ಬ್ರೇಕಿಂಗ್ ನ್ಯೂಸ್
03-07-23 10:31 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ನೂರಾರು ಬೀದಿ ನಾಯಿಗಳಿಗೆ ಊಟ ಹಾಕುವ ಮಂಗಳೂರಿನ ಶ್ವಾನ ಪ್ರೇಮಿ ರಜನಿ ಶೆಟ್ಟಿ ಅವರ ಮೇಲೆ ನೆರೆಮನೆಯ ನಿವಾಸಿ ಮಹಿಳೆಯೊಬ್ಬರು ಹಲ್ಲೆ ಮಾಡಿದ್ದಾರೆ.
ಮಂಜುಳಾ ಶೆಟ್ಟಿ ಎಂಬ ಮಹಿಳೆ ರಜನಿ ಮೇಲೆ ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿದ್ದಾರೆಂದು ದೂರಲಾಗಿದೆ. ಹಲ್ಲೆಗೀಡಾದ ರಜನಿ ವೆನ್ಲಾಕ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಅಲ್ಲದೆ ಬರ್ಕೆ ಠಾಣೆಗೆ ದೂರು ನೀಡಿದ್ದಾರೆ. ರಜನಿ ಅವರು ತನ್ನ ಬಾಡಿಗೆ ಮನೆಯಲ್ಲಿದ್ದುಕೊಂಡೇ ದಿನವೂ ನೂರಾರು ಬೀದಿ ನಾಯಿಗಳಿಗೆ ಅನ್ನ ಬೇಯಿಸಿ ಹಾಕುತ್ತ ಬಂದಿದ್ದಾರೆ.


ಬೀದಿ ನಾಯಿಗಳು ಮನೆಯ ಸುತ್ತ ಸೇರುತ್ತಿದ್ದ ವಿಚಾರದಲ್ಲಿ ರಜನಿ ಮತ್ತು ಮಂಜುಳಾ ನಡುವೆ ಜಗಳ ಆಗುತ್ತಿತ್ತು. ಇಂದು ಬೆಳಗ್ಗೆ ಮಾತಿಗೆ ಮಾತು ಬೆಳೆದು ಜಗಳ ಆಗಿದೆ ಎನ್ನಲಾಗುತ್ತಿದೆ. ರಜನಿ ಶೆಟ್ಟಿಯವರ ಕೈಗೆ ಗಾಯವಾಗಿದೆ. ಎರಡು ವರ್ಷಗಳಿಂದ ನನ್ನ ಜೊತೆ ಜಗಳ ಮಾಡುತ್ತಿದ್ದಾಳೆ. ನೀರಿನ ಬಳಕೆ ವಿಚಾರದಲ್ಲೂ ಬೈಯುತ್ತಿದ್ದಳು. ಪ್ರತಿ ಬಾರಿ ಎಲ್ಲ ನಾಯಿಗಳಿಗೆ ಮತ್ತು ತನಗೆ ವಿಷ ಹಾಕಿ ಕೊಂದು ಹಾಕುವುದಾಗಿ ಬೆದರಿಸುತ್ತಿದ್ದಳು. ಇವತ್ತು ನನ್ನ ಮೇಲೆ ಕಲ್ಲು ತೂರಿದ್ದಾಳೆ. ನಾನು ನಾಯಿಗಳನ್ನು ಪೋಷಣೆ ಮಾಡುವುದನ್ನು ಬಿಡಬೇಕು ಮತ್ತು ಆ ಸ್ಥಳದಿಂದ ಎದ್ದು ಹೋಗಬೇಕು ಎಂಬುದು ಆಕೆಯ ಬಯಕೆ. ನಾನು 22 ವರ್ಷಗಳಿಂದ ನಾಯಿಗಳ ಜೊತೆಗಿದ್ದು ನನಗೆ ಯಾವುದೇ ಆರೋಗ್ಯ ತೊಂದರೆ ಆಗಿಲ್ಲ ಎಂದು ರಜನಿ ಶೆಟ್ಟಿ ತಿಳಿಸಿದ್ದಾರೆ.
ಹಲ್ಲೆ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ರಜನಿ ತನ್ನ ಮನೆಯಲ್ಲಿ ತೊಂದರೆಗೊಳಗಾದ ಬೀದಿ ನಾಯಿಗಳು, ಬೆಕ್ಕು, ಪಕ್ಷಿಗಳನ್ನು ಆರೈಕೆ ಮಾಡಿ ಸಾಕುತ್ತಿದ್ದಾರೆ.
Mangalore stray animal caretaker Rajani Shetty assaulted by neighbour over looking after dogs.Rajani was hit with a stone by her neighbour Manjula Shetty injuring her in the process. Rajani will file a complaint against Manjula
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm