ಬ್ರೇಕಿಂಗ್ ನ್ಯೂಸ್
03-07-23 10:31 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ನೂರಾರು ಬೀದಿ ನಾಯಿಗಳಿಗೆ ಊಟ ಹಾಕುವ ಮಂಗಳೂರಿನ ಶ್ವಾನ ಪ್ರೇಮಿ ರಜನಿ ಶೆಟ್ಟಿ ಅವರ ಮೇಲೆ ನೆರೆಮನೆಯ ನಿವಾಸಿ ಮಹಿಳೆಯೊಬ್ಬರು ಹಲ್ಲೆ ಮಾಡಿದ್ದಾರೆ.
ಮಂಜುಳಾ ಶೆಟ್ಟಿ ಎಂಬ ಮಹಿಳೆ ರಜನಿ ಮೇಲೆ ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿದ್ದಾರೆಂದು ದೂರಲಾಗಿದೆ. ಹಲ್ಲೆಗೀಡಾದ ರಜನಿ ವೆನ್ಲಾಕ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಅಲ್ಲದೆ ಬರ್ಕೆ ಠಾಣೆಗೆ ದೂರು ನೀಡಿದ್ದಾರೆ. ರಜನಿ ಅವರು ತನ್ನ ಬಾಡಿಗೆ ಮನೆಯಲ್ಲಿದ್ದುಕೊಂಡೇ ದಿನವೂ ನೂರಾರು ಬೀದಿ ನಾಯಿಗಳಿಗೆ ಅನ್ನ ಬೇಯಿಸಿ ಹಾಕುತ್ತ ಬಂದಿದ್ದಾರೆ.


ಬೀದಿ ನಾಯಿಗಳು ಮನೆಯ ಸುತ್ತ ಸೇರುತ್ತಿದ್ದ ವಿಚಾರದಲ್ಲಿ ರಜನಿ ಮತ್ತು ಮಂಜುಳಾ ನಡುವೆ ಜಗಳ ಆಗುತ್ತಿತ್ತು. ಇಂದು ಬೆಳಗ್ಗೆ ಮಾತಿಗೆ ಮಾತು ಬೆಳೆದು ಜಗಳ ಆಗಿದೆ ಎನ್ನಲಾಗುತ್ತಿದೆ. ರಜನಿ ಶೆಟ್ಟಿಯವರ ಕೈಗೆ ಗಾಯವಾಗಿದೆ. ಎರಡು ವರ್ಷಗಳಿಂದ ನನ್ನ ಜೊತೆ ಜಗಳ ಮಾಡುತ್ತಿದ್ದಾಳೆ. ನೀರಿನ ಬಳಕೆ ವಿಚಾರದಲ್ಲೂ ಬೈಯುತ್ತಿದ್ದಳು. ಪ್ರತಿ ಬಾರಿ ಎಲ್ಲ ನಾಯಿಗಳಿಗೆ ಮತ್ತು ತನಗೆ ವಿಷ ಹಾಕಿ ಕೊಂದು ಹಾಕುವುದಾಗಿ ಬೆದರಿಸುತ್ತಿದ್ದಳು. ಇವತ್ತು ನನ್ನ ಮೇಲೆ ಕಲ್ಲು ತೂರಿದ್ದಾಳೆ. ನಾನು ನಾಯಿಗಳನ್ನು ಪೋಷಣೆ ಮಾಡುವುದನ್ನು ಬಿಡಬೇಕು ಮತ್ತು ಆ ಸ್ಥಳದಿಂದ ಎದ್ದು ಹೋಗಬೇಕು ಎಂಬುದು ಆಕೆಯ ಬಯಕೆ. ನಾನು 22 ವರ್ಷಗಳಿಂದ ನಾಯಿಗಳ ಜೊತೆಗಿದ್ದು ನನಗೆ ಯಾವುದೇ ಆರೋಗ್ಯ ತೊಂದರೆ ಆಗಿಲ್ಲ ಎಂದು ರಜನಿ ಶೆಟ್ಟಿ ತಿಳಿಸಿದ್ದಾರೆ.
ಹಲ್ಲೆ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ರಜನಿ ತನ್ನ ಮನೆಯಲ್ಲಿ ತೊಂದರೆಗೊಳಗಾದ ಬೀದಿ ನಾಯಿಗಳು, ಬೆಕ್ಕು, ಪಕ್ಷಿಗಳನ್ನು ಆರೈಕೆ ಮಾಡಿ ಸಾಕುತ್ತಿದ್ದಾರೆ.
Mangalore stray animal caretaker Rajani Shetty assaulted by neighbour over looking after dogs.Rajani was hit with a stone by her neighbour Manjula Shetty injuring her in the process. Rajani will file a complaint against Manjula
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
18-05-26 10:47 pm
HK News Desk
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm