಯೂಸ್
21-06-23 08:57 pm Mangalore Correspondent ಕರಾವಳಿ
ಮಂಗಳೂರು, ಜೂನ್ 21: ರಸ್ತೆಗೆ ಅಡ್ಡ ಬಂದಿದ್ದ ಮಹಿಳೆಯನ್ನು ತನ್ನ ಚಾಕಚಕ್ಯತೆಯಿಂದ ಬಸ್ಸನ್ನು ಬದಿಗೆ ಸರಿಸಿ ನಿಲ್ಲಿಸಿದ ಚಾಲಕನ ವಿರುದ್ಧ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಡಿಪು ಭಾಗದಿಂದ ತೌಡುಗೋಳಿ ಕ್ರಾಸ್ ಮೂಲಕ ಮಂಗಳೂರು ತೆರಳುತ್ತಿದ್ದ ಗೋಪಾಲಕೃಷ್ಣ ಹೆಸರಿನ ಖಾಸಗಿ ಬಸ್ ಜೂನ್ 20ರಂದು ಮಧ್ಯಾಹ್ನ ಬರುತ್ತಿದ್ದಾಗ ಮಹಿಳೆ ಅಡ್ಡ ಬಂದ ಘಟನೆ ನಡೆದಿತ್ತು. ತೌಡುಗೋಳಿ ಕ್ರಾಸ್ ನಲ್ಲಿ ಮಹಿಳೆ ಅಡ್ಡ ಬಂದಿದ್ದು ಕೂಡಲೇ ಗಮನಿಸಿದ ಚಾಲಕ ನಾಗರಾಜ್ ಬಸ್ಸನ್ನು ಬದಿಗೆ ಸರಿಸಿ ನಿಲ್ಲಿಸಿದ್ದರು. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ನಾಗರಾಜ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು.
ವಿಡಿಯೋದಲ್ಲಿ ಬಸ್ ವೇಗವಾಗಿ ಬರುತ್ತಿರುವುದು ದಾಖಲಾಗಿದ್ದು, ಅದನ್ನು ಅನುಸರಿಸಿ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯೆಂದು ಹೇಳಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಅಲ್ಲದೆ, ಆ ಬಸ್ಸನ್ನು ಸೀಜ್ ಮಾಡಿ ಠಾಣೆಗೆ ತಂದು ಇರಿಸಿದ್ದಾರೆ. ಚಾಲಕನ ವಿರುದ್ಧ ಸೆಕ್ಷನ್ 279, 336 ಐಪಿಸಿ ಜೊತೆಗೆ ಮೋಟಾರು ವಾಹನ ಕಾಯ್ದೆ 211-2 ಪ್ರಕಾರ ಕೇಸು ದಾಖಲಿಸಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ನಿರ್ಲಕ್ಷ್ಯದಿಂದ ರಸ್ತೆ ದಾಟುತ್ತಿದ್ದ ಮಹಿಳೆಯ ಪ್ರಾಣ ಉಳಿದಿತ್ತು.
ಎದುರಿನಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಅನುಸರಿಸಿ ಅಡ್ಡಲಾಗಿ ವಾಹನ ಬರುವುದನ್ನೂ ಲೆಕ್ಕಿಸದೆ ಮುಸ್ಲಿಂ ಮಹಿಳೆಯೊಬ್ಬರು ರಸ್ತೆ ದಾಟಲು ಮುಂದಾಗಿದ್ದರು. ಇದೇ ವೇಳೆ ಬಸ್ ಬಂದಿದ್ದು, ಹಠಾತ್ ಬ್ರೇಕ್ ಹಾಕಿ ಬದಿಗೆ ಸರಿಸಿದ್ದರಿಂದ ಮಹಿಳೆ ಕೂದಲೆಳೆಯಲ್ಲಿ ಬಚಾವ್ ಆಗಿದ್ದರು. ಇದೀಗ ಚಾಲಕನ ವಿರುದ್ಧವೇ ಪೊಲೀಸರು ಕೇಸು ದಾಖಲಿಸಿ ಖಾಸಗಿ ಬಸ್ಗಳ ಧಾವಂತಕ್ಕೆ ಪಾಠ ಕಲಿಸಲು ಮುಂದಾಗಿದ್ದಾರೆ. ಒಳರಸ್ತೆಯಲ್ಲಿ ಸಾಗುವ ಸಂದರ್ಭದಲ್ಲಿ ದುಡುಕುತನ ಮತ್ತು ವೇಗದ ಚಾಲನೆ ಮಾಡಬಾರದು ಎಂದು ಸೂಚನೆ ನೀಡಿದ್ದಾರೆ.
Police file case against bus that saved womans life while crossing road at Naringana in Mangalore for rash driving.
20-05-25 10:49 pm
Bangalore Correspondent
Speaker UT Khader: ವಿಧಾನಸಭೆ ಗ್ರೂಪ್ ಸಿ, ಡಿ ಹುದ...
20-05-25 08:22 pm
K S Eshwarappa: ಸೇನಾ ಕಾರ್ಯಾಚರಣೆ ಪ್ರಶ್ನಿಸುವ ದೇ...
20-05-25 07:18 pm
Bangalore Rain, Death: ಒಂದೇ ಮಳೆಗೆ ತತ್ತರಿಸಿದ ಬ...
20-05-25 03:30 pm
Shashi Kumar IPS, Corruption, Hubballi, polic...
19-05-25 04:00 pm
20-05-25 02:36 pm
HK News Desk
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
20-05-25 11:12 pm
Mangalore Correspondent
ಕೊಂಡಾಣ ಜಾತ್ರೆಯಲ್ಲಿ ಮುತ್ತಣ್ಣ ಶೆಟ್ಟಿ ಮುಂಡಾಸು ಕಟ...
20-05-25 06:59 pm
Manipal Rain, Udupi: ಕರಾವಳಿಯಲ್ಲಿ ದಿಢೀರ್ ಮಳೆಗಾ...
20-05-25 02:03 pm
Job Scam Mangalore, Police Suspend, Hireglow...
19-05-25 11:07 pm
Jail Attack, Suhas Shetty, Mangalore, Chotte...
19-05-25 10:14 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm