ಬ್ರೇಕಿಂಗ್ ನ್ಯೂಸ್
22-06-23 08:35 pm Mangalore Correspondent ಕರಾವಳಿ
ಮಂಗಳೂರು, ಜೂನ್ 22: ಕೋಣಾಜೆ ಠಾಣೆ ವ್ಯಾಪ್ತಿಯ ತೌಡುಗೋಳಿ ಕ್ರಾಸ್ ನಲ್ಲಿ ಬಸ್ ಬರುತ್ತಿದ್ದಾಗ ಮಹಿಳೆ ರಸ್ತೆ ದಾಟಿದ್ದ ಸಿಸಿಟಿವಿ ದೃಶ್ಯ ವೈರಲ್ ಆಗಿತ್ತು. ಮಹಿಳೆ ರಸ್ತೆ ದಾಟುವುದನ್ನು ನೋಡಿದ ಬಸ್ ಚಾಲಕ ಬಸ್ಸನ್ನು ಬದಿಗೆ ಸರಿಸಿ ಮಹಿಳೆಯನ್ನು ರಕ್ಷಿಸಿದ್ದು ಮೆಚ್ಚುಗೆಗೂ ಕಾರಣವಾಗಿತ್ತು. ಇದೀಗ ರಸ್ತೆ ನಿಯಮ ಪಾಲಿಸದೆ ನಿರ್ಲಕ್ಷ್ಯದಿಂದ ರಸ್ತೆ ದಾಟಿದ್ದ ಮಹಿಳೆಯ ವಿರುದ್ಧ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಮೋಟಾರು ವಾಹನ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
ಸಿಸಿಟಿವಿ ದೃಶ್ಯದಲ್ಲಿ ಬಸ್ ವೇಗವಾಗಿ ಬರುತ್ತಿದ್ದುದನ್ನು ಗಮನಿಸಿ ಮಂಗಳೂರು ಪೊಲೀಸರು ಚಾಲಕನ ವಿರುದ್ಧ ನಿರ್ಲಕ್ಷ್ಯದ ಚಾಲನೆಯೆಂದು ಪ್ರಕರಣ ದಾಖಲಿಸಿದ್ದರು. ಬಸ್ಸನ್ನು ಬದಿಗೆ ಸರಿಸಿ ಮಹಿಳೆಯನ್ನು ರಕ್ಷಣೆ ಮಾಡಿದ್ದ ಚಾಲಕನ ವಿರುದ್ಧ ಕೇಸು ದಾಖಲಿಸಿದ್ದಕ್ಕೆ ಆಕ್ಷೇಪವೂ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಸಿಸಿಟಿವಿ ವಿಡಿಯೋ ಆಧರಿಸಿ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದು, ನಿರ್ಲಕ್ಷ್ಯದಿಂದ ರಸ್ತೆಯಲ್ಲಿ ನಡೆದುಕೊಂಡು ಹೋಗುವುದೂ ಮೋಟಾರು ವಾಹನ ಕಾಯ್ದೆಗೆ ವಿರುದ್ಧ. ಪಾದಚಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.
ಮಹಿಳೆಯ ವಿರುದ್ಧ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 13 ಮತ್ತು ಪೊಲೀಸ್ ಏಕ್ಟ್ 92 ಜಿ ಪ್ರಕಾರ ಕೇಸು ದಾಖಲಿಸಿಕೊಳ್ಳಲಾಗಿದ್ದು, ದಂಡ ವಿಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಿರ್ಲಕ್ಷ್ಯದಿಂದ ರಸ್ತೆಯಲ್ಲಿ ನಡೆಯುವ ಮಂದಿಗೆ ಇದೇ ಮೊದಲ ಬಾರಿಗೆ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗಿದ್ದು, ಈ ರೀತಿ ಮಾಡುವ ಮಂದಿ ಇನ್ಮುಂದೆ ಎಚ್ಚರಿಕೆ ವಹಿಸಬೇಕಾಗಿದೆ.
Mangalore Bus video viral, police book case on woman for carelessness while crossing road. The presence of mind of the Bus Driver saved the life of woman crossing the road. The police have also seized the bus and booked a case against the Bus Driver too.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm