ಬ್ರೇಕಿಂಗ್ ನ್ಯೂಸ್
02-11-20 11:01 am Mangalore Correspondent ಕರಾವಳಿ
ಉಳ್ಳಾಲ, ನವೆಂಬರ್ 02: ನಾವು ಯಾವುದೇ ಭಾಷಾ ವಿರೋಧಿಗಳಲ್ಲ. ಎಲ್ಲ ಭಾಷೆಗಳನ್ನು ಗೌರವಿಸುವವರು. ಆದರೆ ಕನ್ನಡ ಸಂಸ್ಕೃತಿಯನ್ನು ಅಳಿಸುವ ಪ್ರಯತ್ನ ಸಹಿಸಲು ಅಸಾಧ್ಯ ಎಂದು ಮಂಗಳೂರು ಹರಿಕಥಾ ಪರಿಷತ್ ನ ಅಧ್ಯಕ್ಷರಾದ ಕೆ. ಮಹಾಬಲ ಶೆಟ್ಟಿ ಅಭಿಪ್ರಾಯಪಟ್ಟರು. ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ(ರಿ) ವತಿಯಿಂದ ತೊಕ್ಕೊಟ್ಟಿನ ಖಾಸಗಿ ಸಭಾಂಗಣದಲ್ಲಿ ಭಾನುವಾರ ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ರಾಜ್ಯೋತ್ಸವದಂತಹ ಉತ್ಸವಗಳನ್ನು ಬಹಳ ಉತ್ಸಾಹದಿಂದ ಆಚರಿಸುವಂತಾಗಬೇಕು. ಕರ್ನಾಟಕದ ಅವಿಭಾಜ್ಯ ಅಂಗ ಕಾಸರಗೋಡು. ಅದು ಪುನಶ್ಚೇತನಗೊಂಡು ನಮ್ಮೊಂದಿಗೆ ಸೇರುವ ಅವಶ್ಯಕತೆ ಇದೆ. ಆಂಗ್ಲ ಭಾಷೆಯನ್ನು ಕನ್ನಡದೊಂದಿಗೆ ಮಿಶ್ರಣಗೊಳಿಸಿ ಸಂಸ್ಕೃತಿ ನಾಶಗೊಳಿಸಲಾಗುತ್ತಿದೆ. ಸಂಬಂಧ ಪಟ್ಟ ಇಲಾಖೆಗಳು ಇದನ್ನು ಸರಿಪಡಿಸಲು ಪ್ರಯತ್ನಿಸಿದರೂ ಆ ಪ್ರಯತ್ನಗಳು ಸಂಪೂರ್ಣಗೊಳ್ಳಲಿಲ್ಲ. ಕನ್ನಡದ ಉದ್ದಾರ, ಸಾಹಿತ್ಯ , ಸಂಸ್ಕೃತಿ ಅನುಷ್ಠಾನಕ್ಕಾಗಿ ದುಡಿಯುವ ಹೊಣೆಗಾರಿಕೆ ಮಂದಿನ ಯುವಪೀಳಿಗೆಯದ್ದು ಎಂದರು.

ನಿವೃತ್ತ ಶಿಕ್ಷಕರಾದ ವಾಸುದೇವರಾವ್ ಕನ್ನಡ ರಾಜ್ಯೋತ್ಸವದ ಸಂದೇಶ ನೀಡಿದರು. ನಿವೃತ್ತ ಮುಖ್ಯ ಶಿಕ್ಷಕರಾದ ರತ್ನಾವತಿ ಜೆ ಬೈಕಾಡಿ, ನಿವೃತ್ತ ಅಂಗನವಾಡಿ ಶಿಕ್ಷಕಿ ಶಶಿಕಲಾ ಗಟ್ಟಿ, ನಿವೃತ್ತ ಪ್ರಾಚಾರ್ಯರಾದ ಲಲಿತಾ ಕೆ ಆಚಾರ್ ಅವರನ್ನು ಸನ್ಮಾನಿಸಲಾಯಿತು.
ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕರ್ ಉಳ್ಳಾಲ್, ಉತ್ಸವ ಸಮಿತಿ ಸ್ವಾಗತಾಧ್ಯಕ್ಷ ಮಾಜಿ ಶಾಸಕ ಕೆ ಜಯರಾಮ ಶೆಟ್ಟಿ, ಗೌರವ ಉಪಾಧ್ಯಕ್ಷರಾದ ಸದಾನಂದ ಬಂಗೇರ, ಹೈದರ್ ಪರ್ತಿಪ್ಪಾಡಿ, ಕೋಶಾಧಿಕಾರಿ ಆನಂದ ಕೆ ಅಸೈಗೋಳಿ, ದ.ಕ. ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ, ಕೆ.ಎಂ.ಕೆ ಮಂಜನಾಡಿ, ಅಬ್ದುಲ್ ಅಜೀಜ್ ಹಕ್ ಮೊದಲಾದವರು ಇದ್ದರು.
Need to take efforts to save Kannada culture and language stated Harikata Parishath President Mahabala Shetty on the occasion of kannada rajyotsava 2020 function held at Ullal.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm