ಬ್ರೇಕಿಂಗ್ ನ್ಯೂಸ್
05-07-23 11:17 am Mangalore Correspondent ಕರಾವಳಿ
ಉಳ್ಳಾಲ, ಜು.5: ಬಿರುಗಾಳಿಗೆ ವಿದ್ಯುತ್ ಕಂಬದ ತಂತಿಗಳು ಪರಸ್ಪರ ಸ್ಪರ್ಶಿಸಿ ಟ್ರಿಪ್ ಆಗಿ ಸ್ಥಳೀಯರಿಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು. ಸ್ಥಳಕ್ಕೆ ಬಂದ ಮೆಸ್ಕಾಂ ಪವರ್ ಮೆನ್ ನೆರೆ ನೀರಲ್ಲಿ ಮುಳುಗಿ ಕಂಬವನ್ನೇರಿ ತುರ್ತು ದುರಸ್ತಿ ಕಾರ್ಯ ನಡೆಸಿದ ವೀಡಿಯೋ ವೈರಲ್ ಆಗಿದೆ.
ನಿನ್ನೆ ದೇರಳಕಟ್ಟೆಯ ಬೇರಿಕೆ ಎಂಬಲ್ಲಿ ಬಿರುಗಾಳಿ, ಮಳೆಗೆ ವಿದ್ಯುತ್ ಕಂಬದ ತಂತಿಗಳು ಪರಸ್ಪರ ಸ್ಪರ್ಶಿಸಿ ಸ್ಥಳೀಯ 40 ರಷ್ಟು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಈ ಬಗ್ಗೆ ಸ್ಥಳೀಯರು ಮೆಸ್ಕಾಂಗೆ ದೂರು ನೀಡಿದ್ದರು. ಸ್ಥಳಕ್ಕೆ ಮೆಸ್ಕಾಂ ಪವರ್ ಮೆನ್ ವಸಂತ್ ಎಂಬವರು ಭೇಟಿ ನೀಡಿದ್ದಾರೆ. ಆದರೆ ಟ್ರಿಪ್ ಆಗಿದ್ದ ವಿದ್ಯುತ್ ಕಂಬವು ನೆರೆ ನೀರಿಂದ ಸಂಪೂರ್ಣ ಜಲಾವೃತಗೊಂಡಿತ್ತು. ನೆರೆ ನೀರನ್ನ ಲೆಕ್ಕಿಸದ ವಸಂತ್ ಅವರು ಸ್ಥಳೀಯರೋರ್ವರ ಮಾರ್ಗದರ್ಶನದಿಂದ ನೀರಲ್ಲಿ ಮುಳುಗಿ ಒದ್ದೆಯಾಗಿಯೇ ಸಾಗಿ ಕಂಬವನ್ನೇರಿ ತುರ್ತು ದುರಸ್ತಿ ಕಾರ್ಯ ನಡೆಸಿ ಸ್ಥಳೀಯರ ಪ್ರಶಂಸೆಗೆ ಪಾತ್ರರಾಗಿದ್ದಾರೆ.


ವಿದ್ಯುತ್ ಸರಬರಾಜಲ್ಲಿ ಸ್ವಲ್ಪ ವ್ಯತ್ಯಯವಾದರೂ ಮೆಸ್ಕಾಂ ಸಿಬ್ಬಂದಿಗಳಿಗೆ ಹಿಡಿ ಶಾಪ ಹಾಕುವವರೇ ಹೆಚ್ಚು. ಆದರೆ ಬಿರು ಗಾಳಿ, ಮಳೆ, ಉರಿ ಬಿಸಿಲನ್ನೂ ಲೆಕ್ಕಿಸದೆ ತುರ್ತು ಕಾರ್ಯಾಚರಣೆ ಮಾಡಿ ಜನರಿಗೆ ವಿದ್ಯುತ್ ಸಂಪರ್ಕ ಒದಗಿಸುವ ಇಂತಹ ಪವರ್ ಮೆನ್ ಗಳನ್ನು ಮೆಚ್ಚಲೇ ಬೇಕು.
MESCOM line man gets into flooded water to fix power issue, pics goes viral at Derlakatte in Mangalore
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm