ರಕ್ಷಿತಾ ಪ್ರಕರಣ ; ಗರ್ಭಿಣಿಯಾಗಿಸಿ ವಂಚಿಸಿದ್ದಾಗಿ ತಂದೆ ದೂರು, ಆರೋಪಿ ಬಂಧನ 

01-11-20 07:52 pm       Udupi Reporter   ಕರಾವಳಿ

ರಕ್ಷಿತಾ ನಾಯಕ್ (19) ಸಂಶಯಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪ್ರಿಯಕರ ಪ್ರಶಾಂತ್ ಕುಂದರ್(24) ಎಂಬಾತನನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.

ಉಡುಪಿ, ನ.1: ಕುಕ್ಕೆಹಳ್ಳಿಯ ರಕ್ಷಿತಾ ನಾಯಕ್(19) ಸಂಶಯಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪ್ರಿಯಕರ ಕೊಲ್ಲೂರಿನ ಜಡ್ಕಲ್ ನಿವಾಸಿ ಪ್ರಶಾಂತ್ ಕುಂದರ್(24) ನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ರಕ್ಷಿತಾಳನ್ನು ಪ್ರೇಮಿಸುವ ನಾಟಕವಾಡಿ ಅತ್ಯಾಚಾರ ಎಸಗಿ, ಗರ್ಭಿಣಿ ಮಾಡಿದ್ದು, ನಂತರ ಆಕೆಯ ಅನುಮತಿ ಇಲ್ಲದೆ ಗರ್ಭಪಾತ ಮಾಡಿಸಿದ್ದ. ಮತ್ತು ಆಕೆ ಆತ್ಮಹತ್ಯೆ ಮಾಡುವಂತೆ ಪ್ರಚೋದನೆ ನೀಡಿರುವುದಾಗಿ ಮೃತಳ ತಂದೆ ಪ್ರಭಾಕರ ನಾಯಕ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ದೂರಿನ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ. 

ರಕ್ಷಿತಾ ಅ.24ರಂದು ಅಂಬಾಗಿಲಿನಲ್ಲಿರುವ ಬಾಡಿಗೆ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ. ಬಳಿಕ ಆಕೆಯನ್ನು ಪ್ರಶಾಂತ್ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪರಾರಿ ಯಾಗಿದ್ದನು. ಆದರೆ ಯುವತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಳು. ಸಾರ್ವಜನಿಕ ಕುತೂಹಲ ಕೆರಳಿಸಿದ್ದ ಪ್ರಕರಣದಲ್ಲಿ ಆರೋಪಿ ಪ್ರಶಾಂತ್‌ನನ್ನು ಉಡುಪಿ ನಗರ ಪೊಲೀಸರು ವಿಚಾರಣೆ ನಡೆಸಿ ಬಿಟ್ಟಿದ್ದರು. ಯುವತಿ ಕಡೆಯವರು ಸಂಶಯ ಪಡಿಸಿ ದೂರು‌ ನೀಡದ ಕಾರಣ ಪೊಲೀಸರಿಗೆ ಪ್ರಕರಣ ದಾಖಲಿಸುವುದು ಸಾಧ್ಯವಾಗಿರಲಿಲ್ಲ. ಇದೀಗ ಯುವತಿ ತಂದೆಯೇ ಆರೋಪಿ ಪ್ರಶಾಂತ್ ಹೆಸರು ಉಲ್ಲೇಖಿಸಿ ದೂರು ನೀಡಿದ್ದು ಪೊಲೀಸರು ಆತನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

In connection to the mysterious death of Rakshitha Nayak boyfriend Prashanth Kunder has been arrestes by the Udupi Police.