ಬ್ರೇಕಿಂಗ್ ನ್ಯೂಸ್
02-11-20 10:02 pm Udupi Reporter ಕರಾವಳಿ
ಉಡುಪಿ, ನ. 2: ಶಿರಿಯಾರ ಗ್ರಾಪಂ ವ್ಯಾಪ್ತಿಯ ಕಲ್ಮರ್ಗಿ ಎಂಬಲ್ಲಿನ ರೈಸ್ಮಿಲ್ ಒಂದಕ್ಕೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು ಅಕ್ರಮವಾಗಿ ದಾಸ್ತಾನು ಇರಿಸಿದ್ದ ಅನ್ನಭಾಗ್ಯ ಯೋಜನೆಯ 600ಕ್ಕೂ ಅಧಿಕ ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿದೆ.
ಜಿಲ್ಲೆಯಲ್ಲಿ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡುತ್ತಿರುವ ಕುರಿತು ಮಾಹಿತಿ ಸಂಗ್ರಹಿಸಿದ್ದ ಅಧಿಕಾರಿಗಳು, ದಾಳಿ ನಡೆಸಿದ್ದಾರೆ. ಈ ಅಕ್ಕಿಯನ್ನು ಮನೆ ಮನೆಗಳಿಂದ ಸಂಗ್ರಹಿಸಿ ತಂದು ಇಲ್ಲಿ ದಾಸ್ತಾನು ಇರಿಸಲಾಗಿತ್ತು. ಈ ಅಕ್ಕಿಯನ್ನು ಲಾರಿಗಳಿಗೆ ಲೋಡ್ ಮಾಡಿ ಹಾವೇರಿ ಸೇರಿದಂತೆ ಹೊರಜಿಲ್ಲೆಗಳಿಗೆ ಸಾಗಾಟ ಮಾಡಲು ಯತ್ನ ನಡೆದಿತ್ತು. ದಾಳಿ ವೇಳೆ ಮಿಲ್ ಮಾಲಕ ಪರಾರಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.


ವಶಪಡಿಸಿಕೊಂಡಿರುವ ಅಕ್ಕಿಯ ಒಟ್ಟು ಮೌಲ್ಯ 16.5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಅಕ್ಕಿ ತುಂಬಲು ಬಂದಿದ್ದ ಮೂವರು ಲಾರಿ ಚಾಲಕರು ಮತ್ತು ಕ್ಲೀನರ್ ಸೇರಿದಂತೆ, 6 ಲಾರಿಗಳು, ಎರಡು 407 ಟೆಂಪೋ, ಒಂದು ಟಾಟಾ ಹಾಗೂ ಮಾರುತಿ ಇಕೋ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಕಾರ್ಯಾಚರಣೆಯಲ್ಲಿ ಉಡುಪಿ ಆಹಾರ ಇಲಾಖೆಯ ಉಪನಿರ್ದೇಶಕ ಗಜೇಂದ್ರ ವಿ., ಉಡುಪಿ ಆಹಾರ ನಿರೀಕ್ಷಕಿ ಪಾರ್ವತಿ, ಕುಂದಾಪುರ ನಿರೀಕ್ಷಕ ಸುರೇಶ್, ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಜಿ.ಗೌರಯ್ಯ, ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ಮೊದಲಾದವರು ಹಾಜರಿದ್ದರು.
ಬಡವರ ಅಕ್ಕಿ ಉಳ್ಳವರ ಪಾಲು !
ಜಿಲ್ಲೆಯಲ್ಲಿ ಪಡಿತರವನ್ನು ಅಕ್ರಮವಾಗಿ ದಾಸ್ತಾನು, ಮಾರಾಟ ಮಾಡುವ ಜಾಲ ಸಕ್ರಿಯವಾಗಿದ್ದು, ಕಳೆದ ತಿಂಗಳು ಕುಂದಾಪುರ ತಾಲೂಕಿನಲ್ಲಿ ಈ ಜಾಲವನ್ನು ಪತ್ತೆ ಮಾಡಲಾಗಿತ್ತು. ಈಗ ಅಕ್ಕಿಯನ್ನು ಮಾರಾಟ ಮಾಡುವ ಜಾಲ ಪತ್ತೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಪಡಿತರ ಅಕ್ಕಿಯ ಅಕ್ರಮ ದಾಸ್ತಾನು, ಸಾಗಾಟ ಕುರಿತು ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ತಿಳಿಸಬೇಕು. ಆಗ ಮಾತ್ರ ಇಂತಹ ಜಾಲದ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.
Officials on Monday November 2 seized several quintals of rice that was being sold illegally at Udupi. The rice was part of the ration under the Anna Bhagya scheme
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm