ಬ್ರೇಕಿಂಗ್ ನ್ಯೂಸ್
01-11-20 07:52 pm Udupi Reporter ಕರಾವಳಿ
ಉಡುಪಿ, ನ.1: ಕುಕ್ಕೆಹಳ್ಳಿಯ ರಕ್ಷಿತಾ ನಾಯಕ್(19) ಸಂಶಯಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪ್ರಿಯಕರ ಕೊಲ್ಲೂರಿನ ಜಡ್ಕಲ್ ನಿವಾಸಿ ಪ್ರಶಾಂತ್ ಕುಂದರ್(24) ನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ರಕ್ಷಿತಾಳನ್ನು ಪ್ರೇಮಿಸುವ ನಾಟಕವಾಡಿ ಅತ್ಯಾಚಾರ ಎಸಗಿ, ಗರ್ಭಿಣಿ ಮಾಡಿದ್ದು, ನಂತರ ಆಕೆಯ ಅನುಮತಿ ಇಲ್ಲದೆ ಗರ್ಭಪಾತ ಮಾಡಿಸಿದ್ದ. ಮತ್ತು ಆಕೆ ಆತ್ಮಹತ್ಯೆ ಮಾಡುವಂತೆ ಪ್ರಚೋದನೆ ನೀಡಿರುವುದಾಗಿ ಮೃತಳ ತಂದೆ ಪ್ರಭಾಕರ ನಾಯಕ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ದೂರಿನ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ರಕ್ಷಿತಾ ಅ.24ರಂದು ಅಂಬಾಗಿಲಿನಲ್ಲಿರುವ ಬಾಡಿಗೆ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ. ಬಳಿಕ ಆಕೆಯನ್ನು ಪ್ರಶಾಂತ್ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪರಾರಿ ಯಾಗಿದ್ದನು. ಆದರೆ ಯುವತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಳು. ಸಾರ್ವಜನಿಕ ಕುತೂಹಲ ಕೆರಳಿಸಿದ್ದ ಪ್ರಕರಣದಲ್ಲಿ ಆರೋಪಿ ಪ್ರಶಾಂತ್ನನ್ನು ಉಡುಪಿ ನಗರ ಪೊಲೀಸರು ವಿಚಾರಣೆ ನಡೆಸಿ ಬಿಟ್ಟಿದ್ದರು. ಯುವತಿ ಕಡೆಯವರು ಸಂಶಯ ಪಡಿಸಿ ದೂರು ನೀಡದ ಕಾರಣ ಪೊಲೀಸರಿಗೆ ಪ್ರಕರಣ ದಾಖಲಿಸುವುದು ಸಾಧ್ಯವಾಗಿರಲಿಲ್ಲ. ಇದೀಗ ಯುವತಿ ತಂದೆಯೇ ಆರೋಪಿ ಪ್ರಶಾಂತ್ ಹೆಸರು ಉಲ್ಲೇಖಿಸಿ ದೂರು ನೀಡಿದ್ದು ಪೊಲೀಸರು ಆತನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
In connection to the mysterious death of Rakshitha Nayak boyfriend Prashanth Kunder has been arrestes by the Udupi Police.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm