ಬ್ರೇಕಿಂಗ್ ನ್ಯೂಸ್
23-06-23 09:30 pm Mangalore Correspondent ಕರಾವಳಿ
ಮಂಗಳೂರು, ಜೂನ್ 23: ನಾಗರ ಹಾವಿನ ಹೊಟ್ಟೆಯೊಳಗೆ ಸೇರಿದ್ದ ಪ್ಲಾಸ್ಟಿಕ್ ಡಬ್ಬ ಒಂದನ್ನು ಮಂಗಳೂರಿನ ಪಶು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.
ಬಂಟ್ವಾಳದ ವಗ್ಗದ ಸಾಲುಮರ ತಿಮ್ಮಕ್ಕ ಉದ್ಯಾನವನದ ಸಮೀಪದಲ್ಲಿ ಬಿಲವೊಂದರಲ್ಲಿ ಸಿಲುಕಿದ್ದ ನಾಗರಹಾವಿನ ಬಗ್ಗೆ ಸ್ಥಳೀಯ ಗ್ರಾಪಂ ಉಪಾಧ್ಯಕ್ಷೆ ವಸಂತಿ ಅವರು ಹಾವು ಹಿಡಿಯುವ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದ್ದರು. ಮೂರು ದಿನಗಳಿಂದ ಅದನ್ನು ಗಮನಿಸುತ್ತಿದ್ದ ವಸಂತಿ ಮನೆಯವರು ಕೊನೆಗೆ ಅದರ ರಕ್ಷಣೆಗೆ ಮುಂದಾಗಿದ್ದರು.
ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಹಾವನ್ನು ಬಿಲದಿಂದ ಹೊರ ತೆಗೆದು ರಕ್ಷಿಸಿದ್ದಾರೆ. ಈ ವೇಳೆ ಅದರ ತಲೆಯ ಭಾಗದಲ್ಲಿ ಗಾಯಗಳಾಗಿದ್ದರಿಂದ ಚಿಕಿತ್ಸೆಗಾಗಿ ಮಂಗಳೂರಿನ ಪಶುವೈದ್ಯ ಡಾ.ಯಶಸ್ವಿ ನಾರಾವಿ ಅವರಲ್ಲಿಗೆ ತಂದಿದ್ದರು.
ಗಾಯಕ್ಕೆ ಚಿಕಿತ್ಸೆ ಒದಗಿಸಿದ ವೈದ್ಯರು ಹಾವಿನ ಹೊಟ್ಟೆ ಉಬ್ಬೇರಿದ್ದನ್ನು ಗಮನಿಸಿ ಎಕ್ಸ್ ರೇ ಮಾಡಿದ್ದರು. ಆಗ ಹಾವಿನ ಉದರದೊಳಗೆ ಪ್ಲಾಸ್ಟಿಕ್ ವಸ್ತು ಇರುವುದು ಗಮನಕ್ಕೆ ಬಂದಿತ್ತು. ಹಾಗಾಗಿ ಹಾವಿಗೆ ಶಸ್ತ್ರಚಿಕಿತ್ಸೆ ನಡೆಸಿ ಉದರದಲ್ಲಿದ್ದ ಸುಣ್ಣದ ಪ್ಲಾಸ್ಟಿಕ್ ಡಬ್ಬವನ್ನು ಹೊರತೆಗೆದಿದ್ದಾರೆ.
ವೈದ್ಯರ ಪ್ರಕಾರ 'ಸುಮಾರು ಐದು ಅಡಿ ಉದ್ದದ ಹೆಣ್ಣು ನಾಗರಹಾವು ಇದಾಗಿತ್ತು. 10 ವರ್ಷ ಪ್ರಾಯ ಆಗಿರಬಹುದು. ಹಾವು ಮೊಟ್ಟೆ ನುಂಗುವ ವೇಳೆ ಸುಣ್ಣದ ಡಬ್ಬವನ್ನು ಒಟ್ಟಿಗೆ ನುಂಗಿದ್ದಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ 15 ದಿನಗಳ ಕಾಲ ಶುಶ್ರೂಷೆ ಒದಗಿಸಿ ಯಾವುದೇ ತೊಂದರೆ ಇಲ್ಲವೆಂದು ಕಂಡ ಬಳಿಕ ಸ್ನೇಕ್ ಕಿರಣ್ ಅರಣ್ಯ ಇಲಾಖೆಯ ಮಾರ್ಗದರ್ಶನದಂತೆ ಮತ್ತೆ ಹಾವನ್ನು ರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ.
Plastic Box Swallowed by snake Naja Naja Removed through Surgery by 4 Vets doctors in Mangalore.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm