ಬ್ರೇಕಿಂಗ್ ನ್ಯೂಸ್
03-07-23 02:54 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ವಿಧಾನ ಪರಿಷತ್ ಸದಸ್ಯ, ಬಿಲ್ಲವ ಸಮುದಾಯದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರ ಸುದೀರ್ಘ ಸೇವಾನುಭವ ಪರಿಗಣಿಸಿ ಅವರನ್ನು ಮಂತ್ರಿಯನ್ನಾಗಿಸಬೇಕು. ಕಾಂಗ್ರೆಸಿನಲ್ಲಿ ಅವರನ್ನು ತುಳಿಯುವ ಪ್ರಯತ್ನ ನಡೆಯುತ್ತಿದ್ದು, ಇಂಥ ಪ್ರಯತ್ನಗಳು ನಡೆದರೆ, ಮುಂದಿನ ಜಿ.ಪಂ, ತಾ.ಪಂ ಚುನಾವಣೆಯಲ್ಲಿ ಹಾಗೂ ಲೋಕಸಭೆ ಚುನಾವಣೆಯಲ್ಲಿ ಬಿಲ್ಲವರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಡಾ. ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಎಐಸಿಸಿ ಮಟ್ಟದ ನಾಯಕರಾಗಿದ್ದು ದೇಶದ ಹದಿನೈದು ರಾಜ್ಯಗಳಲ್ಲಿ ಪ್ರಭಾರಿಗಳಾಗಿದ್ದವರು ಬಿ.ಕೆ.ಹರಿಪ್ರಸಾದ್. ಆದರೆ ಅವರನ್ನೀಗ ಕಾಂಗ್ರೆಸ್ ಪಕ್ಷದಲ್ಲಿ ತುಳಿಯಲಾಗುತ್ತಿದೆ. ಮಂತ್ರಿ ಸ್ಥಾನ ನೀಡದೆ ಬಿಲ್ಲವ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ. ರಾಜಕೀಯದಿಂದಲೇ ಸಂಪೂರ್ಣ ಮುಗಿಸಬೇಕು ಎಂಬ ಹುನ್ನಾರ ನಡೆದಿದೆ ಎಂದು ಪ್ರಣವಾನಂದ ಸ್ವಾಮೀಜಿ ಸುದ್ದಿಗೋಷ್ಟಿಯಲ್ಲಿ ಆತಂಕ ವ್ಯಕ್ತಪಡಿಸಿದರು. ಜನಾರ್ದನ ಪೂಜಾರಿ ಅವರನ್ನು ಸೈಡ್ ಲೈನ್ ಮಾಡಿದಂತೆ ಹರಿಪ್ರಸಾದ್ ಅವರನ್ನೂ ಮೂಲೆಗುಂಪು ಮಾಡಲಾಗುತ್ತಿದೆ. ಹರಿಪ್ರಸಾದ್ ಅವರು ಹಿಂದುಳಿದ ಸಮುದಾಯದ ನಾಯಕರಾಗಿದ್ದಾರೆ. ಬಿಲ್ಲವ ಸಮುದಾಯವನ್ನು ಅವಗಣನೆ ಮಾಡಿದರೆ, ಸಮುದಾಯವನ್ನು ಟಾರ್ಗೆಟ್ ಮಾಡಿದರೆ, ರಾಜಕೀಯ ಪಕ್ಷಗಳು ಮುಂದಿನ ಚುನಾವಣೆಯಲ್ಲಿ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪ್ರಣವಾನಂದ ಹೇಳಿದರು.
ದೊಡ್ಡ ಪ್ರಮಾಣದ ಮೀಸಲಾತಿ ನಮ್ಮ ಸಮುದಾಯಕ್ಕಿದೆ. ಆದರೆ ಕರ್ನಾಟಕದಲ್ಲಿ ಇಲ್ಲ. ಹೀಗಾಗಿ ನಮ್ಮ ಸಮುದಾಯ ಎಸ್.ಟಿ. ಮೀಸಲಾತಿಯನ್ನು ಪಡೆಯಲು ದೊಡ್ಡ ಮಟ್ಟಿನ ಹೋರಾಟ ಅವಶ್ಯ ಎಂದರು. ನಮ್ಮ ಕುಲಕಸುಬಿಗೆ ಪ್ರೋತ್ಸಾಹ ನೀಡಬೇಕು, ಕಾಂಗ್ರೆಸ್ ಸರ್ಕಾರ ಘೋಷಿಸಿದಂತೆ 250 ಕೋಟಿಗಳನ್ನು ಬ್ರಹ್ಮಶ್ರೀ ನಾರಾಯಣಗುರು ನಿಗಮಕ್ಕೆ ನೀಡಬೇಕು ಎಂದು ಸರಕಾರವನ್ನು ಒತ್ತಾಯಿಸಿದರು.
ಬದುಕನ್ನು ಒತ್ತೆಯಿಟ್ಟು ಯಾರಿಗೋ ಕೆಲಸ ಮಾಡುವ ಅವಶ್ಯಕತೆ ಇಲ್ಲ ಎಂದು ಬಿಲ್ಲವ ಯುವಕರು ಹಿಂದು ಸಂಘಟನೆ ಹೆಸರಲ್ಲಿ ಕೇಸು ಮೈಗೆಳೆದುಕೊಳ್ಳುವ ಬಗ್ಗೆ ಟೀಕೆ ಮಾಡಿದರು. ಬೆಂಗಳೂರಿನಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಪುತ್ಥಳಿ ಅನಾವರಣ ಮಾಡಬೇಕು. ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ನೀರಾ ಮತ್ತು ಶೇಂದಿ ಇಳಿಸುವ ಕುರಿತು ವ್ಯವಸ್ಥೆ ಕಲ್ಪಿಸಬೇಕು ಎಂದವರು ಒತ್ತಾಯಿಸಿದರು.
Congress will face consequences if BK Hariprasad will not be given Minister post says Pranavananda Swamiji in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm