ಬ್ರೇಕಿಂಗ್ ನ್ಯೂಸ್
03-07-23 10:31 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ನೂರಾರು ಬೀದಿ ನಾಯಿಗಳಿಗೆ ಊಟ ಹಾಕುವ ಮಂಗಳೂರಿನ ಶ್ವಾನ ಪ್ರೇಮಿ ರಜನಿ ಶೆಟ್ಟಿ ಅವರ ಮೇಲೆ ನೆರೆಮನೆಯ ನಿವಾಸಿ ಮಹಿಳೆಯೊಬ್ಬರು ಹಲ್ಲೆ ಮಾಡಿದ್ದಾರೆ.
ಮಂಜುಳಾ ಶೆಟ್ಟಿ ಎಂಬ ಮಹಿಳೆ ರಜನಿ ಮೇಲೆ ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿದ್ದಾರೆಂದು ದೂರಲಾಗಿದೆ. ಹಲ್ಲೆಗೀಡಾದ ರಜನಿ ವೆನ್ಲಾಕ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಅಲ್ಲದೆ ಬರ್ಕೆ ಠಾಣೆಗೆ ದೂರು ನೀಡಿದ್ದಾರೆ. ರಜನಿ ಅವರು ತನ್ನ ಬಾಡಿಗೆ ಮನೆಯಲ್ಲಿದ್ದುಕೊಂಡೇ ದಿನವೂ ನೂರಾರು ಬೀದಿ ನಾಯಿಗಳಿಗೆ ಅನ್ನ ಬೇಯಿಸಿ ಹಾಕುತ್ತ ಬಂದಿದ್ದಾರೆ.


ಬೀದಿ ನಾಯಿಗಳು ಮನೆಯ ಸುತ್ತ ಸೇರುತ್ತಿದ್ದ ವಿಚಾರದಲ್ಲಿ ರಜನಿ ಮತ್ತು ಮಂಜುಳಾ ನಡುವೆ ಜಗಳ ಆಗುತ್ತಿತ್ತು. ಇಂದು ಬೆಳಗ್ಗೆ ಮಾತಿಗೆ ಮಾತು ಬೆಳೆದು ಜಗಳ ಆಗಿದೆ ಎನ್ನಲಾಗುತ್ತಿದೆ. ರಜನಿ ಶೆಟ್ಟಿಯವರ ಕೈಗೆ ಗಾಯವಾಗಿದೆ. ಎರಡು ವರ್ಷಗಳಿಂದ ನನ್ನ ಜೊತೆ ಜಗಳ ಮಾಡುತ್ತಿದ್ದಾಳೆ. ನೀರಿನ ಬಳಕೆ ವಿಚಾರದಲ್ಲೂ ಬೈಯುತ್ತಿದ್ದಳು. ಪ್ರತಿ ಬಾರಿ ಎಲ್ಲ ನಾಯಿಗಳಿಗೆ ಮತ್ತು ತನಗೆ ವಿಷ ಹಾಕಿ ಕೊಂದು ಹಾಕುವುದಾಗಿ ಬೆದರಿಸುತ್ತಿದ್ದಳು. ಇವತ್ತು ನನ್ನ ಮೇಲೆ ಕಲ್ಲು ತೂರಿದ್ದಾಳೆ. ನಾನು ನಾಯಿಗಳನ್ನು ಪೋಷಣೆ ಮಾಡುವುದನ್ನು ಬಿಡಬೇಕು ಮತ್ತು ಆ ಸ್ಥಳದಿಂದ ಎದ್ದು ಹೋಗಬೇಕು ಎಂಬುದು ಆಕೆಯ ಬಯಕೆ. ನಾನು 22 ವರ್ಷಗಳಿಂದ ನಾಯಿಗಳ ಜೊತೆಗಿದ್ದು ನನಗೆ ಯಾವುದೇ ಆರೋಗ್ಯ ತೊಂದರೆ ಆಗಿಲ್ಲ ಎಂದು ರಜನಿ ಶೆಟ್ಟಿ ತಿಳಿಸಿದ್ದಾರೆ.
ಹಲ್ಲೆ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ರಜನಿ ತನ್ನ ಮನೆಯಲ್ಲಿ ತೊಂದರೆಗೊಳಗಾದ ಬೀದಿ ನಾಯಿಗಳು, ಬೆಕ್ಕು, ಪಕ್ಷಿಗಳನ್ನು ಆರೈಕೆ ಮಾಡಿ ಸಾಕುತ್ತಿದ್ದಾರೆ.
Mangalore stray animal caretaker Rajani Shetty assaulted by neighbour over looking after dogs.Rajani was hit with a stone by her neighbour Manjula Shetty injuring her in the process. Rajani will file a complaint against Manjula
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm