ಬ್ರೇಕಿಂಗ್ ನ್ಯೂಸ್
23-06-23 09:30 pm Mangalore Correspondent ಕರಾವಳಿ
ಮಂಗಳೂರು, ಜೂನ್ 23: ನಾಗರ ಹಾವಿನ ಹೊಟ್ಟೆಯೊಳಗೆ ಸೇರಿದ್ದ ಪ್ಲಾಸ್ಟಿಕ್ ಡಬ್ಬ ಒಂದನ್ನು ಮಂಗಳೂರಿನ ಪಶು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.
ಬಂಟ್ವಾಳದ ವಗ್ಗದ ಸಾಲುಮರ ತಿಮ್ಮಕ್ಕ ಉದ್ಯಾನವನದ ಸಮೀಪದಲ್ಲಿ ಬಿಲವೊಂದರಲ್ಲಿ ಸಿಲುಕಿದ್ದ ನಾಗರಹಾವಿನ ಬಗ್ಗೆ ಸ್ಥಳೀಯ ಗ್ರಾಪಂ ಉಪಾಧ್ಯಕ್ಷೆ ವಸಂತಿ ಅವರು ಹಾವು ಹಿಡಿಯುವ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದ್ದರು. ಮೂರು ದಿನಗಳಿಂದ ಅದನ್ನು ಗಮನಿಸುತ್ತಿದ್ದ ವಸಂತಿ ಮನೆಯವರು ಕೊನೆಗೆ ಅದರ ರಕ್ಷಣೆಗೆ ಮುಂದಾಗಿದ್ದರು.
ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಹಾವನ್ನು ಬಿಲದಿಂದ ಹೊರ ತೆಗೆದು ರಕ್ಷಿಸಿದ್ದಾರೆ. ಈ ವೇಳೆ ಅದರ ತಲೆಯ ಭಾಗದಲ್ಲಿ ಗಾಯಗಳಾಗಿದ್ದರಿಂದ ಚಿಕಿತ್ಸೆಗಾಗಿ ಮಂಗಳೂರಿನ ಪಶುವೈದ್ಯ ಡಾ.ಯಶಸ್ವಿ ನಾರಾವಿ ಅವರಲ್ಲಿಗೆ ತಂದಿದ್ದರು.
ಗಾಯಕ್ಕೆ ಚಿಕಿತ್ಸೆ ಒದಗಿಸಿದ ವೈದ್ಯರು ಹಾವಿನ ಹೊಟ್ಟೆ ಉಬ್ಬೇರಿದ್ದನ್ನು ಗಮನಿಸಿ ಎಕ್ಸ್ ರೇ ಮಾಡಿದ್ದರು. ಆಗ ಹಾವಿನ ಉದರದೊಳಗೆ ಪ್ಲಾಸ್ಟಿಕ್ ವಸ್ತು ಇರುವುದು ಗಮನಕ್ಕೆ ಬಂದಿತ್ತು. ಹಾಗಾಗಿ ಹಾವಿಗೆ ಶಸ್ತ್ರಚಿಕಿತ್ಸೆ ನಡೆಸಿ ಉದರದಲ್ಲಿದ್ದ ಸುಣ್ಣದ ಪ್ಲಾಸ್ಟಿಕ್ ಡಬ್ಬವನ್ನು ಹೊರತೆಗೆದಿದ್ದಾರೆ.
ವೈದ್ಯರ ಪ್ರಕಾರ 'ಸುಮಾರು ಐದು ಅಡಿ ಉದ್ದದ ಹೆಣ್ಣು ನಾಗರಹಾವು ಇದಾಗಿತ್ತು. 10 ವರ್ಷ ಪ್ರಾಯ ಆಗಿರಬಹುದು. ಹಾವು ಮೊಟ್ಟೆ ನುಂಗುವ ವೇಳೆ ಸುಣ್ಣದ ಡಬ್ಬವನ್ನು ಒಟ್ಟಿಗೆ ನುಂಗಿದ್ದಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ 15 ದಿನಗಳ ಕಾಲ ಶುಶ್ರೂಷೆ ಒದಗಿಸಿ ಯಾವುದೇ ತೊಂದರೆ ಇಲ್ಲವೆಂದು ಕಂಡ ಬಳಿಕ ಸ್ನೇಕ್ ಕಿರಣ್ ಅರಣ್ಯ ಇಲಾಖೆಯ ಮಾರ್ಗದರ್ಶನದಂತೆ ಮತ್ತೆ ಹಾವನ್ನು ರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ.
Plastic Box Swallowed by snake Naja Naja Removed through Surgery by 4 Vets doctors in Mangalore.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
18-05-26 10:47 pm
HK News Desk
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm