ಬ್ರೇಕಿಂಗ್ ನ್ಯೂಸ್
30-06-23 03:31 pm Mangalore Correspondent ಕರಾವಳಿ
ಮಂಗಳೂರು, ಜೂನ್ 30: ಕಾಂಗ್ರೆಸ್ ಸರ್ಕಾರ ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆಗಳನ್ನು ಹಿಂಪಡೆದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಕರಾವಳಿ ಭಾಗದ ವಿವಿಧ ಮಠಗಳ ಸ್ವಾಮೀಜಿಗಳು ಎಚ್ಚರಿಕೆ ನೀಡಿದ್ದಾರೆ.
ನಗರದ ಬಾಳಂ ಭಟ್ ಸಭಾಂಗಣದಲ್ಲಿ ವಿವಿಧ ಮಠಗಳ ಸ್ವಾಮೀಜಿಗಳು ಆರೆಸ್ಸೆಸ್ ಮತ್ತು ವಿಶ್ವ ಹಿಂದು ಪರಿಷತ್ತಿನ ಪ್ರಮುಖರ ಜೊತೆ ಕುಳಿತು ಸಮಾವೇಶ ನಡೆಸಿದ್ದಾರೆ. ಪ್ರಸ್ತಾವಿತ ಮಸೂದೆಗಳನ್ನು ಹಿಂಪಡೆದಲ್ಲಿ ಏನು ಮಾಡಬೇಕು ಅನ್ನುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಭೆಯ ಬಳಿಕ ಸ್ವಾಮೀಜಿಗಳು ಸುದ್ದಿಗೋಷ್ಟಿ ಕರೆದು ಮಾಹಿತಿ ಹಂಚಿಕೊಂಡಿದ್ದಾರೆ.
ಒಡಿಯೂರು ಮಠದ ಗುರುದೇವಾನಂದ ಸ್ವಾಮೀಜಿ ಮಾತನಾಡಿ, ನಾವು ಗೋಹತ್ಯೆ ಮತ್ತು ಮತಾಂತರ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಬಾರದು ಎಂಬ ಬಗ್ಗೆ ನಿರ್ಣಯ ಮಾಡಿದ್ದೇವೆ. ಈ ಕಾಯ್ದೆಯನ್ನು ವಾಪಸ್ ಪಡೆದಲ್ಲಿ ಸಮಾಜದಲ್ಲಿ ಅಶಾಂತಿ ಮೂಡಬಹುದು. 2020ರ ಗೋಹತ್ಯೆ ನಿಷೇಧ ಕಾಯ್ದೆಯ ನಿಯಮಾವಳಿಗಳಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಈ ರೀತಿ ಮಾಡಿದರೆ, ಹಿಂದು ಸಮಾಜದ ವಿರುದ್ಧ ನಿರ್ಣಯ ಕೈಗೊಂಡಂತೆ. ನಮ್ಮ ಮನವಿ ಒಪ್ಪದೆ ಕಾಯ್ದೆ ವಾಪಸ್ ಪಡೆದರೆ ಸಾಧು ಸಂತರು ಸೇರಿ ಉಪವಾಸ ಸತ್ಯಾಗ್ರಹ ಮಾಡುವುದಕ್ಕೂ ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.

ಮಸೂದೆ ವಿಚಾರದಲ್ಲಿ ನಾವು ರಾಜ್ಯದ ಮುಖ್ಯಮಂತ್ರಿ, ಗೃಹ ಸಚಿವರು, ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಕೊಡಲಿದ್ದೇವೆ. ಅಲ್ಲದೆ, ಕೇಂದ್ರ ಗೃಹ ಸಚಿವರು, ಪ್ರಧಾನಿ ಅವರನ್ನೂ ಭೇಟಿ ಮಾಡುತ್ತೇವೆ. ಸದ್ಯಕ್ಕೆ ಸೆಪ್ಟಂಬರ್ ವರೆಗೆ ಚಾತುರ್ಮಾಸ್ಯ ವೃತ ಇರುತ್ತದೆ. ಆನಂತರ, ಈ ಕೆಲಸಕ್ಕೆ ಮುಂದಾಗುತ್ತೇವೆ ಎಂದು ಗುರುಪುರ ಮಠದ ವಜ್ರದೇಹಿ ಸ್ವಾಮೀಜಿ ಹೇಳಿದರು. ಉತ್ತರ ಕರ್ನಾಟಕದ ಲಿಂಗಾಯತ, ಒಕ್ಕಲಿಗರ ಸ್ವಾಮೀಜಿಗಳ ಬೆಂಬಲ ಪಡೆಯುತ್ತೀರಾ ಎಂಬ ಪ್ರಶ್ನೆಗೆ, ಈಗ ಕರಾವಳಿ ಭಾಗದ ಸ್ವಾಮೀಜಿಗಳು ಸೇರಿದ್ದೇವೆ. ಮುಂದಿನ ದಿನಗಳಲ್ಲಿ ಆ ಕುರಿತು ಚಿಂತನೆ ನಡೆಸುತ್ತೇವೆ ಎಂದರು.
ಮಂಗಳೂರಿನ ಪೊಲೀಸ್ ಇಲಾಖೆಯಲ್ಲಿ ಆಂಟಿ ಕಮ್ಯುನಲ್ ವಿಂಗ್ ರಚಿಸಿರುವ ಬಗ್ಗೆ ಆಕ್ಷೇಪಿಸಿದ ಗುರುಪುರ ಸ್ವಾಮೀಜಿ, ಈ ವಿಂಗ್ ನಿಂದ ಲವ್ ಜಿಹಾದ್ ವಿರುದ್ಧ ಕ್ರಮ ಆಗಬಹುದು ಎಂದುಕೊಂಡಿದ್ದೆವು. ಆದರೆ, ಈಗ ಲವ್ ಜಿಹಾದ್ ಪತ್ತೆ ಮಾಡಿದವರ ವಿರುದ್ಧವೇ ಕೇಸು ದಾಖಲಿಸುತ್ತಿದ್ದಾರೆ. ಹಿಂದು ಸಂಘಟನೆಗಳ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ, ಗಡೀಪಾರು ಮಾಡುವ ಕೆಲಸ ಆಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಹೀಗಾದಲ್ಲಿ ನಾವು ಸುಮ್ಮನಿರುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದರು. ಸಭೆಯಲ್ಲಿ ಮಾಣಿಲ ಮಠದ ಸ್ವಾಮೀಜಿ, ಕೇಮಾರು ಸ್ವಾಮೀಜಿ ಸೇರಿ 12ಕ್ಕೂ ಹೆಚ್ಚು ಕಡೆಯ ಸ್ವಾಮೀಜಿಗಳು ಇದ್ದರು. ಆರೆಸ್ಸೆಸ್ ಪ್ರಮುಖ ಪ್ರಕಾಶ್ ಪಿ.ಎಸ್, ವಿಹಿಂಪ ಮುಖಂಡ ಎಂ.ಬಿ.ಪುರಾಣಿಕ್, ಶರಣ್ ಪಂಪ್ವೆಲ್ ಸೇರಿ ಪ್ರಮುಖರು ಉಪಸ್ಥಿತರಿದ್ದರು.
Anti conversion law, anti-cow slaughter law bill should not be cancelled by Congress warns various Hindu Swamiji in Mangalore.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
18-05-26 10:47 pm
HK News Desk
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm