ಬ್ರೇಕಿಂಗ್ ನ್ಯೂಸ್
01-11-20 08:59 pm Mangaluru Correspondent ಕರಾವಳಿ
ಮಂಗಳೂರು, ನ.1: ಪ್ರತ್ಯೇಕ ತುಳು ರಾಜ್ಯಕ್ಕಾಗಿ ಬಾಂಬ್ ಸ್ಫೋಟ ಮಾಡಿ ಜನರನ್ನು ಪ್ರಚೋದಿಸಬೇಕೆಂದು ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಹೇಳುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ.
ಪ್ರತ್ಯೇಕ ತುಳು ರಾಜ್ಯಕ್ಕಾಗಿ ಹೋರಾಟ ಭುಗಿಲೇಳಬೇಕು. ಇದಕ್ಕಾಗಿ ದೊಡ್ಡ ಮಟ್ಟದಲ್ಲಿ ‘ಬ್ಲಾಸ್ಟ್’ ಮಾಡಬೇಕು. ಟಯರ್ಗಳಿಗೆ ಬೆಂಕಿ ಹಚ್ಚಬೇಕು. ಡಿ.ವಿ.ಸದಾನಂದ ಗೌಡ, ನಳಿನ್ ಕುಮಾರ್ ಕಟೀಲು ಸೇರಿದಂತೆ ರಾಜಕೀಯ ನಾಯಕರಿಗೆಲ್ಲ ಹಿಗ್ಗಾಮುಗ್ಗ ಬೈಯ್ಯಬೇಕು ಎಂದು ಹೇಳುತ್ತಿರುವುದು ಆಡಿಯೋದಲ್ಲಿದೆ. ತುಳುವಿನಲ್ಲಿ ಯಾರೊಂದಿಗೋ ಮಾತನಾಡುತ್ತಿರುವ ವೇಳೆ ಈ ಆಡಿಯೋ ರೆಕಾರ್ಡ್ ಮಾಡಲಾಗಿದ್ದು ಉದ್ದೇಶಪೂರ್ವಕ ಇದನ್ನು ರೆಕಾರ್ಡ್ ಮಾಡಿ ಜಾಲತಾಣದಲ್ಲಿ ಬಿಡಲಾಗಿದೆ. ರಾಜ್ಯದ ಮೂಲೆ ಮೂಲೆಯಲ್ಲಿ ತುಳು ರಾಜ್ಯಕ್ಕಾಗಿ ಹೋರಾಟ ಆದಲ್ಲಿ ಅಕಾಡಮಿಯವರನ್ನು ಕರೆದು ಸರಕಾರದ ಕಡೆಯಿಂದ ಮಾತುಕತೆ ನಡೆಸುತ್ತಾರೆ. ಆಗ ನಾವು ಹೋರಾಟಗಾರರನ್ನು ಸಮಾಧಾನಿಸಲು ಬೇರೆ ದಾರಿ ಇಲ್ಲ. ತುಳು ರಾಜ್ಯ ಘೋಷಣೆಯೇ ಮಾಡಬೇಕು ಎಂದು ಹೇಳಬಹುದು. ಹೀಗೆಂದು ದಯಾನಂದ್ ಕತ್ತಲ್ಸಾರ್ ಮಾತನಾಡಿದ್ದಾರೆ ಎನ್ನಲಾಗುವ ಆಡಿಯೋ ಇದ್ದು ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿಬಂದಿದೆ.

ಸರಕಾರದ ಅಕಾಡಮಿಯ ಅಧ್ಯಕ್ಷರಾಗಿರುವ ವ್ಯಕ್ತಿಯೊಬ್ಬರು ಹೀಗೆ ಹಿಂಸೆಗೆ ಪ್ರಚೋದಿಸುವ ರೀತಿ ಹೇಳಿಕೆ ನೀಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದಯಾನಂದ ಕತ್ತಲ್ಸಾರ್, ಅದು ತನ್ನದೇ ಆಡಿಯೋ.. ಆದರೆ ಅದನ್ನು ಉದ್ದೇಶಪೂರ್ವಕ ಎಡಿಟ್ ಮಾಡಿ ಬಿಡಲಾಗಿದೆ. ಇದು ನನ್ನ ತೇಜೋವಧೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ.
ತಾನೇ ವೈರಲ್ ಮಾಡಿದ್ದಾಗಿ ಹೇಳಿಕೆ !
ಇದೇ ವೇಳೆ, ಆಡಿಯೋ ಪ್ರಸಾರವನ್ನು ತಾನೇ ಮಾಡಿದ್ದಾಗಿ ತುಳುನಾಡು ಟ್ರಸ್ಟ್ ಅಧ್ಯಕ್ಷ ಜಿ.ವಿ.ಎ ಸ್.ಉಳ್ಳಾಲ್ ಎಂಬವರು ಹೇಳಿದ್ದಾರೆ. ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ್ಸಾರ್, ತುಳುನಾಡು ಸ್ಥಾಪನೆಗಾಗಿ ಈ ರೀತಿ ಪ್ರಚೋದನಾತ್ಮಕವಾಗಿ ನನ್ನ ಜೊತೆಯೇ ಮಾತನಾಡಿದ್ದು. ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿ ಹೀಗೆ ಮಾತನಾಡುವುದು ಸರಿಯಲ್ಲ. ಇದೇ ಕಾರಣಕ್ಕೆ ಈ ಮಾತುಕತೆಯ ಆಡಿಯೋವನ್ನು ವೈರಲ್ ಮಾಡಿದ್ದೇನೆ ಎಂದು ಜಿ.ವಿ.ಎಸ್.ಉಳ್ಳಾಲ್ ತಿಳಿಸಿದ್ದಾರೆ.
ತುಳು ಲಿಪಿ ವಿಚಾರವಾಗಿ ದಯಾನಂದ ಕತ್ತಲ್ಸಾರ್ ಅವರನ್ನು ಭೇಟಿಯಾಗಿದ್ದೆ. ಈ ವೇಳೆ ಮಾಹಿತಿಗಾಗಿ ಅವರ ಮಾತುಗಳನ್ನು ರೆಕಾರ್ಡ್ ಮಾಡಿಕೊಂಡಿದ್ದೆ. ಕತ್ತಲ್ಸಾರ್ ಮಾತನಾಡುತ್ತಾ, ಪ್ರತ್ಯೇಕ ತುಳು ರಾಜ್ಯಕ್ಕಾಗಿ ತುಳುನಾಡು ಟ್ರಸ್ಟ್ ಮೂಲಕ ಹಿಂಸೆಗೆ ಇಳಿಯುವಂತೆ ಹೇಳಿದ್ದರು ಎಂದಿದ್ದಾರೆ.
Tulu Academy President Dayananda Kathalsar lands in trouble for controversial statement of stating to Blast Managluru to make it a complete Tulu speaking District. Audio of this has gone viral on social media.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm