ಬ್ರೇಕಿಂಗ್ ನ್ಯೂಸ್
21-06-23 08:57 pm Mangalore Correspondent ಕರಾವಳಿ
ಮಂಗಳೂರು, ಜೂನ್ 21: ರಸ್ತೆಗೆ ಅಡ್ಡ ಬಂದಿದ್ದ ಮಹಿಳೆಯನ್ನು ತನ್ನ ಚಾಕಚಕ್ಯತೆಯಿಂದ ಬಸ್ಸನ್ನು ಬದಿಗೆ ಸರಿಸಿ ನಿಲ್ಲಿಸಿದ ಚಾಲಕನ ವಿರುದ್ಧ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಡಿಪು ಭಾಗದಿಂದ ತೌಡುಗೋಳಿ ಕ್ರಾಸ್ ಮೂಲಕ ಮಂಗಳೂರು ತೆರಳುತ್ತಿದ್ದ ಗೋಪಾಲಕೃಷ್ಣ ಹೆಸರಿನ ಖಾಸಗಿ ಬಸ್ ಜೂನ್ 20ರಂದು ಮಧ್ಯಾಹ್ನ ಬರುತ್ತಿದ್ದಾಗ ಮಹಿಳೆ ಅಡ್ಡ ಬಂದ ಘಟನೆ ನಡೆದಿತ್ತು. ತೌಡುಗೋಳಿ ಕ್ರಾಸ್ ನಲ್ಲಿ ಮಹಿಳೆ ಅಡ್ಡ ಬಂದಿದ್ದು ಕೂಡಲೇ ಗಮನಿಸಿದ ಚಾಲಕ ನಾಗರಾಜ್ ಬಸ್ಸನ್ನು ಬದಿಗೆ ಸರಿಸಿ ನಿಲ್ಲಿಸಿದ್ದರು. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ನಾಗರಾಜ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು.


ವಿಡಿಯೋದಲ್ಲಿ ಬಸ್ ವೇಗವಾಗಿ ಬರುತ್ತಿರುವುದು ದಾಖಲಾಗಿದ್ದು, ಅದನ್ನು ಅನುಸರಿಸಿ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯೆಂದು ಹೇಳಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಅಲ್ಲದೆ, ಆ ಬಸ್ಸನ್ನು ಸೀಜ್ ಮಾಡಿ ಠಾಣೆಗೆ ತಂದು ಇರಿಸಿದ್ದಾರೆ. ಚಾಲಕನ ವಿರುದ್ಧ ಸೆಕ್ಷನ್ 279, 336 ಐಪಿಸಿ ಜೊತೆಗೆ ಮೋಟಾರು ವಾಹನ ಕಾಯ್ದೆ 211-2 ಪ್ರಕಾರ ಕೇಸು ದಾಖಲಿಸಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ನಿರ್ಲಕ್ಷ್ಯದಿಂದ ರಸ್ತೆ ದಾಟುತ್ತಿದ್ದ ಮಹಿಳೆಯ ಪ್ರಾಣ ಉಳಿದಿತ್ತು.
ಎದುರಿನಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಅನುಸರಿಸಿ ಅಡ್ಡಲಾಗಿ ವಾಹನ ಬರುವುದನ್ನೂ ಲೆಕ್ಕಿಸದೆ ಮುಸ್ಲಿಂ ಮಹಿಳೆಯೊಬ್ಬರು ರಸ್ತೆ ದಾಟಲು ಮುಂದಾಗಿದ್ದರು. ಇದೇ ವೇಳೆ ಬಸ್ ಬಂದಿದ್ದು, ಹಠಾತ್ ಬ್ರೇಕ್ ಹಾಕಿ ಬದಿಗೆ ಸರಿಸಿದ್ದರಿಂದ ಮಹಿಳೆ ಕೂದಲೆಳೆಯಲ್ಲಿ ಬಚಾವ್ ಆಗಿದ್ದರು. ಇದೀಗ ಚಾಲಕನ ವಿರುದ್ಧವೇ ಪೊಲೀಸರು ಕೇಸು ದಾಖಲಿಸಿ ಖಾಸಗಿ ಬಸ್ಗಳ ಧಾವಂತಕ್ಕೆ ಪಾಠ ಕಲಿಸಲು ಮುಂದಾಗಿದ್ದಾರೆ. ಒಳರಸ್ತೆಯಲ್ಲಿ ಸಾಗುವ ಸಂದರ್ಭದಲ್ಲಿ ದುಡುಕುತನ ಮತ್ತು ವೇಗದ ಚಾಲನೆ ಮಾಡಬಾರದು ಎಂದು ಸೂಚನೆ ನೀಡಿದ್ದಾರೆ.
Police file case against bus that saved womans life while crossing road at Naringana in Mangalore for rash driving.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm