ಬ್ರೇಕಿಂಗ್ ನ್ಯೂಸ್
23-06-23 09:30 pm Mangalore Correspondent ಕರಾವಳಿ
ಮಂಗಳೂರು, ಜೂನ್ 23: ನಾಗರ ಹಾವಿನ ಹೊಟ್ಟೆಯೊಳಗೆ ಸೇರಿದ್ದ ಪ್ಲಾಸ್ಟಿಕ್ ಡಬ್ಬ ಒಂದನ್ನು ಮಂಗಳೂರಿನ ಪಶು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.
ಬಂಟ್ವಾಳದ ವಗ್ಗದ ಸಾಲುಮರ ತಿಮ್ಮಕ್ಕ ಉದ್ಯಾನವನದ ಸಮೀಪದಲ್ಲಿ ಬಿಲವೊಂದರಲ್ಲಿ ಸಿಲುಕಿದ್ದ ನಾಗರಹಾವಿನ ಬಗ್ಗೆ ಸ್ಥಳೀಯ ಗ್ರಾಪಂ ಉಪಾಧ್ಯಕ್ಷೆ ವಸಂತಿ ಅವರು ಹಾವು ಹಿಡಿಯುವ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದ್ದರು. ಮೂರು ದಿನಗಳಿಂದ ಅದನ್ನು ಗಮನಿಸುತ್ತಿದ್ದ ವಸಂತಿ ಮನೆಯವರು ಕೊನೆಗೆ ಅದರ ರಕ್ಷಣೆಗೆ ಮುಂದಾಗಿದ್ದರು.
ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಹಾವನ್ನು ಬಿಲದಿಂದ ಹೊರ ತೆಗೆದು ರಕ್ಷಿಸಿದ್ದಾರೆ. ಈ ವೇಳೆ ಅದರ ತಲೆಯ ಭಾಗದಲ್ಲಿ ಗಾಯಗಳಾಗಿದ್ದರಿಂದ ಚಿಕಿತ್ಸೆಗಾಗಿ ಮಂಗಳೂರಿನ ಪಶುವೈದ್ಯ ಡಾ.ಯಶಸ್ವಿ ನಾರಾವಿ ಅವರಲ್ಲಿಗೆ ತಂದಿದ್ದರು.
ಗಾಯಕ್ಕೆ ಚಿಕಿತ್ಸೆ ಒದಗಿಸಿದ ವೈದ್ಯರು ಹಾವಿನ ಹೊಟ್ಟೆ ಉಬ್ಬೇರಿದ್ದನ್ನು ಗಮನಿಸಿ ಎಕ್ಸ್ ರೇ ಮಾಡಿದ್ದರು. ಆಗ ಹಾವಿನ ಉದರದೊಳಗೆ ಪ್ಲಾಸ್ಟಿಕ್ ವಸ್ತು ಇರುವುದು ಗಮನಕ್ಕೆ ಬಂದಿತ್ತು. ಹಾಗಾಗಿ ಹಾವಿಗೆ ಶಸ್ತ್ರಚಿಕಿತ್ಸೆ ನಡೆಸಿ ಉದರದಲ್ಲಿದ್ದ ಸುಣ್ಣದ ಪ್ಲಾಸ್ಟಿಕ್ ಡಬ್ಬವನ್ನು ಹೊರತೆಗೆದಿದ್ದಾರೆ.
ವೈದ್ಯರ ಪ್ರಕಾರ 'ಸುಮಾರು ಐದು ಅಡಿ ಉದ್ದದ ಹೆಣ್ಣು ನಾಗರಹಾವು ಇದಾಗಿತ್ತು. 10 ವರ್ಷ ಪ್ರಾಯ ಆಗಿರಬಹುದು. ಹಾವು ಮೊಟ್ಟೆ ನುಂಗುವ ವೇಳೆ ಸುಣ್ಣದ ಡಬ್ಬವನ್ನು ಒಟ್ಟಿಗೆ ನುಂಗಿದ್ದಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ 15 ದಿನಗಳ ಕಾಲ ಶುಶ್ರೂಷೆ ಒದಗಿಸಿ ಯಾವುದೇ ತೊಂದರೆ ಇಲ್ಲವೆಂದು ಕಂಡ ಬಳಿಕ ಸ್ನೇಕ್ ಕಿರಣ್ ಅರಣ್ಯ ಇಲಾಖೆಯ ಮಾರ್ಗದರ್ಶನದಂತೆ ಮತ್ತೆ ಹಾವನ್ನು ರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ.
Plastic Box Swallowed by snake Naja Naja Removed through Surgery by 4 Vets doctors in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm