ಬ್ರೇಕಿಂಗ್ ನ್ಯೂಸ್
23-06-23 09:30 pm Mangalore Correspondent ಕರಾವಳಿ
ಮಂಗಳೂರು, ಜೂನ್ 23: ನಾಗರ ಹಾವಿನ ಹೊಟ್ಟೆಯೊಳಗೆ ಸೇರಿದ್ದ ಪ್ಲಾಸ್ಟಿಕ್ ಡಬ್ಬ ಒಂದನ್ನು ಮಂಗಳೂರಿನ ಪಶು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.
ಬಂಟ್ವಾಳದ ವಗ್ಗದ ಸಾಲುಮರ ತಿಮ್ಮಕ್ಕ ಉದ್ಯಾನವನದ ಸಮೀಪದಲ್ಲಿ ಬಿಲವೊಂದರಲ್ಲಿ ಸಿಲುಕಿದ್ದ ನಾಗರಹಾವಿನ ಬಗ್ಗೆ ಸ್ಥಳೀಯ ಗ್ರಾಪಂ ಉಪಾಧ್ಯಕ್ಷೆ ವಸಂತಿ ಅವರು ಹಾವು ಹಿಡಿಯುವ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದ್ದರು. ಮೂರು ದಿನಗಳಿಂದ ಅದನ್ನು ಗಮನಿಸುತ್ತಿದ್ದ ವಸಂತಿ ಮನೆಯವರು ಕೊನೆಗೆ ಅದರ ರಕ್ಷಣೆಗೆ ಮುಂದಾಗಿದ್ದರು.
ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಹಾವನ್ನು ಬಿಲದಿಂದ ಹೊರ ತೆಗೆದು ರಕ್ಷಿಸಿದ್ದಾರೆ. ಈ ವೇಳೆ ಅದರ ತಲೆಯ ಭಾಗದಲ್ಲಿ ಗಾಯಗಳಾಗಿದ್ದರಿಂದ ಚಿಕಿತ್ಸೆಗಾಗಿ ಮಂಗಳೂರಿನ ಪಶುವೈದ್ಯ ಡಾ.ಯಶಸ್ವಿ ನಾರಾವಿ ಅವರಲ್ಲಿಗೆ ತಂದಿದ್ದರು.
ಗಾಯಕ್ಕೆ ಚಿಕಿತ್ಸೆ ಒದಗಿಸಿದ ವೈದ್ಯರು ಹಾವಿನ ಹೊಟ್ಟೆ ಉಬ್ಬೇರಿದ್ದನ್ನು ಗಮನಿಸಿ ಎಕ್ಸ್ ರೇ ಮಾಡಿದ್ದರು. ಆಗ ಹಾವಿನ ಉದರದೊಳಗೆ ಪ್ಲಾಸ್ಟಿಕ್ ವಸ್ತು ಇರುವುದು ಗಮನಕ್ಕೆ ಬಂದಿತ್ತು. ಹಾಗಾಗಿ ಹಾವಿಗೆ ಶಸ್ತ್ರಚಿಕಿತ್ಸೆ ನಡೆಸಿ ಉದರದಲ್ಲಿದ್ದ ಸುಣ್ಣದ ಪ್ಲಾಸ್ಟಿಕ್ ಡಬ್ಬವನ್ನು ಹೊರತೆಗೆದಿದ್ದಾರೆ.
ವೈದ್ಯರ ಪ್ರಕಾರ 'ಸುಮಾರು ಐದು ಅಡಿ ಉದ್ದದ ಹೆಣ್ಣು ನಾಗರಹಾವು ಇದಾಗಿತ್ತು. 10 ವರ್ಷ ಪ್ರಾಯ ಆಗಿರಬಹುದು. ಹಾವು ಮೊಟ್ಟೆ ನುಂಗುವ ವೇಳೆ ಸುಣ್ಣದ ಡಬ್ಬವನ್ನು ಒಟ್ಟಿಗೆ ನುಂಗಿದ್ದಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ 15 ದಿನಗಳ ಕಾಲ ಶುಶ್ರೂಷೆ ಒದಗಿಸಿ ಯಾವುದೇ ತೊಂದರೆ ಇಲ್ಲವೆಂದು ಕಂಡ ಬಳಿಕ ಸ್ನೇಕ್ ಕಿರಣ್ ಅರಣ್ಯ ಇಲಾಖೆಯ ಮಾರ್ಗದರ್ಶನದಂತೆ ಮತ್ತೆ ಹಾವನ್ನು ರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ.
Plastic Box Swallowed by snake Naja Naja Removed through Surgery by 4 Vets doctors in Mangalore.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm