ಬ್ರೇಕಿಂಗ್ ನ್ಯೂಸ್
03-07-23 02:54 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ವಿಧಾನ ಪರಿಷತ್ ಸದಸ್ಯ, ಬಿಲ್ಲವ ಸಮುದಾಯದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರ ಸುದೀರ್ಘ ಸೇವಾನುಭವ ಪರಿಗಣಿಸಿ ಅವರನ್ನು ಮಂತ್ರಿಯನ್ನಾಗಿಸಬೇಕು. ಕಾಂಗ್ರೆಸಿನಲ್ಲಿ ಅವರನ್ನು ತುಳಿಯುವ ಪ್ರಯತ್ನ ನಡೆಯುತ್ತಿದ್ದು, ಇಂಥ ಪ್ರಯತ್ನಗಳು ನಡೆದರೆ, ಮುಂದಿನ ಜಿ.ಪಂ, ತಾ.ಪಂ ಚುನಾವಣೆಯಲ್ಲಿ ಹಾಗೂ ಲೋಕಸಭೆ ಚುನಾವಣೆಯಲ್ಲಿ ಬಿಲ್ಲವರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಡಾ. ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಎಐಸಿಸಿ ಮಟ್ಟದ ನಾಯಕರಾಗಿದ್ದು ದೇಶದ ಹದಿನೈದು ರಾಜ್ಯಗಳಲ್ಲಿ ಪ್ರಭಾರಿಗಳಾಗಿದ್ದವರು ಬಿ.ಕೆ.ಹರಿಪ್ರಸಾದ್. ಆದರೆ ಅವರನ್ನೀಗ ಕಾಂಗ್ರೆಸ್ ಪಕ್ಷದಲ್ಲಿ ತುಳಿಯಲಾಗುತ್ತಿದೆ. ಮಂತ್ರಿ ಸ್ಥಾನ ನೀಡದೆ ಬಿಲ್ಲವ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ. ರಾಜಕೀಯದಿಂದಲೇ ಸಂಪೂರ್ಣ ಮುಗಿಸಬೇಕು ಎಂಬ ಹುನ್ನಾರ ನಡೆದಿದೆ ಎಂದು ಪ್ರಣವಾನಂದ ಸ್ವಾಮೀಜಿ ಸುದ್ದಿಗೋಷ್ಟಿಯಲ್ಲಿ ಆತಂಕ ವ್ಯಕ್ತಪಡಿಸಿದರು. ಜನಾರ್ದನ ಪೂಜಾರಿ ಅವರನ್ನು ಸೈಡ್ ಲೈನ್ ಮಾಡಿದಂತೆ ಹರಿಪ್ರಸಾದ್ ಅವರನ್ನೂ ಮೂಲೆಗುಂಪು ಮಾಡಲಾಗುತ್ತಿದೆ. ಹರಿಪ್ರಸಾದ್ ಅವರು ಹಿಂದುಳಿದ ಸಮುದಾಯದ ನಾಯಕರಾಗಿದ್ದಾರೆ. ಬಿಲ್ಲವ ಸಮುದಾಯವನ್ನು ಅವಗಣನೆ ಮಾಡಿದರೆ, ಸಮುದಾಯವನ್ನು ಟಾರ್ಗೆಟ್ ಮಾಡಿದರೆ, ರಾಜಕೀಯ ಪಕ್ಷಗಳು ಮುಂದಿನ ಚುನಾವಣೆಯಲ್ಲಿ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪ್ರಣವಾನಂದ ಹೇಳಿದರು.
ದೊಡ್ಡ ಪ್ರಮಾಣದ ಮೀಸಲಾತಿ ನಮ್ಮ ಸಮುದಾಯಕ್ಕಿದೆ. ಆದರೆ ಕರ್ನಾಟಕದಲ್ಲಿ ಇಲ್ಲ. ಹೀಗಾಗಿ ನಮ್ಮ ಸಮುದಾಯ ಎಸ್.ಟಿ. ಮೀಸಲಾತಿಯನ್ನು ಪಡೆಯಲು ದೊಡ್ಡ ಮಟ್ಟಿನ ಹೋರಾಟ ಅವಶ್ಯ ಎಂದರು. ನಮ್ಮ ಕುಲಕಸುಬಿಗೆ ಪ್ರೋತ್ಸಾಹ ನೀಡಬೇಕು, ಕಾಂಗ್ರೆಸ್ ಸರ್ಕಾರ ಘೋಷಿಸಿದಂತೆ 250 ಕೋಟಿಗಳನ್ನು ಬ್ರಹ್ಮಶ್ರೀ ನಾರಾಯಣಗುರು ನಿಗಮಕ್ಕೆ ನೀಡಬೇಕು ಎಂದು ಸರಕಾರವನ್ನು ಒತ್ತಾಯಿಸಿದರು.
ಬದುಕನ್ನು ಒತ್ತೆಯಿಟ್ಟು ಯಾರಿಗೋ ಕೆಲಸ ಮಾಡುವ ಅವಶ್ಯಕತೆ ಇಲ್ಲ ಎಂದು ಬಿಲ್ಲವ ಯುವಕರು ಹಿಂದು ಸಂಘಟನೆ ಹೆಸರಲ್ಲಿ ಕೇಸು ಮೈಗೆಳೆದುಕೊಳ್ಳುವ ಬಗ್ಗೆ ಟೀಕೆ ಮಾಡಿದರು. ಬೆಂಗಳೂರಿನಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಪುತ್ಥಳಿ ಅನಾವರಣ ಮಾಡಬೇಕು. ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ನೀರಾ ಮತ್ತು ಶೇಂದಿ ಇಳಿಸುವ ಕುರಿತು ವ್ಯವಸ್ಥೆ ಕಲ್ಪಿಸಬೇಕು ಎಂದವರು ಒತ್ತಾಯಿಸಿದರು.
Congress will face consequences if BK Hariprasad will not be given Minister post says Pranavananda Swamiji in Mangalore.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm