ಬ್ರೇಕಿಂಗ್ ನ್ಯೂಸ್
03-07-23 05:55 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ಮಂಗಳೂರು ನಗರದಲ್ಲಿ ಭಾರೀ ಮಳೆಯಾಗಿದ್ದು ರಸ್ತೆಗಳಲ್ಲಿ ಮಳೆ ನೀರು ಶೇಖರಗೊಂಡು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಪಂಪ್ವೆಲ್ ಮೇಲ್ಸೇತುವೆ ಅಡಿಭಾಗದಲ್ಲಿ ನೀರು ತುಂಬಿಕೊಂಡಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ.
ಪಂಪ್ವೆಲ್ ಮೇಲ್ಸೇತುವೆಯಲ್ಲಿ ಪ್ರತಿ ಬಾರಿ ಮಳೆಗಾಲದಲ್ಲಿ ತೊಂದರೆ ಎದುರಾಗುತ್ತದೆ. ಮಂಗಳೂರು ನಗರಕ್ಕೆ ಎಂಟ್ರಿ ಕೊಡುವ ಜಾಗದಲ್ಲೇ ನಾಲ್ಕು ಕಡೆಯಿಂದ ಸೇರುವ ಮಳೆನೀರು ಕಾಲುವೆಯಲ್ಲಿ ಹರಿಯಲು ಸಾಧ್ಯವಾಗದೆ ರಸ್ತೆಗೆ ಬಂದು ನಿಂತಿದೆ. ಸೇತುವೆ ಅಡಿಭಾಗದಲ್ಲಿ ಭಾರೀ ಪ್ರಮಾಣದ ನೀರು ನಿಂತಿದ್ದು ವಾಹನಗಳು ಅತ್ತಿತ್ತ ಸಾಗಲು ಸಾಧ್ಯವಾಗದೆ ಸಿಕ್ಕಿಬಿದ್ದಿವೆ.









ಸೋಮವಾರ ಮಧ್ಯಾಹ್ನ 3 ಗಂಟೆಯಿಂದ ಜಡಿಮಳೆ ಆಗಿದ್ದು ನಗರದ ಎಲ್ಲ ಕಡೆ ರಸ್ತೆಯಲ್ಲಿ ಪೂರ್ತಿ ನೀರು ತುಂಬಿಕೊಂಡಿದೆ. ಸಂಜೆಯ ವೇಳೆಗೆ, ಮಳೆನೀರು ಪಂಪ್ವೆಲ್ ಸೇತುವೆಯ ಅಡಿಭಾಗವನ್ನು ಆವರಿಸಿದ್ದು ವಾಹನಗಳು ರಸ್ತೆಯ ಇಕ್ಕೆಲಗಳಲ್ಲಿ ಸಾಲುಗಟ್ಟಿ ನಿಂತಿವೆ. ಕೆಲವು ವಾಹನಗಳು ನೀರಿನಲ್ಲಿ ಸಾಗಲೆತ್ನಿಸಿ ಸಿಕ್ಕಿಬಿದ್ದಿವೆ. ಮಂಗಳೂರು ನಗರ ಭಾಗದಿಂದ ತಲಪಾಡಿ, ತೊಕ್ಕೊಟ್ಟು, ಬಿಸಿ ರೋಡ್ ಸಾಗುವ ಬಸ್, ಇನ್ನಿತರ ವಾಹನಗಳು ಸಿಕ್ಕಿಬಿದ್ದು ನೀರು ಇಳಿಯದೆ ಅಲ್ಲಿಂದ ಸಾಗುವಂತಿಲ್ಲ ಎನ್ನುವ ಸ್ಥಿತಿಗೆ ಒಳಗಾಗಿದೆ. ಸಾರ್ವಜನಿಕರು ಮೇಲ್ಸೇತುವೆಯ ಅವೈಜ್ಞಾನಿಕ ಕಾಮಗಾರಿಗೆ ಹಿಡಿಶಾಪ ಹಾಕಿದ್ದಾರೆ.
Rain in Mangalore, Pumpwell submerged with water, heavy traffic block due to incessant rains. The floodwater beneath the Pumpwell flyover has risen to knee height, blocking the route towards Mangaluru and vehicles heading to the city are stuck at the junction for hours.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm