ಬ್ರೇಕಿಂಗ್ ನ್ಯೂಸ್
29-06-23 04:23 pm Mangalore Correspondent ಕರಾವಳಿ
ಮಂಗಳೂರು, ಜೂನ್ 29: ಪದವಿ ಕಲಿತ ಯುವಕರಿಗೆ ರಾಜಕೀಯ ಕ್ಷೇತ್ರದ ಬಗ್ಗೆ ತಿಳಿದುಕೊಳ್ಳಲು ಸೂಕ್ತ ತರಬೇತಿ ಕೇಂದ್ರಗಳು ಇಲ್ಲ. ಹಾಗಾಗಿ ರಾಜಕೀಯ ಕ್ಷೇತ್ರದ ತರಬೇತಿ ಸಂಸ್ಥೆ ಪ್ರಾರಂಭಿಸುವ ಯೋಜನೆ ಇದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಈ ಯೋಜನೆ ಜಾರಿ ಮಾಡಲಿದ್ದೇವೆ. ಸದ್ಯ ಪುಣೆಯಲ್ಲಿ ಮಾತ್ರ ಈ ರೀತಿಯ ತರಬೇತಿ ಸಂಸ್ಥೆ ಇದೆ, ಅವರ ಜೊತೆ ಚರ್ಚಿಸಿ ಒಂದು ವರ್ಷದ ಕೋರ್ಸ್ ಆರಂಭಿಸಲಿದ್ದೇವೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಅರಿವು, ರಾಜಕೀಯ, ಸರಕಾರಿ ವ್ಯವಸ್ಥೆ ಬಗ್ಗೆ ಅರಿವು ಮೂಡಿಸುವ ಉದ್ದೇಶ ಮತ್ತು ಆಸಕ್ತರಿಗೆ ತರಬೇತಿ ನೀಡುವ ಉದ್ದೇಶದಿಂದ ಸಂಸ್ಥೆ ಆರಂಭಿಸಲಾಗುವುದು. ಪದವಿ ಮುಗಿಸಿದವರು ಆರು ತಿಂಗಳು ತರಬೇತಿ, ನಂತರದ ಆರು ತಿಂಗಳು ಇಂಟರ್ನ್ ಶಿಪ್ ಪಡೆಯಲು ಅವಕಾಶ ಇರುತ್ತದೆ. ಕೇವಲ ಎಂಎಲ್ ಎ, ಎಂಪಿ ಆಗೋದಷ್ಟೇ ಮುಖ್ಯ ಅಲ್ಲ. ರಾಜಕೀಯ ಕ್ಷೇತ್ರಕ್ಕೆ ಬರುವವರು ಮೊದಲಾಗಿ ಈ ತರಬೇತಿ ಪಡೆದಲ್ಲಿ ಸುಲಭವಾಗಿ ಮೇಲಕ್ಕೇರಲು ಸಾಧ್ಯವಾಗುತ್ತದೆ.
ನಾವು ರಾಜಕೀಯಕ್ಕೆ ಬರುವಾಗ ಇಂತಹ ತರಬೇತಿಗೆ ಅವಕಾಶ ಇರಲಿಲ್ಲ. ಇಂತಹ ತರಬೇತಿ ಪಡೆದಲ್ಲಿ ಸರ್ಕಾರೇತರ ಎನ್ ಜಿಓ ಸಂಸ್ಥೆ ಆರಂಭಿಸಬಹುದು. ಸರ್ಕಾರಿ ನೌಕರನಾಗಿ ಸೇರಬಹುದು. ಶಾಸಕರ ಜೊತೆಗೆ ಕೆಲಸ ಮಾಡಬಹುದು. ಮುಂದಿನ ದಿನಗಳಲ್ಲಿ ಇದರಿಂದ ಬಹಳಷ್ಟು ಪ್ರಯೋಜನ ಸಿಗಲಿದೆ ಎಂದು ಹೇಳಿದ ಖಾದರ್, ರಾಜ್ಯದ ಪ್ರಮುಖ ಕೇಂದ್ರದಲ್ಲೇ ಸಂಸ್ಥೆಯನ್ನು ಸ್ಥಾಪಿಸಲಾಗುವುದು. ಇದಕ್ಕೆ ಸಿಲೇಬಸ್ ಇರಲಿದೆ, ಫುಲ್ ಟೈಮ್ ಉಪನ್ಯಾಸಕರು ಇರ್ತಾರೆ. ಮಧ್ಯೆ ರಾಜಕೀಯ ನಾಯಕರು, ಮುತ್ಸದ್ದಿಗಳು ಬಂದು ತರಬೇತಿ ಕೊಡ್ತಾರೆ. ತರಬೇತಿ ಪಡೆದವರು ಮುಂದೆ ಒಳ್ಳೆಯ ನಾಯಕನಾಗಲು ಅವಕಾಶ ಇರುತ್ತದೆ ಎಂದು ಹೇಳಿದರು.
“Youth who have completed degree courses and are interested in politics will be trained through a one-year course at Karnataka Political Training Institute”, said the Speaker of Karnataka Legislative Assembly U T Khader during a press meet held at the Eden Club here, on June 29.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm