ಬ್ರೇಕಿಂಗ್ ನ್ಯೂಸ್
23-06-23 09:30 pm Mangalore Correspondent ಕರಾವಳಿ
ಮಂಗಳೂರು, ಜೂನ್ 23: ನಾಗರ ಹಾವಿನ ಹೊಟ್ಟೆಯೊಳಗೆ ಸೇರಿದ್ದ ಪ್ಲಾಸ್ಟಿಕ್ ಡಬ್ಬ ಒಂದನ್ನು ಮಂಗಳೂರಿನ ಪಶು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.
ಬಂಟ್ವಾಳದ ವಗ್ಗದ ಸಾಲುಮರ ತಿಮ್ಮಕ್ಕ ಉದ್ಯಾನವನದ ಸಮೀಪದಲ್ಲಿ ಬಿಲವೊಂದರಲ್ಲಿ ಸಿಲುಕಿದ್ದ ನಾಗರಹಾವಿನ ಬಗ್ಗೆ ಸ್ಥಳೀಯ ಗ್ರಾಪಂ ಉಪಾಧ್ಯಕ್ಷೆ ವಸಂತಿ ಅವರು ಹಾವು ಹಿಡಿಯುವ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದ್ದರು. ಮೂರು ದಿನಗಳಿಂದ ಅದನ್ನು ಗಮನಿಸುತ್ತಿದ್ದ ವಸಂತಿ ಮನೆಯವರು ಕೊನೆಗೆ ಅದರ ರಕ್ಷಣೆಗೆ ಮುಂದಾಗಿದ್ದರು.
ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಹಾವನ್ನು ಬಿಲದಿಂದ ಹೊರ ತೆಗೆದು ರಕ್ಷಿಸಿದ್ದಾರೆ. ಈ ವೇಳೆ ಅದರ ತಲೆಯ ಭಾಗದಲ್ಲಿ ಗಾಯಗಳಾಗಿದ್ದರಿಂದ ಚಿಕಿತ್ಸೆಗಾಗಿ ಮಂಗಳೂರಿನ ಪಶುವೈದ್ಯ ಡಾ.ಯಶಸ್ವಿ ನಾರಾವಿ ಅವರಲ್ಲಿಗೆ ತಂದಿದ್ದರು.
ಗಾಯಕ್ಕೆ ಚಿಕಿತ್ಸೆ ಒದಗಿಸಿದ ವೈದ್ಯರು ಹಾವಿನ ಹೊಟ್ಟೆ ಉಬ್ಬೇರಿದ್ದನ್ನು ಗಮನಿಸಿ ಎಕ್ಸ್ ರೇ ಮಾಡಿದ್ದರು. ಆಗ ಹಾವಿನ ಉದರದೊಳಗೆ ಪ್ಲಾಸ್ಟಿಕ್ ವಸ್ತು ಇರುವುದು ಗಮನಕ್ಕೆ ಬಂದಿತ್ತು. ಹಾಗಾಗಿ ಹಾವಿಗೆ ಶಸ್ತ್ರಚಿಕಿತ್ಸೆ ನಡೆಸಿ ಉದರದಲ್ಲಿದ್ದ ಸುಣ್ಣದ ಪ್ಲಾಸ್ಟಿಕ್ ಡಬ್ಬವನ್ನು ಹೊರತೆಗೆದಿದ್ದಾರೆ.
ವೈದ್ಯರ ಪ್ರಕಾರ 'ಸುಮಾರು ಐದು ಅಡಿ ಉದ್ದದ ಹೆಣ್ಣು ನಾಗರಹಾವು ಇದಾಗಿತ್ತು. 10 ವರ್ಷ ಪ್ರಾಯ ಆಗಿರಬಹುದು. ಹಾವು ಮೊಟ್ಟೆ ನುಂಗುವ ವೇಳೆ ಸುಣ್ಣದ ಡಬ್ಬವನ್ನು ಒಟ್ಟಿಗೆ ನುಂಗಿದ್ದಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ 15 ದಿನಗಳ ಕಾಲ ಶುಶ್ರೂಷೆ ಒದಗಿಸಿ ಯಾವುದೇ ತೊಂದರೆ ಇಲ್ಲವೆಂದು ಕಂಡ ಬಳಿಕ ಸ್ನೇಕ್ ಕಿರಣ್ ಅರಣ್ಯ ಇಲಾಖೆಯ ಮಾರ್ಗದರ್ಶನದಂತೆ ಮತ್ತೆ ಹಾವನ್ನು ರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ.
Plastic Box Swallowed by snake Naja Naja Removed through Surgery by 4 Vets doctors in Mangalore.
19-07-25 03:05 pm
Bangalore Correspondent
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 07:18 pm
Mangalore Correspondent
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
Yakshagana Pataala Venkataramana Bhat: ಯಕ್ಷಗಾ...
19-07-25 02:32 pm
Thokottu, Mangalore: ತೊಕ್ಕೊಟ್ಟು ನಾಗರಿಕರ ಎಪ್ಪತ...
18-07-25 10:11 pm
19-07-25 12:26 pm
Mangalore Correspondent
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm